ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ಛೀಮಾರಿ
ನವದೆಹಲಿ, ಜುಲೈ1: ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದ್ದು, ಇಡೀ ದೇಶದ ಕ್ಷಮೆ ಯಾಚಿಸುವಂತೆ ಸೂಚನೆ ನೀಡಿದೆ.
ಪ್ರವಾದಿ ಮಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಭಾರತ ಸೇರಿದಂತೆ ವಿಶ್ವದಾದ್ಯಂತ ಭಾರಿ ಟೀಕೆ ವ್ಯಕ್ತವಾಗಿತ್ತು. ಅದರಲ್ಲೂ ಗಲ್ಫ್ ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
"ವಾಹಿನಿಯಲ್ಲಿ ನಡೆದ ಚರ್ಚೆಯನ್ನು ನಾವು ನೋಡಿದ್ದೇವೆ. ಆದರೆ ನೂಪುರ್ ಶರ್ಮಾ ಇದನ್ನೆಲ್ಲ ಹೇಳಿದ ರೀತಿ ಮತ್ತು ನಂತರ ತಾನು ವಕೀಲೆ ಎಂದು ಹೇಳುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನೂಪುರ್ ಇಡೀ ದೇಶದ ಕ್ಷಮೆಯಾಚಿಸಬೇಕು" ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.

ನೂಪುರ್ ಶರ್ಮಾ ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿತು. ನೂಪುರ್ ಶರ್ಮಾಗೆ ಬೆದರಿಕೆ ಇದೆ ಎಂದು ಆಕೆಯ ಪರ ವಕೀಲರು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕೋರ್ಟ್ "ಆಕೆಗೆ ಬೆದರಿಕೆ ಇದೆಯಾ ಅಥವಾ ಆಕೆಯೆ ಭದ್ರೆತೆಗೆ ಬೆದರಿಕೆಯಾಗಿದ್ದಾಳ?" ಎಂದು ಮಾರ್ಮಿಕವಾಗಿ ಪ್ರಶ್ನಿಸಿದೆ. "ಆಕೆ ದೇಶಾದ್ಯಂತ ಜನರ ಭಾವನೆಗಳನ್ನು ಘಾಸಿಗೊಳಿಸಿದ್ದಾಳೆ, ಇಂದು ದೇಶದಲ್ಲಿ ಆಗುತ್ತಿರುವ ಘಟನೆಗಳಿಗೆ ನೂಪುರ್ ಶರ್ಮಾ ಸಂಪೂರ್ಣ ಜವಾಬ್ದಾರಳು" ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು.
ನ್ಯಾಯಮೂರ್ತಿ ಸೂರ್ಯಕಾಂತ್ ಗರಂ
ನೂಪರ್ ಶರ್ಮಾ ಹೇಳಿಕೆಗಳು ಆಕೆಯ "ಹಠಮಾರಿ ಮತ್ತು ಸೊಕ್ಕಿನ ಸ್ವಭಾವ"ವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

"ಅವರು ಪಕ್ಷದ ವಕ್ತಾರರಾಗಿದ್ದರೆ ಏನು, ಆಕೆಗೆ ಅಧಿಕಾರದ ಬೆಂಬಲವಿದ್ದ ಮಾತ್ರಕ್ಕೆ ನೆಲದ ಕಾನೂನಿಗೂ ಬೆಲೆ ಕೊಡದೆ ಯಾವ ಹೇಳಿಕೆಯನ್ನಾದರೂ ನೀಡಬಹುದು ಎಂದು ಆಕೆ ಭಾವಿಸಿದ್ದಾಳ?" ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಶ್ನಿಸಿದರು.
ಟಿವಿ ಚರ್ಚೆಯ ಸಂದರ್ಭದಲ್ಲಿ ಆಂಕರ್ ಕೇಳಿದ ಪ್ರಶ್ನೆಗೆ ಮಾತ್ರ ಅವರು ಪ್ರತಿಕ್ರಿಯಿಸಿದ್ದಾರೆ ಎಂದು ನೂಪುರ್ ಶರ್ಮಾ ಪರ ವಕೀಲರು ಉತ್ತರಿಸಿದರು.
"ಆಗ ಆಂಕರ್ ವಿರುದ್ಧವೂ ಪ್ರಕರಣ ಇರಬೇಕಿತ್ತು" ಎಂದು ನ್ಯಾಯಾಲಯ ಹೇಳಿದೆ. ಆ ರೀತಿಯಾದರೆ ನಾಗರಿಕರಿಗೆ ಮಾತನಾಡುವ ಯಾವ ಹಕ್ಕು ಇರುವುದಿಲ್ಲ ಎಂದು ವಕೀಲರು ವಾದಿಸಿದರು.
"ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕಿದೆ, ಪ್ರಜಾಪ್ರಭುತ್ವದಲ್ಲಿ ಹುಲ್ಲು ಬೆಳೆಯುವ ಹಕ್ಕಿದೆ ಮತ್ತು ಕತ್ತೆಗೆ ತಿನ್ನುವ ಹಕ್ಕಿದೆ" ಎಂದು ನ್ಯಾಯಾಧೀಶರು ಖಾರವಾಗಿ ಉತ್ತರಿಸಿದರು. ಪತ್ರಿಕೋದ್ಯಮ ಸ್ವಾತಂತ್ರ್ಯವನ್ನು ರಕ್ಷಿಸುವ ಆದೇಶವನ್ನು ಉಲ್ಲೇಖಿಸಿ ನೂಪುರ್ ಶರ್ಮಾ ಅವರ ವಾದವನ್ನು ನ್ಯಾಯಾಲಯ ಪುರಸ್ಕರಿಲಿಲ್ಲ.
"ಅವಳನ್ನು ಪತ್ರಕರ್ತೆಯ ಪೀಠದಲ್ಲಿ ಕೂರಿಸಲು ಸಾಧ್ಯವಿಲ್ಲ. ಅವಳು ಟಿವಿ ಚರ್ಚೆಗೆ ಹೋದಾಗ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದಾಗ ಅದು ಸಮಾಜದ ರಚನೆಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಯೋಚಿಸಬೇಕಾಗಿತ್ತು" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications