ಎನ್ನಾರೈಗಳಿಗೆ ಮತದಾನದ ಹಕ್ಕು, ಮೋದಿ ಸರ್ಕಾರದ ವಿಕ್ರಮ
ನವದೆಹಲಿ, ಜ.12: ಸುಪ್ರೀಂಕೋರ್ಟ್ ನಿರ್ದೇಶನದಂತೆ ಅನಿವಾಸಿ ಭಾರತೀಯ(ಎನ್ನಾರೈ)ರಿಗೆ ಮತದಾನದ ಹಕ್ಕನ್ನು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಘೋಷಿಸಿದೆ. ಕೇಂದ್ರ ಚುನಾವಣೆ ಆಯೋಗ ಕೂಡಾ ಈ ಬಗ್ಗೆ ಶಿಫಾರಸ್ಸು ಮಾಡಿತ್ತು.
ಅನಿವಾಸಿ ಭಾರತೀಯರು ಇನ್ಮುಂದೆ ವಿದೇಶದಲ್ಲಿದ್ದುಕೊಂಡೇ ಭಾರತದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾಯಿಸಬಹುದು. ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಇ-ಬ್ಯಾಲೆಟ್ ವ್ಯವಸ್ಥೆ ಕಲ್ಪಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗ ಮಾಡಿದ್ದ ಶಿಫಾರಸನ್ನು ಒಪ್ಪಿಕೊಂಡು ಇ ಬ್ಯಾಲೆಟ್ ಬಳಸುವುದಾಗಿ ಸುಪ್ರೀಂಕೋರ್ಟಿಗೆ ಕೇಂದ್ರ ಸರ್ಕಾರ ಮಾಹಿತಿ ಸಲ್ಲಿಸಿದೆ.
ಕೇಂದ್ರ ಸರ್ಕಾರದ ಮಾಹಿತಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ಮುಂದಿನ 8 ವಾರಗಳಲ್ಲಿ ಎನ್ನಾರೈಗಳೀಗೆ ಇ-ವೋಟಿಂಗ್ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. [ಅನಿವಾಸಿ ಭಾರತೀಯರಿಗೆ ನರೇಂದ್ರ ಮೋದಿ ಅಭಯ]

ಭಾರತದಲ್ಲಿ ನಡೆಯಲಿರುವ ಎಲ್ಲ ಹಂತದ ಚುನಾವಣೆಗಳಲ್ಲೂ ಎನ್ನಾರೈಗಳು ಮತದಾನ ಮಾಡುವ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಚುನಾವಣಾ ಆಯೋಗ ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಲು ಮುಂದಾಗಿದೆ.
ಈಗಾಗಲೇ 2010ರಲ್ಲಿ ಜನಪ್ರತಿನಿಧಿ ಹಕ್ಕು ಕಾಯ್ದೆಗೆ ಸಂಸತ್ತಿನ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಭಾರತದ ಎಲ್ಲ ಚುನಾವಣೆಗಳಲ್ಲೂ ಮತದಾನದ ಹಕ್ಕು ನೀಡಲು ಈ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಈ ಹೊಸ ವ್ಯವಸ್ಥೆಯಿಂದ ವಿವಿಧ ದೇಶಗಳಲ್ಲಿರುವ ಸುಮಾರು 11 ಮಿಲಿಯನ್ ಭಾರತೀಯರು ಮತದಾನದ ಹಕ್ಕನ್ನು ಪಡೆಯಲಿದ್ದಾರೆ.
ಕಳೆದ ತಿಂಗಳು ಪ್ರವಾಸಿ ಭಾರತ್ ದಿವಸ್ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅನಿವಾಸಿ ಭಾರತೀಯರಿಗೆ ಜ.15ರ ನಂತರ ಜಾರಿಗೆ ಬರುವಂತೆ ಮತದಾನದ ಹಕ್ಕು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದರು.
ಆಯಾ ದೇಶಗಳಲ್ಲಿರುವ ರಾಯಭಾರಿ ಕಚೇರಿಗಳಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸುವುದು, ಇ ಪೋಸ್ಟಲ್ ಬ್ಯಾಲೆಟ್, ಇ ವೋಟಿಂಗ್ ಸೇರಿದಂತೆ ಹಲವಾರು ಸಾಧ್ಯತೆಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ವಿಎಸ್ ಸಂಪತ್ ಅವರು ವಿದೇಶಾಂಗ ಇಲಾಖೆ ಜೊತೆ ಸಭೆ ನಡೆಸಿ ಚರ್ಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications