ಒಡಿಶಾದಲ್ಲಿ ತರಬೇತಿ ಏರ್ ಕ್ರಾಫ್ಟ್ ಅಪಘಾತ, ಇಬ್ಬರು ಸಾವು
ಧೆಂಕನಾಲ್(ಒಡಿಶಾ), ಜೂನ್ 8: ಕೊರೊನಾವೈರಸ್ ಲಾಕ್ಡೌನ್ ನಡುವೆ ಅನ್ ಲಾಕ್ 1.0 ಆರಂಭವಾಗಿದೆ. ಲಾಕ್ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ತರಬೇತಿ ಕೇಂದ್ರಗಳು ಆರಂಭವಾಗಿದೆ. ಆದರೆ, ಮೊದಲ ದಿನವೇ ದುರಂತ ಸಂಭವಿಸಿದೆ. ಧೆಂಕನಾಲ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಏರ್ ಕ್ರಾಫ್ಟ್ ನೆಲಕಪ್ಪಳಿಸಿದೆ.
Recommended Video
ತರಬೇತಿ ಲಘು ವಿಮಾನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ. ಮಹಿಳಾ ಪೈಲಟ್ ಹಾಗೂ ಮಾರ್ಗದರ್ಶಕರೊಬ್ಬರು ಮಾತ್ರ ಇದ್ದರು ಎಂದು ತಿಳಿದು ಬಂದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಕಂಕದಹಾದ ಪೊಲೀಸ್ ಠಾಣೆ ವ್ಯಾಪ್ತಿಯ ಬಿರ್ಸಾಲಾದ ಸರ್ಕಾರಿ ವಿಮಾನಯಾನ ತರಬೇತಿ ಕೇಂದ್ರ(GATI)ಗೆ ಸೇರಿದ ಏರ್ ಕ್ರಾಫ್ಟ್ ಇದಾಗಿದೆ.

ತರಬೇತಿ ಕೇಂದ್ರದಿಂದ ಟೇಕಾಫ್ ಆದ ಕೆಲ ಕ್ಷಣದಲ್ಲೇ ನಿಯಂತ್ರಣ ತಪ್ಪಿದ ಏರ್ ಕ್ರಾಫ್ಟ್ ಗಿರಕಿ ಹೊಡೆಯುತ್ತಾ ನೆಲಕ್ಕುರುಳಿದೆ. ಏರ್ ಕ್ರಾಫ್ಟ್ ಪತನಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆದಿದೆ. ತಾಂತ್ರಿಕ ತೊಂದರೆ ಅಥವಾ ಪ್ರತಿಕೂಲ ಹವಾಮಾನ ಇರಬಹುದು ಎಂದು ಅಧಿಕಾರಿಗಳು ತಕ್ಷಣಕ್ಕೆ ಪ್ರತಿಕ್ರಿಯಿಸಿದ್ದಾರೆ. ಏರ್ ಕ್ರಾಫ್ಟ್ ನಲ್ಲಿರುವ ಬ್ಲಾಕ್ ಬಾಕ್ಸ್ ಸಿಕ್ಕ ತಕ್ಷಣ ಹೆಚ್ಚಿನ ಮಾಹಿತಿ ಸಿಗಲಿದೆ.
ಮೃತರನ್ನು ಬಿಹಾರ ಮೂಲದ ಕ್ಯಾಪ್ಟನ್ ಸಂಜೀಬ್ ಕುಮಾರ್ ಹಾಗೂ ತಮಿಳುನಾಡು ಮೂಲದ ತರಬೇತಿ ಪೈಲಟ್ ಅನಿಸ್ ಫಾತಿಮಾ ಎಂದು ಗುರುತಿಸಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆ ಜಾರಿಯಲ್ಲಿದ್ದು, ವರದಿ ಬಂದ ಬಳಿಕ ಹೆಚ್ಚಿನ ವಿವರ ಸಿಗಲಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications