ಪುರಿಯಲ್ಲೀಗ ಜಗನ್ನಾಥನ ಜಾತ್ರೆ: ಅದ್ಧೂರಿಯಾಗಿ ಶುರುವಾಗಿದೆ ರಥಯಾತ್ರೆ
ಪುರಿ, ಜುಲೈ 14: ಒಡಿಶಾದ ಪುರಿಯಲ್ಲಿ ಪ್ರತಿವರ್ಷ ನಡೆಯುವ ಒಂಬತ್ತು ದಿನಗಳ ಜಗನ್ನಾಥ ಯಾತ್ರೆ ಇಂದಿನಿಂದ ಆರಂಭವಾಗಿದೆ.
ದೇಶ-ವಿದೇಶಗಳಿಂದ ಬಂದ ಭಕ್ತಾದಿಗಳು, ಪ್ರವಾಸಿಗರು ಜಗನ್ನಾಥನ ವೈಭವವನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ. ಛಾರ್ ಧಾಮ್ ಗಳಲ್ಲಿ ಒಂದಾದ ಪುರಿಯ ಜಗನ್ನಾಥ ಮಂದಿರದಲ್ಲಿ ಇದೀಗ ಜಾತ್ರೆ ಸಂಭ್ರಮ ಮೇಳೈಸಿದೆ.
ಪ್ರತಿ ವರ್ಷ ಆಷಾಡ ಮಾಸದ ಶುಕ್ಲಪಕ್ಷದ ಬಿದಿಗೆಯಂದು ಆರಂಭವಾಗುವ ಈ ಯಾತ್ರೆ, ಈ ವರ್ಷ ಜುಲೈ 14, ಶುಕ್ರವಾರದಿಂದ ಆರಂಭವಾಗಿದೆ. ಲಕ್ಷಾಂತರ ಜನ ಪಾಲ್ಗೊಳ್ಳುವ ಈ ಅದ್ಧೂರಿ ರಥಯಾತ್ರೆಗೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪುರಿ ಜಗನ್ನಾಥ ದೇವಾಲಯ
ವಿಷ್ಣುವಿನ ಮತ್ತೊಂದು ರೂಪವಾದ ಜಗನ್ನಾಥನ ದೇವಾಲಯ ಒಡಿಶಾದ ಪುರಿಯಲ್ಲಿದೆ. ಪ್ರತಿ ವರ್ಷ ಆಷಾಡ ಶುಕ್ಲ ಬಿದಿಗೆಯಂತು ಇಲ್ಲಿ ಒಂಬತ್ತು ದಿನಗಳ ರಥ ಯಾತ್ರೆ ಆರಂಭವಾಗುತ್ತದೆ. ವೈಷ್ಣವ ಸಮುದಾಯದವರು ಹೆಚ್ಚು ನಡೆದುಕೊಳ್ಳುವ ಈ ಜಗನ್ನಾಥ ಮಂದಿರಕ್ಕೆ ಜಾತಿ-ಮತದ ಭೇದವಿಲ್ಲದೆ ಸಕಲರೂ ಆಗಮಿಸುತ್ತಾರೆ. ಮಹಾನ್ ಸಂತರಾದ ರಮಾನಂದ, ರಾಮಾನುಜರು ಸಹ ಈ ದೇವಾಲಯಕ್ಕೆ ಆಗಾಗ ಭೇಟಿ ನೀಡುತ್ತಿದ್ದರು ಎಂಬ ಪ್ರತೀತಿ ಇದೆ. ಈ ದೇವಾಲಯವನ್ನು 10 ನೇ ಶತಮಾನದಲ್ಲಿ ಪುನಃಸ್ಥಾಪನೆ ಮಾಡಲಾಯಿತು.

ಏನಿದು ರಥಯಾತ್ರೆ?
ಒಂಬತ್ತು ದಿನಗಳ ಈ ರಥಯಾತ್ರೆಯಲ್ಲಿ ಭಗವಂತ ಜಗನ್ನಾಥ ಆತನ ಹಿರಿಯ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆಯರ ಮೂರ್ತಿಯನ್ನು ಸಿಂಗರಿಸಿದ ಮೂರು ರಥದೊಳಗಿಟ್ಟು ಪೂಜಿಸುತ್ತಾ, ಭಜಿಸುತ್ತಾ ಪುರಿಯ ಜಗನ್ನಾಥ ಮಂದಿರದಿಂದ ಗುಂಡಿಚ ಮಂದಿರದವರೆಗೆ ತೆರಳಲಾಗುತ್ತದೆ. 141 ನೇ ವರ್ಷದ ಈ ರಥಯಾತ್ರೆಗೆ ಲಕ್ಷಾಂತರ ಜನ ಭಾಗವಹಿಸುತ್ತಾರೆ. ಜುಲೈ 23 ರಂದು ರಥಯಾತ್ರೆ ಮುಕ್ತಾಯಗೊಳ್ಳಲಿದೆ.

ಜಗನ್ನಾಥ ದೇವಾಲಯದ ವೈಶಿಷ್ಟ್ಯ
ಈ ದೇವಾಲಯವನ್ನು ಇಂದ್ರದ್ಯುಮ್ನ ಎಂಬ ರಾಜ ಕಟ್ಟಿಸಿದ ಎಂದು ಇತಿಹಾಸ ಹೇಳುತ್ತದೆ. ಈ ದೇವಾಲಯದ ವಿಗ್ರಹಗಳ ವೈಶಿಷ್ಟ್ಯವೆಂದರೆ ಇವನ್ನು ಕಲ್ಲಿನ ಬದಲಾಗಿ ಮರದಲ್ಲಿ ಕೆತ್ತಲಾಗಿದೆ. ಪ್ರತಿ ಹನ್ನೆರಡು ಅಥವಾ ಹತ್ತೊಂಬತ್ತು ವರ್ಷಗಳಿಗೊಮ್ಮೆ ಈ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಬದಲಿಸಲಾಗುತ್ತದೆ.
ಈ ದೇವಾಲಯದ ಸಂಕೀರ್ಣ 400000 ಚದರ ಅಡಿ ಪ್ರದೇಶವನ್ನು ಒಳಗೊಂಡಿದೆ. ದೇವಾಲಯ ಎಲ್ಲಾ ದಿಕ್ಕುಗಳಲ್ಲಿ 4 ಪ್ರವೇಶ ದ್ವಾರಗಳಿವೆ. ದೇವಾಲಯವು ಬೆಳ್ಳಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ತೆರೆದಿರುತ್ತದೆ.
|
ಪ್ರಧಾನಿಗಳಿಂದ ಶುಭ ಹಾರೈಕೆ
ಪುರಿಯ ಇತಿಹಾಸ ಪ್ರಸಿದ್ಧ ರಥಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಭಗವಂತ ಜಗನ್ನಾಥನ ಆಶೀರ್ವಾದದಿಂದ ನಮ್ಮ ದೇಶದ ಅಭಿವೃದ್ಧಿ ಹೊಸ ಉತ್ತುಂಗಕ್ಕೇರಲಿ. ಪ್ರತಿ ಭಾರತೀಯನು ಸಮೃದ್ಧಿ ಮತ್ತು ಸಂತೋಷದಿಂದ ಬದುಕುವಂತಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications