ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂಪುರ್ ಶರ್ಮಾ ಫೋಟೋ ಅಪ್‌ಲೋಡ್: ಜೀವ ಬೆದರಿಕೆ- 3 ಬಂಧನ

|
Google Oneindia Kannada News

ಸೂರತ್ ಜುಲೈ 16: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಗುಜರಾತ್‌ನ ಸೂರತ್ ನಗರದಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್ ನಡೆಸುತ್ತಿರುವ ದೂರುದಾರರು ಶರ್ಮಾ ಅವರ ಫೋಟೋವನ್ನು ಪಾರ್ಕ್‌ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಅಪ್‌ಲೋಡ್ ಮಾಡಿದ ನಂತರ ಏಳು ಜನರಿಂದ ಕೊಲೆ ಬೆದರಿಕೆಗಳು ಬಂದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತರ ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಉಮ್ರಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೆ ಆರ್ ಚೌಧರಿ ತಿಳಿಸಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಮತ್ತು ಅಲಿಯಾ ಮೊಹಮ್ಮದ್ ಎಂಬ ಮಹಿಳೆ ಎಂದು ಗುರುತಿಸಲಾಗಿದೆ, ಎಲ್ಲರೂ ಸೂರತ್ ನಿವಾಸಿಗಳಾಗಿದ್ದಾರೆ. ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು 506, 507 (ಅಪರಾಧ ಬೆದರಿಕೆ) ಅಡಿಯಲ್ಲಿ ಆರೋಪ ದಾಖಲಾಗಿದೆ.

ಮೂವರು ಅರೆಸ್ಟ್ ನಾಲ್ವರ ಪತ್ತೆಗೆ ಶೋಧ

ಮೂವರು ಅರೆಸ್ಟ್ ನಾಲ್ವರ ಪತ್ತೆಗೆ ಶೋಧ

ದೂರುದಾರರ ಪ್ರಕಾರ, ಅಮ್ಯೂಸ್‌ಮೆಂಟ್ ಪಾರ್ಕ್‌ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅದರ ಸಾಮಾಜಿಕ ಮಾಧ್ಯಮ ಮಾರ್ಕೆಟಿಂಗ್ ಅನ್ನು ನಿರ್ವಹಿಸಿದ ವ್ಯಕ್ತಿಗಳು ಶರ್ಮಾ ಅವರ ಚಿತ್ರವನ್ನು ಅಪ್‌ಲೋಡ್ ಮಾಡಿದ್ದಾರೆ. ಅವರು ತಕ್ಷಣವೇ ಫೋಟೋವನ್ನು ಅಳಿಸಿ ಕ್ಷಮೆಯಾಚಿಸಿದರು, ಆದರೆ ಬಂಧಿತ ಮೂವರು ಮತ್ತು ಇತರರು ಅವರಿಗೆ Instagram ನಲ್ಲಿ ಕೊಲೆ ಬೆದರಿಕೆಗಳನ್ನು ಹಾಕಿದರು ಮತ್ತು ಪ್ರಥಮ ಮಾಹಿತಿ ವರದಿಯ ಪ್ರಕಾರ ಅವರು ಸೂರತ್‌ನಲ್ಲಿ ವಾಸಿಸಲು ಬಯಸುತ್ತೀರಾ ಅಥವಾ ಇಲ್ಲವೇ ಎಂದು ಕೇಳಿರುವುದಾಗಿ ತಿಳಿದು ಬಂದಿದೆ.

ಈ ತಿಂಗಳ ಆರಂಭದಲ್ಲಿ ಅಹಮದಾಬಾದ್ ಮೂಲದ ವಕೀಲರೊಬ್ಬರು ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ವಾಟ್ಸಾಪ್ ಸ್ಟೇಟಸ್ ಸಂದೇಶದ ಮೇಲೆ ಜೀವ ಬೆದರಿಕೆಯನ್ನು ಸ್ವೀಕರಿಸಿದ ನಂತರ ಪೊಲೀಸರನ್ನು ಸಂಪರ್ಕಿಸಿದ್ದರು.

ನೂಪುರ್ ಶರ್ಮಾ ವಿವಾದವೇನು?

ನೂಪುರ್ ಶರ್ಮಾ ವಿವಾದವೇನು?

ಬಿಜೆಪಿಯ ಆಗಿನ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರು ಕಳೆದ ತಿಂಗಳು ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡುವ ಮೂಲಕ ದೊಡ್ಡ ಗದ್ದಲಕ್ಕೆ ಕಾರಣರಾಗಿದ್ದರು. ಅವರು ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ದೇಶ ವಿದೇಶದಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಶರ್ಮಾ ಅವರನ್ನು ಬಂಧಿಸಬೇಕು ಜೊತೆಗೆ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯಗಳನ್ನು ಹೇರಲಾಗಿತ್ತು. ಮುಸ್ಲೀಂ ದೇಶಗಳು ಸೇರಿದಂತೆ ದೇಶದ ಹಲವೆಡೆ ನೂಪುರ್ ಬಂಧಿಸುವಂತೆ ಪ್ರತಿಭಟನೆ ಮಾಡಲಾಯಿತು. ಭಾರತದಲ್ಲಿ ತೀವ್ರಗೊಂಡ ಪ್ರತಿಭಟನೆಯಲ್ಲಿ ಸಾವು ನೋವುಗಳು ಸಂಭವಿಸಿವೆ. ಇಂದಿಗೂ ಈ ಘಟನೆ ಬೂದಿ ಮುಚ್ಚಿದ ಕೆಂಡದಂತಿದೆ.

ನೂಪುರ್ ಶರ್ಮಾ ಪರ ಯಾರೇ ಮಾತನಾಡಿದರೂ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಕೊಲೆಯಾಗಿರುವ ಪ್ರಕರಣ ಕೂಡ ಬೆಳಕಿಗೆ ಬಂದಿದೆ. ಆದರೂ ನೂಪುರ್ ಶರ್ಮಾ ವಿರುದ್ಧ ಹಲವೆಡೆ ಪ್ರಕರಣಗಳನ್ನು ದಾಖಲಿಸಲಾಗಿದ್ದು ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಕನ್ಹಯ್ಯಲಾಲ್ ಹತ್ಯೆ

ಕನ್ಹಯ್ಯಲಾಲ್ ಹತ್ಯೆ

ಕೆಲ ದಿನಗಳ ಹಿಂದೆಯಷ್ಟೇ ನೂಪುರ್ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಉದಯಪುರ ಟೇಲರ್ ಕನ್ಹಯ್ಯ ಲಾಲ್ ಅವರನ್ನು ಹಂತಕರು ಕೊಚ್ಚಿ ಕೊಲೆ ಮಾಡಿದ್ದರು. ಈ ವಿಕೃತಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಮಾತ್ರವಲ್ಲದೇ ಪ್ರಧಾನಿ ಮೋದಿ ಅವರಿಗೂ ಬೆದರಿಕೆ ಹಾಕಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನ ಬೀದಿಗಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದರು. ಹಂತಕರನ್ನು ಬಂಧಿಸುವಂತೆ ಒತ್ತಾಯ ಹೆಚ್ಚಾಗುತ್ತಿದ್ದಂತೆ ಹಂತಕರ ವಿಡಿಯೋ ಆಧಾರದ ಮೇಲೆ ಇಬ್ಬರನ್ನು ಪೊಲೀಸರ ಬಂಧಿಸಿದ್ದಾರೆ. ಅವರ ವಿಚಾರಣೆ ಕೂಡ ನ್ಯಾಯಾಲಯದಲ್ಲಿದೆ.

ಬಿಜೆಪಿಯ ಕ್ರಮ ಸ್ವಾಗತಿಸಿದ ಉಭಯ ದೇಶಗಳು ಗಲ್ಫ್ ಪ್ರದೇಶದ ಸೌದಿ ಅರೇಬಿಯಾ, ಕತಾರ್, ಬಹ್ರೇನ್ ಮತ್ತು ಇರಾನ್ ದೇಶಗಳು ಶರ್ಮಾ ಹೇಳಿಕೆ ಟೀಕೆಗಳನ್ನು ಬಲವಾಗಿ ಖಂಡಿಸಿವೆ. ಕತಾರ್ ಮತ್ತು ಬಹ್ರೇನ್ ಕೂಡ ಭಾರತೀಯ ರಾಯಭಾರಿಯನ್ನು ಕರೆಸಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದವು. ಶರ್ಮಾ ವಿರುದ್ಧ ಬಿಜೆಪಿಯ ಕ್ರಮವನ್ನು ಉಭಯ ದೇಶಗಳು ಸ್ವಾಗತಿಸಿವೆ.

ಬಿಜೆಪಿಯ ಕ್ರಮವನ್ನು ಸ್ವಾಗತಿಸಿದ ಉಭಯ ದೇಶಗಳು

ಬಿಜೆಪಿಯ ಕ್ರಮವನ್ನು ಸ್ವಾಗತಿಸಿದ ಉಭಯ ದೇಶಗಳು

ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಲಾಯಿತು. ಬಿಜೆಪಿಯ ಕ್ರಮವನ್ನು ಉಭಯ ದೇಶಗಳು ಸ್ವಾಗತಿಸಿವೆ. ಗಲ್ಫ್ ಪ್ರದೇಶದ ಸೌದಿ ಅರೇಬಿಯಾ, ಕತಾರ್, ಬಹ್ರೇನ್ ಮತ್ತು ಇರಾನ್ ದೇಶಗಳು ಶರ್ಮಾ ಹೇಳಿಕೆ ಟೀಕೆಗಳನ್ನು ಬಲವಾಗಿ ಖಂಡಿಸಿದ್ದವು. ಕತಾರ್ ಮತ್ತು ಬಹ್ರೇನ್ ಕೂಡ ಭಾರತೀಯ ರಾಯಭಾರಿಯನ್ನು ಕರೆಸಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದವು. ಬಳಿಕ ಶರ್ಮಾ ವಿರುದ್ಧ ಬಿಜೆಪಿಯ ಕ್ರಮವನ್ನು ಉಭಯ ದೇಶಗಳು ಸ್ವಾಗತಿಸಿವೆ. ಆದರೂ ಈ ವಿಚಾರ ಬೂದಿ ಮುಚ್ಚಿದ ಕೆಂಡದಂತಿರುವುದು ಸುಳ್ಳಲ್ಲ ಎನ್ನುವುದಕ್ಕೆ ಬೆದರಿಕೆ ಕರೆಗಳೇ ಸಾಕ್ಷಿ.

English summary
Three people were arrested in Gujarat's Surat city on Friday for allegedly threatening a businessman for uploading a photo of suspended BJP leader Nupur Sharma on Instagram, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X