ಸ್ವಯಂ ಘೋಷಿತ ದೇವ ಮಾನವ ಸಾರಥಿ ಬಾಬಾ ಬಂಧನ
ಭುವನೇಶ್ವರ, ಆಗಸ್ಟ್ .8: ವಿವಾದಿತ ಸ್ವಯಂ ಘೋಷಿತ ದೇವ ಮಾನವ ಸಾರಥಿ ಬಾಬಾನನ್ನು ಒಡಿಶಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಳ್ಳುವುದಕ್ಕೂ ಮೊದಲು ಸುಮಾರು 14 ಗಂಟೆಗಳ ಕಾಲ ಬಾಬಾನನ್ನು ವಿಚಾರಣೆಗೊಳಪಡಿಸಿದ್ದು ವಿಶೇಷವಾಗಿತ್ತು.
ಬಾಬಾನ ಬಂಧನಕ್ಕೆ ಆಗ್ರಹಿಸಿ ಒಡಿಶಾ ರಾಜ್ಯದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಸಾರ್ವಜನಿಕರಿಂದ ಭಾರಿ ಪ್ರತಿಭಟನೆ, ಆಗ್ರಹಪೂರ್ವಕ ಮನವಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಾಬಾ ಇದ್ದ ಕೇಂದ್ರಪಾರದ ಆಶ್ರಮಕ್ಕೆ ತೆರಳಿದರು. ಶನಿವಾರ ದಿನ ಕಳೆದು ರಾತ್ರಿಯಾದರೂ ವಿಚಾರಣೆ ಮುಗಿಯಲಿಲ್ಲ. ಕೊನೆಗೆ ಬಾಬಾ ಬಂಧಿಸಿ, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಪ್ರಕಟಿಸಿದ ಮೇಲೆ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಬಾಬಾನ ವಿರುದ್ಧ ಪೋರ್ಜರಿ, ವಂಚನೆ ಹಾಗೂ ಕ್ರಿಮಿನಲ್ ಹಸ್ತಕ್ಷೇಪ ಸೇರಿದಂತೆ ಅನೇಕ ಪ್ರಕರಣಗಳಿವೆ. ಶ್ರೀಮದ್ ಸಾರಥಿ ದೇವ್ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಈಗಾಗಲೇ ಅಪರಾಧ ವಿಭಾಗಕ್ಕೆ ಆದೇಶ ನೀಡಿದ್ದರು. ಮೂವರ ತಂಡವೊಂದು ಸಾರಥಿಯ ಆಶ್ರಮವನ್ನು ತಲುಪಿದ್ದು, ತನಿಖೆ ಆರಂಭಿಸಿದೆ.
ಖಾಸಗಿ ಟಿವಿ ವಾಹಿನಿಯೊಂದು ಬಾಬಾನ ಚಿತ್ರವನ್ನು ಪ್ರದರ್ಶಿಸಿ, ಆತ ಹೈದರಾಬಾದ್ನ ಹೊಟೇಲೊಂದರಲ್ಲಿ ಮಹಿಳೆಯೊಬ್ಬಳೊಂದಿಗೆ 2 ದಿನಗಳನ್ನು ಕಳೆದಿದ್ದಾನೆ ಎಂದು ಆರೋಪಿಸಿತ್ತು. ನಂತರ ಒಡಿಶಾದಾದ್ಯಂತ ಆತನ ಬಂಧನಕ್ಕಾಗಿ ಜನರು 3 ದಿನಗಳಿಂದ ಚಳವಳಿ ನಡೆಸುತ್ತಿದ್ದರು.
ಬಾಬಾರೊಂದಿಗೆ ಹೈದರಾಬಾದ್ಗೆ ಹೋಗಿದ್ದ ಮಹಿಳೆಯನ್ನು ತನ್ನ ಪತ್ನಿಯೆಂದು ಆತ ಹೊಟೇಲ್ ದಾಖಲೆ ಪುಸ್ತಕದಲ್ಲಿ ನಮೂದಿಸಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿರುವ ಸಾರಥಿ ಬಾಬಾ, ಸಂಬಂಧಿತ ಟಿವಿ ವಾಹಿನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದ್ದಾನೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications