ಹಾರ್ದಿಕ್ ವಿರುದ್ಧ ತೊಡೆ ತಟ್ಟಿದ ಎನ್ಆರ್ಐ ಪಟೇಲರಿಂದ ಬಿಜೆಪಿಗೆ ಬೆಂಬಲ
ಅಹಮದಾಬಾದ್, ನವೆಂಬರ್ 25: ಹಾರ್ದಿಕ್ ಪಟೇಲ್ ವಿರುದ್ಧ ಅನಿವಾಸಿ ಭಾರತೀಯ ಪಟೇಲರು ತೊಡೆ ತಟ್ಟಿದ್ದಾರೆ. ಹಾರ್ದಿಕ್ ಗೆ ವಿರುದ್ಧವಾಗಿ ಬಿಜೆಪಿ ಪರ ಪ್ರಚಾರಕ್ಕೆ ಎನ್ಆರ್ಐ ಪಟೇಲರು ಇಳಿದಿದ್ದಾರೆ.
150ಕ್ಕೂ ಹೆಚ್ಚು ವಿದೇಶಗಳಲ್ಲಿರುವ ಎನ್ಆರ್ಐಗಳು ತಮ್ಮ ರಾಜ್ಯ ಗುಜರಾತ್ ಗೆ ವಾಪಸ್ ಬಂದು ನರೇಂದ್ರ ಮೋದಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
"ನಾವು ಬಿಜೆಪಿಯ ಗೆಳೆಯರು. ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಜಗತ್ತು ನಮ್ಮತ್ತ ನೋಡುವ ದೃಷ್ಟಿ ಹೇಗೆ ಬದಲಾಯಿತು ಎಂಬುದನ್ನು ಜನರಿಗೆ ತಿಳಿಸಲು ನಾವು ಬಂದಿದ್ದೇವೆ," ಎಂದು ಅಮೆರಿಕಾದ ಉದ್ಯಮಿ ಬಾಬು ಭಾಯ್ ಲಾಲ್ ಪಟೇಲ್ ಹೇಳಿದ್ದಾರೆ.

ಗುಜರಾತ್ ನ ಶೇಕಡಾ 14ರಷ್ಟಿರುವ ಪಟೇಲರು ಕಳೆದ ಎರಡು ದಶಕಗಳಿಂದ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಇದೀಗ ಎನ್ಆರ್ಐ ಪಟೇಲರನ್ನೂ ಬಿಜೆಪಿ ತನ್ನತ್ತ ಸೆಳೆದಿದೆ. ಆಸ್ಟ್ರೇಲಿಯಾ ಮತ್ತು ಅಮೆರಿಕಾದಲ್ಲಿರುವ ಗುಜರಾತಿಗರು ವಾರಕ್ಕೂ ಮೊದಲೇ ರಾಜ್ಯಕ್ಕೆ ಬಂದು ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ.
ಈ ಎನ್ಆರ್ಐ ಪಟೇಲರು ಹಾರ್ದಿಕ್ ಪಟೇಲ್ ರನ್ನು ಗಂಭೀರವಾಗಿ ಪರಿಗಣಿಸಿಲ್ಲ. "ಹಾರ್ದಿಕ್ ಪಟೇಲ್ ಗೆ ಸಿದ್ಧಾಂತವೇ ಇಲ್ಲ. ಹಿನ್ನಲೆಯೂ ಇಲ್ಲ. ಆತ ಓರ್ವ ಇತಿಹಾಸದ ಜ್ಞಾನವೂ ಇಲ್ಲದ ಯುವಕ. ಆತನನ್ನು ಹೇಗೆ ನಂಬುವುದು?" ಎಂದು ಫ್ಲೋರಿಡಾದಲ್ಲಿ ನೆಲೆಸಿರುವ ವೈದ್ಯ ವಿಪುಲ್ ಪಟೇಲ್ ಹೇಳಿದ್ದಾರೆ.
"ಅವರ ತಂದೆ ಕಾಂಗ್ರೆಸ್ ಕಾರ್ಯಕರ್ತರು. ಹಾರ್ದಿಕ್ ಪಟೇಲ್ ಕಾಂಗ್ರೆಸ್ ಜತೆ ನಂತರ ಎಎಪಿ ಜತೆ ಸಂಪರ್ಕದಲ್ಲಿದ್ದರು. ಈಗ ಅವರದ್ದೇ ಸ್ವಂತ ಪಕ್ಷ 'ಪಾಸ್' ಹೊಂದಿದ್ದಾರೆ," ಎಂಬುದಾಗಿ ಸೂರತ್ ಮೂಲದ ಮತ್ತೋರ್ವ ಎನ್ಆರ್ಐ ಸುರೇಶ್ ಹೇಳಿದ್ದಾರೆ.
ಇವರಲ್ಲದೆ ಗುಜರಾತಿಗೆ ಬರಲಾಗದ ಎನ್ಆರ್ಐಗಳ ಸಹಾಯವನ್ನೂ ಬಿಜೆಪಿ ಗಳಿಸಿದೆ. ಈ ಜನರು ವಿದೇಶದಲ್ಲಿದ್ದುಕೊಂಡೇ ಗೂಗಲ್ ಹ್ಯಾಂಗ್ ಔಟ್ಸ್, ಕಾನ್ಫರೆನ್ಸ್ ಮೂಲಕ ಜನರನ್ನು ಸೆಳೆಯುವ ಕೆಲಸದಲ್ಲಿ ನಿರತರಾಗಿದ್ದಾರೆ.
ಗುಜರಾತಿನಲ್ಲಿ ಡಿಸೆಂಬರ್ 9 ಮತ್ತು 14ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications