ರಾಮಾಯಣದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಟ್ವಿಟ್ಟರ್ನಲ್ಲಿ ಯುಪಿಎಸ್ಪಿ ತರಬೇತುದಾರನ ವಿರುದ್ಧ ಆಕ್ರೋಶ
ನವದೆಹಲಿ, ನವೆಂಬರ್ 11: ರಾಮಾಯಣದ ಬಗ್ಗೆ ತರಗತಿಯಲ್ಲಿ ಆಕ್ಷೇಪಾರ್ಹ ವಿವರ ನೀಡುತ್ತಿರುವ ವಿಡಿಯೋ ಟ್ವಿಟ್ಟರ್ನಲ್ಲಿ ವೈರಲ್ ಆಗಿದೆ. ದೆಹಲಿಯ ಜನಪ್ರಿಯ ಯುಪಿಎಸ್ಸಿ ಕೋಚಿಂಗ್ ಸೆಂಟರ್ 'ದೃಷ್ಟಿ ಐಎಎಸ್' ವಿರುದ್ಧ ಶುಕ್ರವಾರ ಬೆಳಗ್ಗೆಯಿಂದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುಪಿಎಸ್ಸಿ ತರಬೇತುದಾರ ವಿಕಾಸ್ ದಿವ್ಯಕೀರ್ತಿ ಎಂಬುವವರ ಉಪನ್ಯಾಸದ ವಿಡಿಯೋ ವೈರಲ್ ಆದ ನಂತರ #BanDrishtiIAS ಎಂದು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಈ ವಿಡಿಯೋದಲ್ಲಿ ವಿಕಾಸ್ ದಿವ್ಯಕೀರ್ತಿ ಅವರು ತಮ್ಮ ಯುಪಿಎಸ್ಸಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಮಹಾಕಾವ್ಯ ರಾಮಾಯಣವನ್ನು ಬೋಧಿಸುವಾಗ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಇದರಿಂದ ಆಕ್ರೋಶಗೊಂಡ ಟ್ವಿಟ್ಟರ್ ಬಳಕೆದಾರರು ಕೋಚಿಂಗ್ ಸಂಸ್ಥೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅನೇಕ ಟ್ವಿಟ್ಟರ್ ಬಳಕೆದಾರರು ವಿಕಾಸ್ ಹೇಳಿಕೆಯಿಂದ ಮನನೊಂದು ಯುಪಿಎಸ್ಸಿ ತರಬೇತುದಾರ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಟ್ವಿಟ್ಟರ್ನಲ್ಲಿ #BanDrishtiIAS ಎಂಬ ಹ್ಯಾಶ್ಟ್ಯಾಗ್ ಪ್ರಸ್ತುತ ಟ್ರೆಂಡಿಂಗ್ ಆಗಿದೆ. ಕೆಲವೇ ಗಂಟೆಗಳಲ್ಲಿ ಸಾವಿರಕ್ಕೂ ಹೆಚ್ಚು #BanDrishtiIAS ಟ್ವೀಟ್ಗಳು ಕಾಣಿಸಿಕೊಂಡಿವೆ.

ಟ್ವಿಟ್ಟರ್ನಲ್ಲಿ ಇತರರು ವಿಕಾಸ್ ಅವರು ತಮ್ಮ ಉಪನ್ಯಾಸದ ಸಮಯದಲ್ಲಿ ಇನ್ನೊಬ್ಬ ಲೇಖಕರ ಕೃತಿಗಳನ್ನು ಉಲ್ಲೇಖಿಸುವಾಗ ಪ್ರಾಧ್ಯಾಪಕರು ಪ್ರಶ್ನೆಯ ಮೂಲಕ ಟೀಕೆಗಳನ್ನು ಮಾಡಿದ್ದಾರೆ. ವಿಕಾಸ್ ದಿವ್ಯಕೀರ್ತಿ ಅವರು ಹಿಂದೂ ದೇವತೆಗಳಾದ ರಾಮ ಮತ್ತು ಸೀತೆಯನ್ನು ಅಪಹಾಸ್ಯ ಮಾಡುವ ಮೂಲಕ ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎನ್ನಲಾಗಿದೆ.
ಈ ವಿಡಿಯೋ ವೈರಲ್ ಆದ ನಂತರ ನೆಟ್ಟಿಗರು ವಿಕಾಸ್ ದಿವ್ಯಕೀರ್ತಿ ಅವರ ಇತರ ಉಪನ್ಯಾಸಗಳ ವಿಡಿಯೋ ತುಣುಕುಗಳನ್ನು ಹುಡುಕಿ ತಗೆದಿದ್ದಾರೆ. ದೃಷ್ಟಿ ಐಎಎಸ್ ತರಬೇತುದಾರರು ಕಾಲಾನಂತರದಲ್ಲಿ ಹೇಗೆ ಸೂಕ್ಷ್ಮವಾಗಿ ಐಎಎಸ್ ಆಕಾಂಕ್ಷಿಗಳಿಗೆ ಬ್ರೈನ್ವಾಶ್ ಮಾಡುತ್ತಿದ್ದಾರೆ ಮತ್ತು ಅವರ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧವಾಗಲು ಸಹಾಯ ಮಾಡುವ ನೆಪದಲ್ಲಿ ಅವರ ಮನಸ್ಸಿನಲ್ಲಿ ಹಿಂದೂಫೋಬಿಯಾವನ್ನು ತುಂಬುತ್ತಿದ್ದಾರೆ ಎಂದು ಹೇಳಿದ್ದಾರೆ.
IAS की Coaching दे रहा ये व्यक्ति “माँ सीता की तुलना कुत्ते द्वारा चाटे गए घी से कर रहा है…”😡
— Jyot Jeet (@activistjyot) November 11, 2022
ये माँ सीता का अपमान है…
जरा सोचिए कि ऐसे लोग कैसी सोच वाले IAS Officers तैयार करेंगे…?
क्या इस व्यक्ति पर कार्यवाही नहीं होनी चाहिए…?
#BanDrishtiIAS pic.twitter.com/EEDvECYnPi
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications