ಗುಜರಾತ್ ಬಂದ್ ಗೆ ಕರೆ ನೀಡಿದ 22 ವರ್ಷದ ಹಾರ್ದಿಕ್
ಅಹಮದಾಬಾದ್, ಆಗಸ್ಟ್ 26: ಆತನಿಗೆ 22 ವರ್ಷ ವಯಸ್ಸು, ಅದರೆ, ಇಡೀ ಗುಜರಾತ್ ಸರ್ಕಾರವನ್ನೇ ಅಲುಗಾಡಿಸುತ್ತಿದ್ದಾರೆ. ಪಟೇಲ್ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವವರ ಮುಂದಾಳತ್ವ ವಹಿಸಿಕೊಂಡಿರುವ ಹಾರ್ದಿಕ್, ಗುಜರಾತ್ ಬಂದ್ ಗೆ ಕರೆ ನೀಡಿದ್ದಾರೆ.
ಒಬಿಸಿ ಮೀಸಲಾತಿಗೆ ಒತ್ತಾಯಿಸಿ ಗುಜರಾತ್ನ ಪಟೇಲ್ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ಹಿಂಸೆಗೆ ತಿರುಗಿದ್ದು, ಅಹ್ಮದಾಬಾದ್ ಬೇರೆಬೇರೆ ಭಾಗಗಳಲ್ಲಿ ಘರ್ಷಣೆಗಳು ವರದಿಯಾಗಿತ್ತು. ಅದರೆ, ಬುಧವಾರದಂದು ಹಿಂಸಾಚಾರ ಕೈಬಿಟ್ಟು ಶಾಂತಿಯುತ ಪ್ರತಿಭಟನೆ ಕೈಗೊಳ್ಳುವಂತೆ ಹಾರ್ದಿಕ್ ಪಟೇಲ್ ಕರೆ ನೀಡಿದ್ದಾರೆ.[ಮೋದಿ ನಾಡಲ್ಲಿ ಮೋಡಿ ಮಾಡಿರುವ ಹಾರ್ದಿಕ್ ಪಟೇಲ್]
ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ಮುನ್ನಚ್ಚರಿಕೆಯ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಹಮದಾಬಾದಿನ ವಡಾಜ್, ವಸ್ತ್ರಪುರ್, ನಿಕೊಲ್ ಮತ್ತು ಪಲ್ದಿ ಪ್ರದೇಶಗಳಲ್ಲಿ ಸ್ಥಳೀಯ ನಿವಾಸಿಗಳು ಮತ್ತು ಪಟೇಲ್ ಸಮುದಾಯದ ಸದಸ್ಯರ ನಡುವೆ ಘರ್ಷಣೆಗಳು ನಡೆದಿತ್ತು.[ಇಷ್ಟಕ್ಕೂ ನರೇಂದ್ರ ಮೋದಿ ಜಾತಿ ಯಾವುದು?]
ವಡಾಜ್ ಪ್ರದೇಶದಲ್ಲಿ ಸ್ಕೂಟರ್ ಮತ್ತು ಬೈಕ್ಗಳಲ್ಲಿ ಬಂದ ಪಟೇಲ್ ಸಮುದಾಯದ ಯುವಕರು ಬಲವಂತವಾಗಿ ಅಂಗಡಿಗಳು, ಇನ್ನಿತರ ವ್ಯಾಪಾರ ವ್ಯವಹಾರ ಸಂಸ್ಥೆಗಳನ್ನು ಮುಚ್ಚಿಸಿದರು. ದಲಿತ ಸಮುದಾಯಕ್ಕೆ ಸೇರಿದ ಸ್ಥಳೀಯರು ಇದನ್ನು ವಿರೋಧಿಸಿದರು. ತದನಂತರ ಎರಡೂ ಸಮುದಾಯದ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಲಾಠಿ ಪ್ರಹಾರ, ಅಶ್ರುವಾಯು, ಬಸ್ಗಳಿಗೆ ಕಲ್ಲು
ಘರ್ಷಣೆಯಲ್ಲಿ ತೊಡಗಿದ್ದ ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಜೊತೆಗೆ ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು. ವಡಾಜ್ ಪೊಲೀಸ್ ಚೌಕದಲ್ಲಿ ಪ್ರತಿಭಟನಾಕಾರರು ಅಂಗಡಿಗಳಿಗೆ ಹಾನಿ ಮಾಡಿದ್ದಾರೆ. ಬಸ್ಗಳಿಗೆ ಕಲ್ಲು ತೂರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಅನೇಕ ಕಡೆಗಳಲ್ಲಿ ಇಂಟರ್ನೆಟ್ ಸಂಪರ್ಕ್ ಕಿತ್ತು ಹಾಕಲಾಗಿದೆ. ವಾಟ್ಸಪ್ ಸಂದೇಶಗಳನ್ನು ನಿರ್ಬಂಧಿಸಲಾಗಿದೆ.

ಗುಜರಾತಿನೆಲ್ಲೆಡೆ ಪ್ರತಿಭಟನೆ
ಅಹಮದಾಬಾದ್ ಅಲ್ಲದೆ ಸೂರತ್, ಮೆಹ್ಸಾನ, ರಾಜ್ ಕೋಟ್ ಹಾಗೂ ಇನ್ನಿತರ ಭಾಗಗಳಲ್ಲೂ ಪ್ರತಿಭಟನೆ ಬುಧವಾರ ಕೂಡಾ ಮುಂದುವರೆದಿದೆ. ಪಟೇಲ್ ಸಮುದಾಯ ರಾಜ್ಯವ್ಯಾಪಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದರೂ, ಮೀಸಲಾತಿ ನೀಡಲು ರಾಜ್ಯ ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ

ಜಾಹೀರಾತಿನ ಮೂಲಕ ಸ್ಪಷ್ಟನೆ
ಸಿಎಂ ಆನಂದಿಬೆನ್ ವಿಡಿಯೋ-ಆಡಿಯೋ ಧ್ವನಿಮುದ್ರಣ ನೀಡಿ ಮನವರಿಕೆ ಮಾಡಿದ್ದಾರೆ. 1992ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ, ಯಾವುದೇ ರಾಜ್ಯವು ಶೇ.50ರಷ್ಟು ಮೀಸಲಾತಿ ನೀಡಲು ಅವಕಾಶವಿದೆ. ರಾಜ್ಯದಲ್ಲಿ ಒಬಿಸಿ ಶೇ.27, ಎಸ್ಟಿ-15 ಹಾಗೂ ಎಸ್ಸಿ -7 ಮೀಸಲಾತಿ ಹೊಂದಿದ್ದು, ಹೀಗಾಗಿ ನೀಡಲು ಸಾಧ್ಯವಿಲ್ಲ ಎಂದಿದೆ.

ಮೂಲತಃ ಕೃಷಿಕರಾದ ಪಟೇಲ್ ಸಮುದಾಯ
ಮೂಲತಃ ಕೃಷಿಕರಾದ ಪಟೇಲ್ ಸಮುದಾಯದವರು ಕಾಲಕ್ರಮೇಣ ಜವಳಿ, ವಜ್ರ ಹಾಗೂ ಔಷಧ ತಯಾರಿಕ ಕ್ಷೇತ್ರದ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದರು. 70ರ ದಶಕಕ್ಕೂ ಮುನ್ನ ಕಾಂಗ್ರೆಸ್ ಬೆಂಬಲಿಸುತ್ತಿದ್ದ ಈ ಸಮುದಾಯ, 81ಹಾಗೂ 85ರಲ್ಲಿ ದಲಿತ- ಹಿಂದುಳಿದ ವರ್ಗಕ್ಕೆ ಮೀಸಲಾತಿ ವಿರೋಧಿಸಿ ಹೋರಾಟ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications