Odisha Train Accident: ಅಪಘಾತ ಸ್ಥಳದಲ್ಲಿ ರೈಲು ಸಂಚಾರ ಆರಂಭ
ಭೀಕರ ರೈಲು ಅಪಘಾತದ ಬಳಿಕ ಒಡಿಶಾದ ಬಾಲಸೋರ್ ನಲ್ಲಿ ರೈಲು ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಮಾಡಿದ್ದಾರೆ. ರೈಲು ಅಪಘಾತದ ಬಳಿಕ ಇದೇ ಹಳಿಯನ್ನು ಸರಿಪಡಿಸುವ ಕಾರ್ಯ ಭರದಿಂದ ಸಾಗಿತ್ತು, ಈಗ ಒಂದು ಮಾರ್ಗದಲ್ಲಿ ರಿಪೇರಿ ಕೆಲಸ ಮುಗಿದಿದ್ದು ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಮೂರು ರೈಲುಗಳು ಅಪಘಾತವಾದ ಬಳಿಕೆ ರೈಲ್ವೇ ಮಾರ್ಗಗಳಿಗೆ ಸಾಕಷ್ಟು ಹಾನಿಯಾಗಿತ್ತು, ಈ ಮಾರ್ಗದಲ್ಲಿ ಚಲಿಸುವ ಎಲ್ಲಾ ರೈಲುಗಳನ್ನು ರದ್ದು ಮಾಡಲಾಗಿತ್ತು. ಹಳಿಗಳಿಗೆ ಮೇಲೆ ಬಿದ್ದಿದ್ದ ಬೋಗಿಗಳನ್ನು ತೆರವು ಮಾಡಿದ ಬಳಿಕ, ಹಳಿಯನ್ನು ಸರಿಪಡಿಸುವ ಕೆಲಸ ಶುರುವಾಗಿತ್ತು.

ಒಂದು ಮಾರ್ಗದ ಹಳಿ ಜೋಡಣಾ ಕೆಲಸ ಮುಕ್ತಾಯವಾಗಿದ್ದು ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಉಳಿದ ರೈಲ್ವೆ ಹಳಿಯನ್ನು ಸರಿಪಡಿಸುವ ಕೆಲಸ ಕೂಡ ಭರದಿಂದ ಸಾಗುತ್ತಿದ್ದು, ವಿದ್ಯುತ್ ಮಾರ್ಗವನ್ನು ಸರಿ ಮಾಡಿದ ನಂತರ ರೈಲುಗಳ ಓಡಾಟಕ್ಕೆ ಅನುಮತಿ ನೀಡುವುದಾಗಿ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Down-line restoration complete. First train movement in section. pic.twitter.com/cXy3jUOJQ2
— Ashwini Vaishnaw (@AshwiniVaishnaw) June 4, 2023
ಮೂರು ದಿನದಿಂದ ಅಲ್ಲೆ ವಾಸ್ತವ್ಯ
ಇನ್ನು ಕೇಂದ್ರ ರೈಲ್ವೆ ಸಚಿವ ಕಳೆದ ಮೂರು ದಿನಗಳಿಂದ ಘಟನಾ ಸ್ಥಳದಲ್ಲಿ ಬೀಡುಬಿಟ್ಟಿದ್ದು ಎಲ್ಲಾ ಕೆಲಸಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರೈಲು ಬೋಗಿಗಳನ್ನು ಯಶಸ್ವಿಯಾಗಿ ಹಳಿಯಿಂದ ದೂರ ಸರಿಸಲುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿದ್ದರು. ಹಿಂದೆಯೇ ಹಳಿಗಳನ್ನು ಸರಿಪಡಿಸುವ ಕೆಲಸ ಆರಂಭಿಸಲಾಗಿತ್ತು. ಸದ್ಯ ಇಂದು ಮಾರ್ಗದ ರಿಪೇರಿ ಕೆಲಸ ಮುಗಿದಿದ್ದು ರೈಲು ಸಂಚಾರ ಶುರುವಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications