'ಶೋಭಾ ಯಾತ್ರೆ' ಮುನ್ಸೂಚನೆ: ಬಿಗಿ ಪೊಲೀಸ್ ಬಂದೋಬಸ್ತ್!
ನೂಹ್: ಇತ್ತೀಚೆಗಷ್ಟೇ ಹಿಂಸಾಚಾರದ ಕೆಂಡದಿಂದ ಹೊರಗೆ ಬಂದಿರುವ ಹರಿಯಾಣದಲ್ಲಿ ಮತ್ತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ನೂಹ್ನಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಿದ್ದು, ಎಲ್ಲೆಲ್ಲೂ ಹದ್ದಿನ ಕಣ್ಣಿಡಲಾಗಿದೆ. ಹಾಗಾದರೆ ದಿಢೀರ್ ನೂಹ್ನಲ್ಲಿ ಭದ್ರತೆ ಹೆಚ್ಚಿಸಿದ್ದು ಯಾಕೆ? ಹರಿಯಾಣದಲ್ಲಿ ಪರಿಸ್ಥಿತಿ ಈಗ ಹೇಗಿದೆ? ಬನ್ನಿ ತಿಳಿಯೋಣ.
ಅಷ್ಟಕ್ಕೂ ಹರಿಯಾಣದ ನೂಹ್ನಲ್ಲಿ ಸಮುದಾಯಗಳ ಘರ್ಷಣೆಯಿಂದ ಜುಲೈನಲ್ಲಿ ಅರ್ಧಕ್ಕೆ ನಿಂತಿದ್ದ, 'ಬ್ರಿಜ್ ಮಂಡಲ್ ಶೋಭಾ ಯಾತ್ರೆ' ಮತ್ತೆ ಶುರುವಾಗುವ ಮುನ್ಸೂಚನೆ ಸಿಕ್ಕಿದೆ. 'ಬ್ರಿಜ್ ಮಂಡಲ್ ಶೋಭಾ ಯಾತ್ರೆ' ಮತ್ತೆ ಆರಂಭಿಸುವ ಕುರಿತು ಹಿಂದೂ ಸಂಘಟನೆಗಳು ತಿಳಿಸಿವೆ. ಇದೇ ಕಾರಣಕ್ಕೆ ಅಲರ್ಟ್ ಆಗಿ ಭದ್ರತೆಯನ್ನ ಹೆಚ್ಚಿಸಿದೆ ಸ್ಥಳೀಯ ಆಡಳಿತ. ಈ ಮಧ್ಯೆ ಅಧಿಕಾರಿಗಳು ಅನುಮತಿ ನೀಡದಿದ್ರೂ ಯಾತ್ರೆ ನಡೆಸಲು ಆಯೋಜಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ನೂಹ್ ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸೂಕ್ಷ್ಮ ಪರಿಸ್ಥಿತಿ ನಿಭಾಯಿಸುವುದೇ ಕಷ್ಟ
ಹರಿಯಾಣದಲ್ಲಿ ಹೊತ್ತಿದ್ದ ಕೋಮು ದ್ವೇಷದ ಕಿಚ್ಚು ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿತ್ತು. ಹೀಗಾಗಿ ಪರಿಸ್ಥಿತಿ ಹಿಡಿತಕ್ಕೆ ತರುವಲ್ಲಿ ಭದ್ರತಾ ಪಡೆಗಳು ಕೂಡ ಪರದಾಡಿ ಹೋದವು. ಹೀಗಾಗಿ ಮತ್ತೆ ಯಾತ್ರೆ ಆರಂಭಿಸಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಜೊತೆಗೆ ಸೆಪ್ಟೆಂಬರ್ 3 ರಿಂದ 7 ರವರೆಗೆ ನೂಹ್ನಲ್ಲಿ ಜಿ20 ಶೆರ್ಪಾ ಗುಂಪುಗಳ ಸಭೆ ಇರುವ ಕಾರಣಕ್ಕೂ ಯಾತ್ರೆ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ ಶತ್ರುಜಿತ್ ಕಪೂರ್ ಸ್ಪಷ್ಟನೆ ನೀಡಿದ್ದಾರೆ. ಮತ್ತೊಮ್ಮೆ ಪರಿಸ್ಥಿತಿ ಕೈಮೀರದಂತೆ ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗಿದೆ.
ಹೊರಗಿನಿಂದ ಯಾರೂ ಬರುವಂತಿಲ್ಲ
ಇನ್ನು ಅರೆಸೇನಾ ಪಡೆ ಮತ್ತು ಭದ್ರತಾ ಸಿಬ್ಬಂದಿಗೆ ರಾಜ್ಯದ ಒಳಗೆ ಮತ್ತು ಜಿಲ್ಲೆಗಳ ಗಡಿಗಳಲ್ಲಿ ಸೂಕ್ತ ಭದ್ರತೆ ಒದಗಿಸಿ, ಪರಿಸ್ಥಿತಿ ಗಮನಿಸಲು ಸೂಚನೆ ನೀಡಲಾಗಿದೆ. ಇಷ್ಟು ಮಾತ್ರವಲ್ಲ, ಆಗಸ್ಟ್ 26 ರಿಂದ 28 ರವರೆಗೂ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿ ಆದೇಶ ಕೂಡ ಹೊರಡಿಸಲಾಗಿದೆ. ಅಲ್ಲದೆ ನೂಹ್ನಲ್ಲಿ 1,900 ಹರಿಯಾಣ ಪೊಲೀಸ್ ಸಿಬ್ಬಂದಿ ಮತ್ತು 24 ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲೆಗೆ ಪ್ರವೇಶಿಸುವ ಎಲ್ಲಾ ದಾರಿ ಬಂದ್ ಮಾಡಲಾಗಿದ್ದು, ಹೊರಗಿನಿಂದ ಯಾರೂ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.

ಎಲ್ಲೆಲ್ಲೂ ಬಂದ್ ವಾತಾವರಣ ನಿರ್ಮಾಣ
ಒಟ್ನಲ್ಲಿ 'ಬ್ರಿಜ್ ಮಂಡಲ್ ಶೋಭಾ ಯಾತ್ರೆ'ಯ ಪುನಾರಂಭ ಮುನ್ಸೂಚನೆ ಹಿನ್ನೆಲೆಯಲ್ಲಿ, ಹಲವು ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಅಲ್ದೆ ಸ್ಕೂಲ್, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆ & ಬ್ಯಾಂಕ್ಗಳನ್ನು ಬಂದ್ ಮಾಡಲಾಗಿದೆ. ಎಸ್ಎಂಎಸ್ ಸೇವೆ ನಿರ್ಬಂಧಿಸಿದೆ ಸ್ಥಳೀಯ ಆಡಳಿತ. ಈ ಮೂಲಕ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದ್ದು, ಒಟ್ಟು 4 ಅಥವಾ ಹೆಚ್ಚಿನ ಜನರು ಗುಂಪು ಸೇರುವಂತಿಲ್ಲ ಎಂದು ಖಡಕ್ ಆದೇಶ ಹೊರಡಿಸಿದೆ. ಇದು ಸ್ಥಳೀಯರಲ್ಲಿ ಮತ್ತೆ ಚಿಂತೆ ತಂದಿದ್ದು, ಸೂಕ್ಷ್ಮವಾಗಿರುವ ಸ್ಥಿತಿ ನಿಭಾಯಿಸಲು ಪೊಲೀಸರು ಹಾಗೂ ಅರೆಸೇನಾ ಪಡೆ ಯೋಧರು ಸಜ್ಜಾಗಿದ್ದಾರೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications