ಪುರಿಯಲ್ಲೀಗ ಜಗನ್ನಾಥನ ಜಾತ್ರೆ: ಅದ್ಧೂರಿಯಾಗಿ ಶುರುವಾಗಿದೆ ರಥಯಾತ್ರೆ
ಪುರಿ, ಜುಲೈ 14: ಒಡಿಶಾದ ಪುರಿಯಲ್ಲಿ ಪ್ರತಿವರ್ಷ ನಡೆಯುವ ಒಂಬತ್ತು ದಿನಗಳ ಜಗನ್ನಾಥ ಯಾತ್ರೆ ಇಂದಿನಿಂದ ಆರಂಭವಾಗಿದೆ.
ದೇಶ-ವಿದೇಶಗಳಿಂದ ಬಂದ ಭಕ್ತಾದಿಗಳು, ಪ್ರವಾಸಿಗರು ಜಗನ್ನಾಥನ ವೈಭವವನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ. ಛಾರ್ ಧಾಮ್ ಗಳಲ್ಲಿ ಒಂದಾದ ಪುರಿಯ ಜಗನ್ನಾಥ ಮಂದಿರದಲ್ಲಿ ಇದೀಗ ಜಾತ್ರೆ ಸಂಭ್ರಮ ಮೇಳೈಸಿದೆ.
ಪ್ರತಿ ವರ್ಷ ಆಷಾಡ ಮಾಸದ ಶುಕ್ಲಪಕ್ಷದ ಬಿದಿಗೆಯಂದು ಆರಂಭವಾಗುವ ಈ ಯಾತ್ರೆ, ಈ ವರ್ಷ ಜುಲೈ 14, ಶುಕ್ರವಾರದಿಂದ ಆರಂಭವಾಗಿದೆ. ಲಕ್ಷಾಂತರ ಜನ ಪಾಲ್ಗೊಳ್ಳುವ ಈ ಅದ್ಧೂರಿ ರಥಯಾತ್ರೆಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪುರಿ ಜಗನ್ನಾಥ ದೇವಾಲಯ
ವಿಷ್ಣುವಿನ ಮತ್ತೊಂದು ರೂಪವಾದ ಜಗನ್ನಾಥನ ದೇವಾಲಯ ಒಡಿಶಾದ ಪುರಿಯಲ್ಲಿದೆ. ಪ್ರತಿ ವರ್ಷ ಆಷಾಡ ಶುಕ್ಲ ಬಿದಿಗೆಯಂತು ಇಲ್ಲಿ ಒಂಬತ್ತು ದಿನಗಳ ರಥ ಯಾತ್ರೆ ಆರಂಭವಾಗುತ್ತದೆ. ವೈಷ್ಣವ ಸಮುದಾಯದವರು ಹೆಚ್ಚು ನಡೆದುಕೊಳ್ಳುವ ಈ ಜಗನ್ನಾಥ ಮಂದಿರಕ್ಕೆ ಜಾತಿ-ಮತದ ಭೇದವಿಲ್ಲದೆ ಸಕಲರೂ ಆಗಮಿಸುತ್ತಾರೆ. ಮಹಾನ್ ಸಂತರಾದ ರಮಾನಂದ, ರಾಮಾನುಜರು ಸಹ ಈ ದೇವಾಲಯಕ್ಕೆ ಆಗಾಗ ಭೇಟಿ ನೀಡುತ್ತಿದ್ದರು ಎಂಬ ಪ್ರತೀತಿ ಇದೆ. ಈ ದೇವಾಲಯವನ್ನು 10 ನೇ ಶತಮಾನದಲ್ಲಿ ಪುನಃಸ್ಥಾಪನೆ ಮಾಡಲಾಯಿತು.

ಏನಿದು ರಥಯಾತ್ರೆ?
ಒಂಬತ್ತು ದಿನಗಳ ಈ ರಥಯಾತ್ರೆಯಲ್ಲಿ ಭಗವಂತ ಜಗನ್ನಾಥ ಆತನ ಹಿರಿಯ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆಯರ ಮೂರ್ತಿಯನ್ನು ಸಿಂಗರಿಸಿದ ಮೂರು ರಥದೊಳಗಿಟ್ಟು ಪೂಜಿಸುತ್ತಾ, ಭಜಿಸುತ್ತಾ ಪುರಿಯ ಜಗನ್ನಾಥ ಮಂದಿರದಿಂದ ಗುಂಡಿಚ ಮಂದಿರದವರೆಗೆ ತೆರಳಲಾಗುತ್ತದೆ. 141 ನೇ ವರ್ಷದ ಈ ರಥಯಾತ್ರೆಗೆ ಲಕ್ಷಾಂತರ ಜನ ಭಾಗವಹಿಸುತ್ತಾರೆ. ಜುಲೈ 23 ರಂದು ರಥಯಾತ್ರೆ ಮುಕ್ತಾಯಗೊಳ್ಳಲಿದೆ.

ಜಗನ್ನಾಥ ದೇವಾಲಯದ ವೈಶಿಷ್ಟ್ಯ
ಈ ದೇವಾಲಯವನ್ನು ಇಂದ್ರದ್ಯುಮ್ನ ಎಂಬ ರಾಜ ಕಟ್ಟಿಸಿದ ಎಂದು ಇತಿಹಾಸ ಹೇಳುತ್ತದೆ. ಈ ದೇವಾಲಯದ ವಿಗ್ರಹಗಳ ವೈಶಿಷ್ಟ್ಯವೆಂದರೆ ಇವನ್ನು ಕಲ್ಲಿನ ಬದಲಾಗಿ ಮರದಲ್ಲಿ ಕೆತ್ತಲಾಗಿದೆ. ಪ್ರತಿ ಹನ್ನೆರಡು ಅಥವಾ ಹತ್ತೊಂಬತ್ತು ವರ್ಷಗಳಿಗೊಮ್ಮೆ ಈ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಬದಲಿಸಲಾಗುತ್ತದೆ.
ಈ ದೇವಾಲಯದ ಸಂಕೀರ್ಣ 400000 ಚದರ ಅಡಿ ಪ್ರದೇಶವನ್ನು ಒಳಗೊಂಡಿದೆ. ದೇವಾಲಯ ಎಲ್ಲಾ ದಿಕ್ಕುಗಳಲ್ಲಿ 4 ಪ್ರವೇಶ ದ್ವಾರಗಳಿವೆ. ದೇವಾಲಯವು ಬೆಳ್ಳಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ತೆರೆದಿರುತ್ತದೆ.
|
ಪ್ರಧಾನಿಗಳಿಂದ ಶುಭ ಹಾರೈಕೆ
ಪುರಿಯ ಇತಿಹಾಸ ಪ್ರಸಿದ್ಧ ರಥಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಭಗವಂತ ಜಗನ್ನಾಥನ ಆಶೀರ್ವಾದದಿಂದ ನಮ್ಮ ದೇಶದ ಅಭಿವೃದ್ಧಿ ಹೊಸ ಉತ್ತುಂಗಕ್ಕೇರಲಿ. ಪ್ರತಿ ಭಾರತೀಯನು ಸಮೃದ್ಧಿ ಮತ್ತು ಸಂತೋಷದಿಂದ ಬದುಕುವಂತಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications