ಕರ್ನಾಟಕದ ಜನರಿಗೆ ಅನುಕೂಲವಾಗಲಿದೆ ಗೋವಾದ ಹೊಸ ಬೈಪಾಸ್ ರಸ್ತೆ
ಪಣಜಿ, ಜನವರಿ 02: ಗೋವಾದ ಪಣಜಿ ಮತ್ತು ಕಾನಕೋನ ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಬೈಪಾಸ್ ನಿರ್ಮಾಣ ಮಾಡಲಾಗಿದೆ. ಸುಮಾರು 482 ಕೋಟಿ ರೂ.ಗಳ ನಾಲ್ಕು ಪಥದ 11. 9 ಕಿ. ಮೀ. ಉದ್ದದ ಈ ರಸ್ತೆ ಕರ್ನಾಟಕದಿಂದ ಗೋವಾ ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ.
ಕ್ರಿಸ್ಮಸ್ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನುವೆಂ-ನಾವೆಲಿಮ್ ಪಶ್ಚಿಮ ಬೈಪಾಸ್ ಅನ್ನು ಉದ್ಘಾಟನೆ ಮಾಡಿದ್ದಾರೆ. ಈ ಬೈಪಾಸ್ ಗೋವಾದ ವಾಣಿಜ್ಯ ರಾಜಧಾನಿಯಾದ ಮಾರ್ಗಾವೋದ ವಾಹನಗಳ ಒತ್ತಡವನ್ನು ಕಡಿಮೆ ಮಾಡುತ್ತದೆ.

ಹೊಸದಾಗಿ ನಿರ್ಮಾಣ ಮಾಡಿರುವ 11. 9 ಕಿ. ಮೀ. ಉದ್ದದ ನುವೆಂ-ನಾವೆಲಿಮ್ ಪಶ್ಚಿಮ ಬೈಪಾಸ್ ಪಣಜಿ ಮತ್ತು ಕಾನಕೋನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ. ಸ್ಥಳೀಯ ಜನರಿಗೆ ಅನುಕೂಲ ಮಾಡಿಕೊಡುವುದಲ್ಲದೇ ಕರ್ನಾಟಕದಿಂದ ಗೋವಾಕ್ಕೆ ಹೋಗುವ ಪ್ರವಾಸಿಗರಿಗೆ ಸಹಾಯಕವಾಗಿದೆ.
ಬೈಪಾಸ್ ರಸ್ತೆ ವಿವರಗಳು: ಗೋವಾ ಸರ್ಕಾರ ದಕ್ಷಿಣ ಗೋವಾದಲ್ಲಿನ ದಟ್ಟಣೆ ಕಡಿಮೆ ಮಾಡಲು ಮತ್ತು ಉತ್ತರ ಗೋವಾಕ್ಕೆ ಸಂಪರ್ಕ ಸುಲಭವಾಗಿಲು ಈ ನುವೆಂ-ನಾವೆಲಿಮ್ ಪಶ್ಚಿಮ ಬೈಪಾಸ್ ಯೋಜನೆಯನ್ನು ರೂಪಿಸಿ, ಅನುಷ್ಠಾನಗೊಳಿಸಿದೆ.
ಯೋಜನೆ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ಇ ಬೈಪಾಸ್ 279.38 ಕಿ. ಮೀ. ಹೆದ್ದಾರಿ ಯೋಜನೆ ಭಾಗವಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಅನುದಾನವನ್ನು ನೀಡಿದ್ದು, ಎನ್ಹೆಚ್ಎಐ ಮೂಲಕ ನಿರ್ಮಾಣ ಮಾಡಲಾಗಿದೆ" ಎಂದರು.
"ಈ ಬೈಪಾಸ್ ರಸ್ತೆ ರಾಜ್ಯದ ಜನರಿಗೆ ಕ್ರಿಸ್ಮಸ್ ಹಬ್ಬದ ಉಡುಗೊರೆಯಾಗಿದೆ. ರಾಜ್ಯ ಸರ್ಕಾರ ಕಳೆದ 5 ವರ್ಷಗಳಲ್ಲಿ ಮೂಲ ಸೌಲಭ್ಯ ಸುಧಾರಣೆಗೆ ಹೆಚ್ಚಿನ ಗಮನ ನೀಡಿದೆ. ರಸ್ತೆ, ಸೇತುವೆ ಮತ್ತು ಕೇಂದ್ರದಿಂದ ಅನುಮೋದನೆಗೊಂಡ ಇತರ ಯೋಜನೆಗಳು ಮುಂದಿನ ನಾಲ್ಕು ವರ್ಷಗಳಲ್ಲಿ ಪೂರ್ಣವಾಗಲಿದೆ" ಎಂದು ಹೇಳಿದೆ.
ದಕ್ಷಿಣ ಗೋವಾದಲ್ಲಿರುವ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಉತ್ತರ ಗೋವಾಕ್ಕೆ ಸುಲಭವಾಗಿ ಸಂಚಾರ ನಡೆಸಲು ಅನುಕೂಲವಾಗುವಂತೆ ನುವೆಂ-ನಾವೆಲಿಮ್ ಪಶ್ಚಿಮ ಬೈಪಾಸ್ ನಿರ್ಮಾಣ ಮಾಡಲಾಗಿದೆ. ಉತ್ತಮ ಗುಣಮಟ್ಟದ ರಸ್ತೆ ಇದಾಗಿದ್ದು, 100 ಕಿ. ಮೀ. ವೇಗದಲ್ಲಿ ಸಂಚಾರವನ್ನು ನಡೆಸಬಹುದಾಗಿದೆ.
ಹೊಸ ಬೈಪಾಸ್ ರಸ್ತೆ ಮಾರ್ಗಾವೋದ ವಾಹನಗಳ ಒತ್ತಡ ಕಡಿಮೆ ಮಾಡುತ್ತದೆ. ಈ ರಸ್ತೆ ಗೇಮ್ ಚೇಂಜರ್ ಆಗಿದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳಿದ್ದಾರೆ. ಈ ಹಿಂದೆ ಮಾರ್ಗವೋ ಮತ್ತು ಉತ್ತರ ಗೋವಾ ಸಂಪರ್ಕಿಸುವ ರಸ್ತೆ ಉತ್ತಮವಾಗಿರಲಿಲ್ಲ. ಈ ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಗೋವಾ ರಾಜ್ಯಕ್ಕೆ ಹೊರಗಿನಿಂದ ಆಗಮಿಸುವ ಪ್ರವಾಸಿಗರಿಗೆ ಈ ಬೈಪಾಸ್ ರಸ್ತೆ ಅನುಕೂಲವಾಗಿದೆ. ಉತ್ತಮ ರಸ್ತೆ ಸಂಪರ್ಕದ ಕಾರಣ ಪ್ರವಾಸಿಗರು ಸುಲಭವಾಗಿ ಕಾನಕೋನ ತನಕ ಸಂಚಾರ ನಡೆಸಬಹುದಾಗಿದೆ ಎಂದು ಸ್ಥಳೀಯರು ವಿವರಿಸಿದ್ದಾರೆ.
ಸರ್ಕಾರದ ಈ ಮಹತ್ವದ ನುವೆಂ-ನಾವೆಲಿಮ್ ಪಶ್ಚಿಮ ಬೈಪಾಸ್ ಯೋಜನೆಯಿಂದಾಗಿ ಅಂಬ್ಯುಲೆನ್ಸ್ಗಳು ಸಹ ಸುಲಭವಾಗಿ ನಾವೆಲಿಮ್ನಿಂದ ದಕ್ಷಿಣ ಗೋವಾದ ಆಸ್ಪತ್ರೆಗಳಿಗೆ ಸಂಚಾರ ನಡೆಸಲು ಅನುಕೂಲವಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications