ಭಾರತದ ಮೊದಲ ರೈಲ್ವೆ ವಿಶ್ವವಿದ್ಯಾಲಯ ಗುಜರಾತ್ ನಲ್ಲಿ
ಭಾರತೀಯ ರೈಲ್ವೆಗೆ ಇದೊಳ್ಳೆ ಸುದ್ದಿ. ಅಷ್ಟೇ ಅಲ್ಲ, ದೇಶಕ್ಕೇ ಒಂದೊಳ್ಳೆ ಸುದ್ದಿ. ನ್ಯಾಷನಲ್ ರೈಲ್ ಅಂಡ್ ಟ್ರಾನ್ಸ್ ಪೋರ್ಟ್ ಯೂನಿವರ್ಸಿಟಿ (ಎನ್ ಆರ್ ಟಿಯು) ಆರಂಭಿಸಲು ಸಂಪುಟದಿಂದ ಒಪ್ಪಿಗೆ ಸಿಕ್ಕಿದೆ.
ರೈಲ್ವೆ ಸಚಿವಾಲಯದ ಮಾಹಿತಿ ಪ್ರಕಾರ, ಗುಜರಾತ್ ನ ವಡೋದರಾದಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿದೆ. ಭಾರತೀಯ ರೈಲ್ವೆಗೆ ಬೇಕಾದ ಮಾನವ ಸಂಪನ್ಮೂಲದ ತಯಾರಿ ಇಲ್ಲಿ ಮಾಡಲಾಗುತ್ತದೆ. "ದೇಶದ ಮೊದಲ ಎನ್ ಆರ್ ಟಿಯು ಸ್ಥಾಪನೆಯಿಂದ ಭರತೀಯ ರೈಲ್ವೆ ಹಾಗು ಸಂಚಾರ ವಲಯದಲ್ಲೇ ಬದಲಾವಣೆ ಆಗಲಿದೆ" ಎಂದು ರೈಲ್ವೆ ಸಚಿವಾಲಯ ಹೇಳಿದೆ.
ಸಚಿವ ಪಿಯೂಷ್ ಗೋಯಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವದ ಫಲವಾದ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಸ್ಟಾರ್ಟ್ ಅಪ್ ಇಂಡಿಯಾದ ಅಡಿಯಲ್ಲಿ ಗುಜರಾತ್ ನ ವಡೋದರಾದಲ್ಲಿ ರಾಷ್ತ್ರೀಯ ರೈಲು ಹಾಗೂ ಸಂಚಾರ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಲಾಗುತ್ತಿದೆ ಎಂದಿದ್ದಾರೆ.

ಸ್ವತಃ ನರೇಂದ್ರ ಮೋದಿ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ಆಸಕ್ತಿ ವಹಿಸಿದ್ದಾರೆ. ಮೂರು ವರ್ಷದಿಂದ ಬಾಕಿಯಿದ್ದ ಯೋಜನೆಗೆ ಸಂಪುಟದ ಒಪ್ಪಿಗೆ ಸಿಕ್ಕಿದೆ. ಇದೀಗ ವಿಶ್ವವಿದ್ಯಾಲಯದ ಕನಸು ನನಸಾಗಿದೆ. ಮುಂದಿನ ವರ್ಷದ ಜೂನ್ ನಿಂದ ಮೊದಲನೇ ಬ್ಯಾಚ್ ನ ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದಾರೆ.
ಇಂಥ ಉದ್ದೇಶದಕ್ಕೆ ಆರಂಭವಾದ ಮೊದಲ ವಿ.ವಿ. ಇದು. ಇದರಿಂದ ಉತ್ಪಾದಕತೆ ಹೆಚ್ಚುತ್ತದೆ ಎಂದು ಸರಕಾರಿ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ. ಈ ಪ್ರಸ್ತಾವಿನ ವಿ.ವಿಯನ್ನು ರೈಲ್ವೆ ಸಚಿವಾಲಯವೇ ನಡೆಸಲಿದೆ. ವಡೋದರದಲ್ಲಿರುವ ನ್ಯಾಷನಲ್ ಅಕಾಡೆಮಿ ಆಫ್ ಇಂಡಿಯನ್ ರೈಲ್ವೆಯ ಮೂಲ ಸೌಕರ್ಯವನ್ನೇ ಈ ವಿಶ್ವವಿದ್ಯಾಲಯಕ್ಕೆ ಬಳಸಲಾಗುತ್ತದೆ.
ಪೂರ್ಣ ಪ್ರಮಾಣದಲ್ಲಿ ಸಿದ್ಧವಾದ ನಂತರ ಈ ವಿ.ವಿಯಲ್ಲಿ ಮೂರು ಸಾವಿರ ಪೂರ್ಣಾವಧಿ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಹೊಸ ವಿ.ವಿಗೆ ಬೇಕಾದ ಎಲ್ಲ ಹಣಕಾಸಿನ ನೆರವು ಸಚಿವಾಲಯದಿಂದಲೇ ಬರುತ್ತದೆ ಎಂದು ಸರಕಾರದಿಂದ ತಿಳಿಸಲಾಗಿದೆ.
ಉಪಗ್ರಹ ಆಧಾರಿತ ಟ್ರ್ಯಾಕಿಂಗ್, ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಬಳಸಿ ಕೆಲಸದ ಉತ್ಪಾದಕತೆ ಹೇಗೆ ಹೆಚ್ಚಿಸಬಹುದು ಎಂಬುದನ್ನು ಕಲಿಸಲಾಗುತ್ತದೆ ಎಂದು ಮಾಹಿತಿ ದೊರೆತಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications