Odisha Train Accident: ರೈಲು ಅಪಘಾತಕ್ಕೆ ಮಸೀದಿ ಕಾರಣ ಎಂದು ಪೋಸ್ಟ್: ತುಮಕೂರು ಬಿಜೆಪಿ ಕಾರ್ಯಕರ್ತೆಗೆ ಸಂಕಷ್ಟ
ಒಡಿಶಾದ ಬಾಲಾಸೋರ್ನಲ್ಲಿನಡೆದ ಭೀಕರ ರೈಲು ಅಪಘಾತದಲ್ಲಿ 288ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 900 ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಂತ್ರಿಕ ತೊಂದರೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಇದನ್ನು ಖಚಿತಪಡಿಸಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಆದರೆ ಕೆಲವು ಕಿಡಿಗೇಡಿಗಳು ಇಂತಹ ರೈಲು ದುರಂತದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಕೆಲವರು ಈ ರೈಲು ದುರಂತಕ್ಕೆ ಮಸೀದಿ ಕಾರಣ ಎಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದುರಂತಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರಿಂದ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಪೊಲೀಸರು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಹೆಚ್ಎಸ್ ಎನ್ನುವ ಮಹಿಳೆ ಕೂಡ ಇಂತಹ ಪೋಸ್ಟ್ ಹಂಚಿಕೊಂಡಿದ್ದು, ಒಡಿಶಾ ಪೊಲೀಸರು ಮಹಿಳೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಪೋಸ್ಟ್ ಹಂಚಿಕೊಂಡಿರುವ ಎಲ್ಲರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಕಾನೂನು ಕ್ರಮದ ಭೀತಿ ಎದುರಾಗಿದೆ. ಸದ್ಯ ಟ್ವೀಟ್ ಡಿಲೀಟ್ ಮಾಡಿದ್ದರು, ಅದರ ಸ್ಕ್ರೀನ್ಶಾಟ್ ವ್ಯಾಪಕವಾಗಿ ಹಚಿಕೆಯಾಗುತ್ತಿದೆ.
ಶಕುಂತಲಾ ಬಗ್ಗೆ ಕರ್ನಾಟಕ ಪೊಲೀಸರಿಂದ ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹಲವು ಪ್ರಮುಖರು ಕೂಡ ಈ ಫೋಟೊ ಹಂಚಿಕೊಂಡಿದ್ದು ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಒಡಿಶಾ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ. ಅಲ್ಲದೆ ಇಂತಹ ಸುಳ್ಳು ಸುದ್ದಿಯನ್ನು ಹಂಚಬೇಡಿ ಮತ್ತು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
It has come to notice that some social media handles are mischievously giving communal colour to the tragic train accident at Balasore. This is highly unfortunate.
— Odisha Police (@odisha_police) June 4, 2023
Investigation by the GRP, Odisha into the cause and all other aspects of the accident is going on.
ಏನಿದು ಫೋಟೊ ಅಸಲಿಯತ್ತು?
ರೈಲು ಅಪಘಾತವಾದ ಸ್ಥಳದಲ್ಲಿ ಮಸೀದಿ ಇದೆ ಎಂದು ಕೆಲವರು ಫೋಟೊ ಹಂಚಿಕೊಂಡಿದ್ದಾರೆ. ಆದರೆ ಅಪಘಾತಕ್ಕೆ ಸ್ವಲ್ಪ ದೂರದಲ್ಲಿ ಇರುವುದು ಮಸೀದಿಯಲ್ಲ ಬದಲಾಗಿ ಇಸ್ಕಾನ್ ದೇವಸ್ಥಾನ ಎಂದು ತಿಳಿದುಬಂದಿದೆ. ದೇವಸ್ಥಾನದ ಅರ್ಧಭಾಗವನ್ನು ಮಾತ್ರ ಹಂಚಿಕೊಂಡು ಅದನ್ನು ಮಸೀದಿ ಎನ್ನುವಂತೆ ಬಿಂಬಿಸಲು ಯತ್ನಿಸಲಾಗಿತ್ತು.
ಸದ್ಯ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಗೊಂದಲಕ್ಕೆ ಕಾರಣವಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದರೆ, ಕೋಮು ಸೌಹಾರ್ದತೆ ಕದಡುವ ಕೆಲಸ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದೆಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications