ಪತ್ನಿಗೆ ಕಿರುಕುಳ ನೀಡುವ ಎನ್ಆರ್ ಐಗಳ ಪಾಸ್ ಪೋರ್ಟ್ ರದ್ದು?
ಭಾರತೀಯ ಮೂಲದ ಪತ್ನಿ ಪೀಡಕ ಎನ್ಆರ್ ಐಗಳ ಪಾಸ್ ಪೋರ್ಟ್ ರದ್ದತಿಗೆ ಸಮಿತಿ ಆಗ್ರಹ. ಎನ್ಆರ್ ಐಗಳ ಮದುವೆ ವಿಚಾರವಾಗಿ ಶಿಫಾರಸು ಮಾಡಲು ರಚಿಸಲಾಗಿರುವ ಸಮಿತಿ.
ನವದೆಹಲಿ, ಸೆಪ್ಟೆಂಬರ್ 18: ಭಾರತೀಯ ಯುವತಿಯನ್ನು ಮದುವೆಯಾಗುವ ಅನಿವಾಸಿ ಭಾರತೀಯರು, ಮದುವೆಯಾದ ನಂತರ ತಮ್ಮ ಪತ್ನಿಗೆ ಕಿರುಕುಳ ನೀಡಿದರೆ ಅಥವಾ ತ್ಯಜಿಸಿದರೆ ಅಂಥವರ ಪಾಸ್ ಪೋರ್ಟ್ ರದ್ದು ಮಾಡುವ ಮಹತ್ವದ ಶಿಫಾರಸೊಂದನ್ನು ಕೇಂದ್ರ ಸರ್ಕಾರದ ಅಂತರ ಸಚಿವಾಲಯಗಳ ಸಮಿತಿಯೊಂದು ವಿದೇಶಾಂಗ ಇಲಾಖೆಗೆ ಸಲ್ಲಿಸಿದೆ.
ಭಾರತದಲ್ಲಿರುವ ಯುವತಿಯನ್ನು ಮದುವೆಯಾಗಿ ತಾವಿರುವ ದೇಶಕ್ಕೆ ಕರೆದುಕೊಂಡು ಹೋಗುವ ಅನಿವಾಸಿ ಭಾರತೀಯರು, ಅಲ್ಲಿ ಆ ಯುವತಿಯರಿಗೆ ಕಿರುಕುಳ ಕೊಡುವಂಥ ಪ್ರಕರಣಗಳು ನಡೆದಿರುವುದರಿಂದ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಮಿತಿಯು ಆಗ್ರಹಿಸಿದೆ.

ತಮ್ಮ ವಿರುದ್ಧ ಗೃಹದೌರ್ಜನ್ಯ ನಡೆಯುತ್ತಿರುವ ಬಗ್ಗೆ ಎನ್ಆರ್ ಐ ಪತ್ನಿಯರು ಕೇಂದ್ರ ವಿದೇಶಾಂಗ ಇಲಾಖೆಯ ಗಮನಕ್ಕೆ ಬಂದರೆ, ಅಂಥ ಪ್ರಕರಣಗಳಲ್ಲಿ ಪ್ರಕರಣಗಳು ನಡೆದಿರುವ ದೇಶಗಳೊಂದಿಗೆ ಭಾರತ ಹೊಂದಿರುವ ರಾಜತಾಂತ್ರಿಕ ಸಂಬಂಧದ ನೆರವನ್ನು ಪಡೆದು ಇಂಥ ಪ್ರಕರಣಗಳನ್ನು ಸೂಕ್ತವಾಗಿ ನಿಭಾಯಿಸಬೇಕೆಂದೂ ಸಮಿತಿಯು ಶಿಫಾರಸು ಮಾಡಿದೆ.
ಕಳೆದ ಮೇ ತಿಂಗಳಲ್ಲೇ, ಇಂಥದ್ದೊಂದು ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿತ್ತು. ಎನ್ಆರ್ ಐಗಳ ಮದುವೆಗಳು ಹಾಗೂ ವಿವಾಹದ ನಂತರ ಉದ್ಭವವಾಗುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲವಾರು ಶಿಫಾರಸುಗಳನ್ನು ಮಾಡಬೇಕೆಂದು ಸಮಿತಿಗೆ ಕೇಂದ್ರ ಸರ್ಕಾರ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ, ಸಮಿತಿಯು ಕೆಲ ಶಿಫಾರಸುಗಳನ್ನು ಈಗಾಗಲೇ ಕೇಂದ್ರ ವಿದೇಶಾಂಗ ಇಲಾಖೆಗೆ ಕೊಟ್ಟಿದೆ.
ಅದರಂತೆ, ಎನ್ಆರ್ ಐಗಳು ಭಾರತದಲ್ಲಿ ಆಗುವ ವಿವಾಹಗಳಿಗೆ ಆಧಾರ್ ಕಡ್ಡಾಯಗೊಳಿಸುವ ಶಿಫಾಸರನ್ನು ಸರ್ಕಾರದ ಮುಂದಿಟ್ಟಿರುವ ಸಮಿತಿಯು ಈಗ ಎನ್ ಆರ್ ಐಗಳಿಂದ ಅವರ ಭಾರತೀಯ ಪತ್ನಿಯರಿಗೆ ಆಗುವ ಅನ್ಯಾಯಗಳನ್ನು ಸರಿಪಡಿಸಬೇಕೆಂದು ಅದು ಕೋರಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications