ಒಡಿಶಾದಲ್ಲಿ ತರಬೇತಿ ಏರ್ ಕ್ರಾಫ್ಟ್ ಅಪಘಾತ, ಇಬ್ಬರು ಸಾವು
ಧೆಂಕನಾಲ್(ಒಡಿಶಾ), ಜೂನ್ 8: ಕೊರೊನಾವೈರಸ್ ಲಾಕ್ಡೌನ್ ನಡುವೆ ಅನ್ ಲಾಕ್ 1.0 ಆರಂಭವಾಗಿದೆ. ಲಾಕ್ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ತರಬೇತಿ ಕೇಂದ್ರಗಳು ಆರಂಭವಾಗಿದೆ. ಆದರೆ, ಮೊದಲ ದಿನವೇ ದುರಂತ ಸಂಭವಿಸಿದೆ. ಧೆಂಕನಾಲ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಏರ್ ಕ್ರಾಫ್ಟ್ ನೆಲಕಪ್ಪಳಿಸಿದೆ.
Recommended Video
ತರಬೇತಿ ಲಘು ವಿಮಾನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ. ಮಹಿಳಾ ಪೈಲಟ್ ಹಾಗೂ ಮಾರ್ಗದರ್ಶಕರೊಬ್ಬರು ಮಾತ್ರ ಇದ್ದರು ಎಂದು ತಿಳಿದು ಬಂದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಕಂಕದಹಾದ ಪೊಲೀಸ್ ಠಾಣೆ ವ್ಯಾಪ್ತಿಯ ಬಿರ್ಸಾಲಾದ ಸರ್ಕಾರಿ ವಿಮಾನಯಾನ ತರಬೇತಿ ಕೇಂದ್ರ(GATI)ಗೆ ಸೇರಿದ ಏರ್ ಕ್ರಾಫ್ಟ್ ಇದಾಗಿದೆ.

ತರಬೇತಿ ಕೇಂದ್ರದಿಂದ ಟೇಕಾಫ್ ಆದ ಕೆಲ ಕ್ಷಣದಲ್ಲೇ ನಿಯಂತ್ರಣ ತಪ್ಪಿದ ಏರ್ ಕ್ರಾಫ್ಟ್ ಗಿರಕಿ ಹೊಡೆಯುತ್ತಾ ನೆಲಕ್ಕುರುಳಿದೆ. ಏರ್ ಕ್ರಾಫ್ಟ್ ಪತನಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆದಿದೆ. ತಾಂತ್ರಿಕ ತೊಂದರೆ ಅಥವಾ ಪ್ರತಿಕೂಲ ಹವಾಮಾನ ಇರಬಹುದು ಎಂದು ಅಧಿಕಾರಿಗಳು ತಕ್ಷಣಕ್ಕೆ ಪ್ರತಿಕ್ರಿಯಿಸಿದ್ದಾರೆ. ಏರ್ ಕ್ರಾಫ್ಟ್ ನಲ್ಲಿರುವ ಬ್ಲಾಕ್ ಬಾಕ್ಸ್ ಸಿಕ್ಕ ತಕ್ಷಣ ಹೆಚ್ಚಿನ ಮಾಹಿತಿ ಸಿಗಲಿದೆ.
ಮೃತರನ್ನು ಬಿಹಾರ ಮೂಲದ ಕ್ಯಾಪ್ಟನ್ ಸಂಜೀಬ್ ಕುಮಾರ್ ಹಾಗೂ ತಮಿಳುನಾಡು ಮೂಲದ ತರಬೇತಿ ಪೈಲಟ್ ಅನಿಸ್ ಫಾತಿಮಾ ಎಂದು ಗುರುತಿಸಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆ ಜಾರಿಯಲ್ಲಿದ್ದು, ವರದಿ ಬಂದ ಬಳಿಕ ಹೆಚ್ಚಿನ ವಿವರ ಸಿಗಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications