ನಿರ್ಭಯಾ ನರ್ಸ್ ಮೇಲೆಯೂ ಗ್ಯಾಂಗ್ರೇಪ್
ನವದೆಹಲಿ, ಸೆ. 10 : ಅತ್ಯಾಚಾರಕ್ಕೊಳಗಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೂ ಬಾರದ ಲೋಕಕ್ಕೆ ತೆರಳಿದ್ದ ನಿರ್ಭಯಾಳನ್ನು ಆರೈಕೆ ಮಾಡಿದ್ದ ನರ್ಸ್ ಮೇಲೆಯೂ ಗ್ಯಾಂಗ್ ರೇಪ್ ಆಗಿದೆ.
ಏಳು ಜನ ಕಾಮುಕರು ಪಂಜಾಬಿನ ಮಾನ್ಸಾ ಜಿಲ್ಲೆಯ ಬುದ್ಧಾಲಾ ಪಟ್ಟಣದಲ್ಲಿ ಹೀನ ಕೃತ್ಯ ಎಸಗಿದ್ದಾರೆ. ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಭರಣ ಮತ್ತಿತರ ವಸ್ತುಗಳನ್ನು ದೋಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬಲ್ವಿಂದರ್ ಸಿಂಗ್ ಕಾಲಾ ಮತ್ತು ಮನಗವಿಂದರ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.(ನಿರ್ಭಯಾ ಅತ್ಯಾಚಾರ ಸಣ್ಣ ಘಟನೆ: ಜೇಟ್ಲಿ ವಿಷಾದ)
ಅತ್ಯಾಚಾರಕ್ಕೊಳಗಾದವಳು ನಿರ್ಭಯಾ ನರ್ಸ್ ಎಂಬ ಕಾರಣಕ್ಕೆ ಮರುಕ ಪಡಬೇಕಾಗಿಲ್ಲ. ಅವಳು ಒಬ್ಬ ಮಹಿಳೆ ಎಂಬುದನ್ನು ಮನಗಾಣಬೇಕು. ಯಾರೇ ಅಪರಾಧ ಮಾಡಿದ್ದರೂ ಬಂಧಿಸಬೇಕು. ನಾವು ಮಾನವೀಯ ನೆಲೆಯಲ್ಲಿ ಯೋಚಿಸುವುದನ್ನು ಮೊದಲು ಕಲಿಯಬೇಕಾಗಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪತ್ರಾ ಹೇಳಿದ್ದಾರೆ.
ಸಮಾಜ ಕೇವಲ ಸ್ವಾರ್ಥಪರವಾಗಿದೆ. ಇದು ಕಾನೂನು ತೊಡಕಿಂದ ಘಟಿಸುತ್ತಿದೆ ಎಂದು ಹೇಳಲಾಗದು. ಇಡೀ ಸಮಾಜ ಇಂಥ ನೀಚ ಪ್ರಕರಣಗಳಿಗೆ ಹೊಣೆಯಾಗಿರುತ್ತದೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷ ಬರ್ಖಾ ಶುಕ್ಲಾ ಸಿಂಗ್ ಖೇದ ವ್ಯಕ್ತಪಡಿಸಿದ್ದಾರೆ.
ಪಂಜಾಬ್ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳಬೇಕಿದೆ. ದೌರ್ಜನ್ಯಕ್ಕೆ ಒಳಗಾದವಳ ಹೇಳಿಕೆ ಪಡೆದು ಅಪರಾಧಿಗಳ ಪತ್ತೆ ಮಾಡಬೇಕಾಗಿದೆ. ಸತ್ಯವನ್ನು ಹೊರಹಾಕಿ ಸಮಾಜಕ್ಕೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ ಎಂದು ಸಿಂಗ್ ಒತ್ತಾಯಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ













Click it and Unblock the Notifications