ಸಾವಿರಕ್ಕೂ ಹೆಚ್ಚು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದ ಒಲಾ
ಬೆಂಗಳೂರು, ಆಗಸ್ಟ್ 17 : ಭಾರತದ ಅತೀದೊಡ್ಡ ಕ್ಯಾಬ್ ಸೇವಾ ಸಂಸ್ಥೆ ಒಲಾ 1000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿರುವುದಾಗಿ ಬುಧವಾರ ಪ್ರಕಟಿಸಿದೆ.
ಕೆಲಸದಿಂದ ತೆಗೆಯಲಾಗಿರುವ ಉದ್ಯೋಗಿಗಳ ನಿರ್ದಿಷ್ಟ ಅಂಕಿಸಂಖ್ಯೆಯನ್ನು ನೀಡಲು ಕಂಪನಿ ನಿರಾಕರಿಸಿದೆಯಾದರೂ, ಟ್ಯಾಕ್ಸಿ ಫಾರ್ ಶೂರ್ ಕಂಪನಿಗಾಗಿ ಕೆಲಸ ಮಾಡುತ್ತಿದ್ದವರನ್ನು ಕೆಲಸದಿಂದ ತೆಗೆದಿರುವುದಾಗಿ ಹೇಳಿಕೆ ನೀಡಿದೆ. ಹಾಗೆಯೆ, ಕೆಲಸ ಕಳೆದುಕೊಂಡಿರುವ ಉದ್ಯೋಗಿಗಳಿಗೆ ಪರಿಹಾರ ನೀಡಿ, ಮುಂದೆ ಸಹಾಯ ಮಾಡುವುದಾಗಿಯೂ ಹೇಳಿದೆ.[ಓಲಾ, ಊಬರ್ ಟ್ಯಾಕ್ಸಿ ರದ್ದು ಮಾಡಿದರೂ ದಂಡ ಕಟ್ಟಬೇಕು!]

ಅಂತಾರಾಷ್ಟ್ರೀಯ ಕಂಪನಿಯಾದ ಉಬರ್ ಜೊತೆ ಸೆಡ್ಡು ಹೊಡೆಯುವ ಪ್ರಯತ್ನವಾಗಿ ಕಳೆದ ವರ್ಷದ ಮಾರ್ಚ್ ನಲ್ಲಿ ಒಲಾ ಕಂಪನಿ ಟ್ಯಾಕ್ಸಿ ಫಾರ್ ಶೂರ್ ಕಂಪನಿಯನ್ನು 200 ಮಿಲಿಯನ್ ಡಾಲರ್ಗೆ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ತದ ನಂತರ 90ಕ್ಕೂ ಹೆಚ್ಚು ನಗರಗಳಲ್ಲಿ ತನ್ನ ಸೇವೆಯನ್ನು ವಿಸ್ತರಿಸಿಕೊಂಡಿದೆ.[ಬೆಂಗಳೂರಲ್ಲೂ ಓಲಾ ಲಕ್ಸ್ : ಐಷಾರಾಮಿ ಕಾರಲ್ಲಿ ಸುತ್ತಾಡಿ]
ಈ ಪ್ರಕ್ರಿಯೆ ಮುಗಿದ ನಂತರವೂ ಒಲಾ ಮತ್ತು ಟ್ಯಾಕ್ಸಿ ಫಾರ್ ಶೂರ್ ಕಂಪನಿಗಳು ಪ್ರತ್ಯೇಕವಾಗಿಯೇ ಕೆಲಸ ನಿರ್ವಹಿಸುತ್ತಿವೆ. ಈ ಬೆಳವಣಿಗೆ ನಡೆದ ನಂತರ ಟ್ಯಾಕ್ಸಿ ಫಾರ್ ಶೂರ್ ಕಂಪನಿಯ ಚಾಲಕರು ಒಲಾದ ಆಪ್ ಅನ್ನು ಬಳಸುತ್ತಿವೆ. ಒಂದು ಮೂಲದ ಪ್ರಕಾರ 1300 ಟ್ಯಾಕ್ಸಿ ಫಾರ್ ಶೂರ್ ಉದ್ಯೋಗಿಗಳಲ್ಲಿ ಕೇವಲ 250 ಉದ್ಯೋಗಿಗಳನ್ನು ಮಾತ್ರ ಒಲಾ ಉಳಿಸಿಕೊಂಡಿದೆ.[ಕರ್ನಾಟಕದಲ್ಲಿ ಓಡಾಡುವ ಓಲಾಕ್ಕೆ ಸಿಕ್ತು ಪರವಾನಗಿ]
ಇತ್ತೀಚೆಗೆ ಫ್ಲಿಪ್ ಕಾರ್ಟ್ ದೇಶದಾದ್ಯಂತ ಸುಮಾರು 650 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ. ಇನ್ಫೋಸಿಸ್ ಕೂಡ ಸುಮಾರು 3000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡುತ್ತಿರುವುದಾಗಿ ಸುದ್ದಿ ಹಬ್ಬಿತ್ತು. ಸಾಫ್ಟ್ ವೇರ್ ಕಂಪನಿ ಸಿಸ್ಕೋ ವಿಶ್ವದಾದ್ಯಂತ 12 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡುತ್ತಿದೆ. ಈಗ ಒಲಾದ ಸರದಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications