ಸ್ವದೇಶಿ ನಿರ್ಮಿತ ಅಗ್ನಿ-1 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ
ಬಾಲಸೂರ್(ಒರಿಸ್ಸಾ), ಮಾ.14: ಸ್ವದೇಶಿ ನಿರ್ಮಿತ ಅಗ್ನಿ-1 ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಸೋಮವಾರ ಒರಿಸ್ಸಾ ಕಡಲ ತೀರದಲ್ಲಿ ಯಶಸ್ವಿಯಾಗಿದೆ. ಸುಮಾರು 700 ಮೀಟರ್ಗೂ ದೂರದ ಗುರಿಗೆ ಅಪ್ಪಳಿಸುವ ಸಾಮರ್ಥ್ಯದ ಮಧ್ಯಮ ವ್ಯಾಪ್ತಿಯ ಸ್ವದೇಶಿ ನಿರ್ಮಿತ ಕ್ಷಿಪಣಿ ಇದಾಗಿದೆ.
ಒರಿಸ್ಸಾದ ಇಲ್ಲಿನ ಅಬ್ದುಲ್ ಕಲಾಂ ಐಲ್ಯಾಂಡ್(ವೀಲರ್ ಐಲ್ಯಾಂಡ್)ನ ಸಂಚಾರಿ ಉಡಾವಣಾ ವಾಹನದಿಂದ ಸೋಮವಾರ ಬೆಳಗ್ಗೆ 9.15ಕ್ಕೆ ಸರಿಯಾಗಿ, ಭೂಮಿಯಿಂದ ಭೂಮಿಗೆ ಅಪ್ಪಳಿಸುವ ಒಂದೇ ಹಂತದಲ್ಲಿ ಸ್ಪೋಟಿಸುವ ಸಾಮರ್ಥ್ಯವುಳ್ಳ ಅಗ್ನಿ-1 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ಪರಮಾಣು ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಉಡಾವಣೆ ಯಶಸ್ವಿ]

ಈ ದೇಶೀ ನಿರ್ಮಿತ ಕ್ಷಿಪಣಿ ಪ್ರತಿ ಸೆಕೆಂಡ್ ಗೆ 2.5 ಕಿಲೋ ಮೀಟರ್ ವೇಗದಲ್ಲಿ ಚಲಿಸಬಲ್ಲದು., 9 ನಿಮಿಷ 36 ಸೆಕೆಂಡ್ಗಳಲ್ಲಿ 700 ಕಿ.ಮೀ ಕ್ರಮಿಸಿ ಅಪ್ಪಳಿಸಬಲ್ಲದು. ಅಗ್ನಿ ಕ್ಷಿಪಣಿ 12 ಟನ್ ತೂಕವಿದ್ದು, 15 ಮೀಟರ್ ಉದ್ದವಿದೆ. [ಅಗ್ನಿ 5 ವ್ಯಾಪ್ತಿಯಲ್ಲಿ ಇಡೀ ಚೀನಾ]
ಸುಮಾರು 1 ಟನ್ಗೂ ಹೆಚ್ಚು ತೂಕದ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. 2015ರ ನವೆಂಬರ್ 27ರಂದು ಖಡಾಂತರಿ (surface-to-surface) ಅಗ್ನಿ-1 ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು ಎಂದು ಡಿಆರ್ಡಿಒ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ-1 ಕ್ಷಿಪಣಿಯ ಮೊದಲ ಉಡಾವಣಾ ಪರೀಕ್ಷೆ 1989ರಲ್ಲಿ ನಡೆಸಲಾಗಿತ್ತು. ನಂತರ ಇದರ ಪ್ರಯೋಗಾತ್ಮಕ ಪರೀಕ್ಷೆ 2015ರ ನವೆಂಬರ್ 27ರಂದು ನಡೆಸಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications