ಎನ್ನಾರೈಗಳಿಗೆ ಮತದಾನದ ಹಕ್ಕು, ಮೋದಿ ಸರ್ಕಾರದ ವಿಕ್ರಮ
ನವದೆಹಲಿ, ಜ.12: ಸುಪ್ರೀಂಕೋರ್ಟ್ ನಿರ್ದೇಶನದಂತೆ ಅನಿವಾಸಿ ಭಾರತೀಯ(ಎನ್ನಾರೈ)ರಿಗೆ ಮತದಾನದ ಹಕ್ಕನ್ನು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಘೋಷಿಸಿದೆ. ಕೇಂದ್ರ ಚುನಾವಣೆ ಆಯೋಗ ಕೂಡಾ ಈ ಬಗ್ಗೆ ಶಿಫಾರಸ್ಸು ಮಾಡಿತ್ತು.
ಅನಿವಾಸಿ ಭಾರತೀಯರು ಇನ್ಮುಂದೆ ವಿದೇಶದಲ್ಲಿದ್ದುಕೊಂಡೇ ಭಾರತದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾಯಿಸಬಹುದು. ಇದಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಇ-ಬ್ಯಾಲೆಟ್ ವ್ಯವಸ್ಥೆ ಕಲ್ಪಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗ ಮಾಡಿದ್ದ ಶಿಫಾರಸನ್ನು ಒಪ್ಪಿಕೊಂಡು ಇ ಬ್ಯಾಲೆಟ್ ಬಳಸುವುದಾಗಿ ಸುಪ್ರೀಂಕೋರ್ಟಿಗೆ ಕೇಂದ್ರ ಸರ್ಕಾರ ಮಾಹಿತಿ ಸಲ್ಲಿಸಿದೆ.
ಕೇಂದ್ರ ಸರ್ಕಾರದ ಮಾಹಿತಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ಮುಂದಿನ 8 ವಾರಗಳಲ್ಲಿ ಎನ್ನಾರೈಗಳೀಗೆ ಇ-ವೋಟಿಂಗ್ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. [ಅನಿವಾಸಿ ಭಾರತೀಯರಿಗೆ ನರೇಂದ್ರ ಮೋದಿ ಅಭಯ]

ಭಾರತದಲ್ಲಿ ನಡೆಯಲಿರುವ ಎಲ್ಲ ಹಂತದ ಚುನಾವಣೆಗಳಲ್ಲೂ ಎನ್ನಾರೈಗಳು ಮತದಾನ ಮಾಡುವ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಚುನಾವಣಾ ಆಯೋಗ ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಲು ಮುಂದಾಗಿದೆ.
ಈಗಾಗಲೇ 2010ರಲ್ಲಿ ಜನಪ್ರತಿನಿಧಿ ಹಕ್ಕು ಕಾಯ್ದೆಗೆ ಸಂಸತ್ತಿನ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಭಾರತದ ಎಲ್ಲ ಚುನಾವಣೆಗಳಲ್ಲೂ ಮತದಾನದ ಹಕ್ಕು ನೀಡಲು ಈ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಈ ಹೊಸ ವ್ಯವಸ್ಥೆಯಿಂದ ವಿವಿಧ ದೇಶಗಳಲ್ಲಿರುವ ಸುಮಾರು 11 ಮಿಲಿಯನ್ ಭಾರತೀಯರು ಮತದಾನದ ಹಕ್ಕನ್ನು ಪಡೆಯಲಿದ್ದಾರೆ.
ಕಳೆದ ತಿಂಗಳು ಪ್ರವಾಸಿ ಭಾರತ್ ದಿವಸ್ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅನಿವಾಸಿ ಭಾರತೀಯರಿಗೆ ಜ.15ರ ನಂತರ ಜಾರಿಗೆ ಬರುವಂತೆ ಮತದಾನದ ಹಕ್ಕು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದರು.
ಆಯಾ ದೇಶಗಳಲ್ಲಿರುವ ರಾಯಭಾರಿ ಕಚೇರಿಗಳಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸುವುದು, ಇ ಪೋಸ್ಟಲ್ ಬ್ಯಾಲೆಟ್, ಇ ವೋಟಿಂಗ್ ಸೇರಿದಂತೆ ಹಲವಾರು ಸಾಧ್ಯತೆಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ವಿಎಸ್ ಸಂಪತ್ ಅವರು ವಿದೇಶಾಂಗ ಇಲಾಖೆ ಜೊತೆ ಸಭೆ ನಡೆಸಿ ಚರ್ಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications