ದುರ್ಗಮ ಹಾದಿಯಲ್ಲಿ 15 ಕಿ.ಮೀ ನಡೆದು ಕುಗ್ರಾಮ ತಲುಪಿದ ಅಧಿಕಾರಿ
ಸಿಯಾಹಾ(ಮಿಜೋರಂ), ಆಗಸ್ಟ್ 31: ಆಡಳಿತಾಧಿಕಾರಿಗಳು ಬಹುತೇಕ ಎಸಿ ಕಚೇರಿಯಲ್ಲಿ, ಎಸಿ ಕಾರಿನಲ್ಲಿ ತಿರುಗುವುದೇ ಹೆಚ್ಚು ಆದರೆ ಇಲ್ಲೊಬ್ಬ ಅಧಿಕಾರಿ ಕುಗ್ರಾಮವೊಂದನ್ನು ಸಂದರ್ಶಿಸಲು 15 ಕಿ.ಮೀ ದುರ್ಗಮ ರಸ್ತೆಯನ್ನು ಕಾಲ್ನಡಿಗೆಯಲ್ಲಿ ಸವೆಸಿದ್ದಾರೆ.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಐಎಎಸ್ ಅಧಿಕಾರಿ ಭೂಪೇಶ್ ಚೌಧರಿ ಅವರು ತಮ್ಮ ಆಡಳಿತ ವ್ಯಾಪ್ತಿಯ ಅಡಿಯಲ್ಲಿ ಬರುವ ಕುಗ್ರಾಮ ತಿಸೋಪಿ ಎಂಬ ಹಳ್ಳಿಗೆ ಹದಿನೈದು ಕಿ.ಮೀ ನಡೆದು ಹೋಗಿದ್ದಾರೆ. ತಿಸೋಪಿ ಹಳ್ಳಿಯನ್ನು ತಲುಪುವ ಹಾದಿ ದುರ್ಗಮವಾದ ಬೆಟ್ಟ ಗುಡ್ಡಗಳು, ಕಾಡು ಹಾದು ಹೋಗಬೇಕಾಗಿದೆ. ಅದನ್ನೆಲ್ಲವನ್ನೂ ದಾಟಿ ಅವರು ಹಳ್ಳಿ ತಲುಪಿದ್ದಾರೆ.
ತಮ್ಮ ಗ್ರಾಮಕ್ಕೆ ಬಂದ ಅತಿಥಿಯನ್ನು ಹಳ್ಳಿಯ ಜನ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಅವರಿಗೆ ಹಾರ ಹಾಕಿ, ಅಧಿಕಾರಿಯನ್ನು ಬಿದಿರಿನ ಪಲ್ಲಕ್ಕಿಯ ಮೇಲೆ ಕೂರಿಸಿ ಹಳ್ಳಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಹಳ್ಳಿಗೆ ಅಧಿಕಾರಿಯೊಬ್ಬರು ಬಂದಿರುವುದಂತೆ.

ಐಎಎಸ್ ಅಧಿಕಾರಿ ಬೆಟ್ಟ ಗುಡ್ಡಗಳು, ಕಣಿವೆಗಳ ಪಕ್ಕ ಹಾದು ಬರುತ್ತಿರುವ ಚಿತ್ರಗಳು, ಹಳ್ಳಿಗರು ಅಧಿಕಾರಿಗೆ ನೀಡಿದ ಅದ್ಧೂರಿ ಸ್ವಾಗತದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸ್ವತಃ ಭೂಪೇಶ್ ಚೌದರಿ ಸಹ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ತಿಸೋಪಿ ಹಳ್ಳಿಯಲ್ಲಿ ಸುಮಾರು 400 ಜನರು ವಾಸವಿದ್ದಾರೆ. ಈ ಹಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದಾಗಿ ಅಧಿಕಾರಿಯು ಹಳ್ಳಿಗೆ ಭೇಟಿ ನೀಡಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications