ಕರ್ನಾಟಕದ ಬೆಂಗಳೂರು ಸೇರಿದ ದೇಶದ ಪ್ರಮುಖ ನಗರಗಳಲ್ಲಿ ಫೆಬ್ರವರಿ 7ರಂದು ಕ್ಯಾಬ್, ಆಟೋ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಸಾಧ್ಯತೆ
Ola, Uber, Rapido Drivers strike: ಭಾರತದಲ್ಲಿ ಆ್ಯಪ್ ಆಧಾರಿತ ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಚಾಲಕರ ಸಂಘಟನೆಗಳು ಫೆಬ್ರವರಿ 7ರ ಶನಿವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಓಲಾ, ಉಬರ್ ಹಾಗೂ ರ್ಯಾಪಿಡೋ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು ಈ ಹೋರಾಟದಲ್ಲಿ ಭಾಗವಹಿಸುವ ಸಾಧ್ಯತೆಯಿದ್ದು, ಕರ್ನಾಟಕ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕ್ಯಾಬ್, ಆಟೋ ಹಾಗೂ ಬೈಕ್ ಟ್ಯಾಕ್ಸಿ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಪ್ರತಿಭಟನೆಯನ್ನು 'ಆಲ್ ಇಂಡಿಯಾ ಬ್ರೇಕ್ಡೌನ್' ಎಂದು ಕರೆಯಲಾಗಿದ್ದು, ಸುಮಾರು 6 ಗಂಟೆಗಳ ಕಾಲ ಆ್ಯಪ್ ಆಧಾರಿತ ಸಾರಿಗೆ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಯಾಕಂದ್ರೆ, ಚಾಲಕರು ತಮ್ಮ ರೈಡ್-ಹೇಲಿಂಗ್ ಅಪ್ಲಿಕೇಶನ್ಗಳನ್ನು ಏಕಕಾಲದಲ್ಲಿ ಸ್ವಿಚ್ ಆಫ್ ಮಾಡುವ ನಿರೀಕ್ಷೆಯಿದೆ. ತೆಲಂಗಾಣ ಗಿಗ್ ಮತ್ತು ಪ್ಲಾಟ್ಫಾರ್ಮ್ ವರ್ಕರ್ಸ್ ಯೂನಿಯನ್ ಮುಷ್ಕರಕ್ಕೆ ನೇತೃತ್ವ ವಹಿಸಿದ್ದು, ಇತರ ರಾಜ್ಯಗಳ ಚಾಲಕ ಸಂಘಟನೆಗಳು ಸಹ ಬೆಂಬಲ ಸೂಚಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಾಲಕರ ಆದಾಯ ಕುಸಿತ: ಚಾಲಕರ ಸಂಘಗಳ ಆರೋಪದಂತೆ, 2025ರ ಮೋಟಾರು ವಾಹನ ಮಾರ್ಗಸೂಚಿಗಳು ಇದ್ದರೂ ಸಹ ಹಲವು ರೈಡ್-ಹೇಲಿಂಗ್ ಕಂಪನಿಗಳು ದರಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸುತ್ತಿವೆ. ಇದರಿಂದ ಚಾಲಕರ ಆದಾಯ ಕುಸಿತವಾಗಿದ್ದು, ಕೆಲಸದ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆಯ ಕೊರತೆ ಎದುರಾಗುತ್ತಿದೆ. ಕನಿಷ್ಠ ದರಗಳಿಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಗಳು ಅಸಮಾಧಾನ ವ್ಯಕ್ತಪಡಿಸಿವೆ.
ಫೆಬ್ರವರಿ 7ರಂದು ಕೆಲಸ ಸ್ಥಗಿತದ ಎಚ್ಚರಿಕೆ: ಈ ಹಿಂದೆ ಟ್ವಿಟರ್ನಲ್ಲಿ ಮುಷ್ಕರ ಘೋಷಿಸಿದ ಸಂಘಗಳು, ದೇಶಾದ್ಯಂತ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ಫೆಬ್ರವರಿ 7ರಂದು ಕೆಲಸ ಸ್ಥಗಿತಗೊಳಿಸುತ್ತಾರೆ ಎಂದು ಹೇಳಿವೆ. ಈ ಮುಷ್ಕರದಿಂದ ಹಲವು ನಗರಗಳಲ್ಲಿ ಸಾರಿಗೆ ಸೇವೆ ಸ್ಥಗಿತವಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಇದೆ.
Hon’ble @nitin_gadkari ji, @MORTHIndia @Ponnam_INC App-based drivers and riders across India demand government-notified minimum base fares for #Ola, #Uber, #Rapido #Porter other aggregators, as mandated under Motor Vehicle Aggregator Guidelines, 2025. pic.twitter.com/epMHtJKOXS
— Telangana Gig and Platform Workers Union (@TGPWU) February 1, 2026
ಸಂಘಟನೆಗಳ ಆಗ್ರಹವೇನು?: ಸಂಘಟನೆಗಳ ಪ್ರಕಾರ, ಕಂಪನಿಗಳು ದೊಡ್ಡ ಪ್ರಮಾಣದ ಲಾಭ ಗಳಿಸುತ್ತಿವೆ. ಆದರೂ ಸಹ ಚಾಲಕರಿಗೆ ನ್ಯಾಯಯುತ ಆದಾಯ ಒದಗಿಸುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ನಿಯಂತ್ರಣಾತ್ಮಕ ಚೌಕಟ್ಟನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಚಾಲಕರ ಪ್ರಮುಖ ಬೇಡಿಕೆಗಳು
* ಆಟೋ, ಕ್ಯಾಬ್ ಮತ್ತು ಬೈಕ್ ಟ್ಯಾಕ್ಸಿಗಳಿಗೆ ಕನಿಷ್ಠ ಮೂಲ ದರಗಳನ್ನು ನಿಗದಿಪಡಿಸಬೇಕು.
* ವಾಣಿಜ್ಯ ಉದ್ದೇಶಕ್ಕೆ ಖಾಸಗಿ ವಾಹನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು.
* ಚಾಲಕರಿಗೆ ಸಾಮಾಜಿಕ ಭದ್ರತೆ, ವಿಮೆ ಹಾಗೂ ಕೆಲಸದ ಸಮಯಕ್ಕೆ ಸಂಬಂಧಿಸಿದ ನಿಯಮಗಳನ್ನು ಕಾನೂನುಬದ್ಧವಾಗಿ ಜಾರಿಗೆ ತರಬೇಕು.
ಯಾವೆಲ್ಲಾ ನಗರಗಳಲ್ಲಿ ಸೇವೆ ಸ್ಥಗಿತ?: ಮುಷ್ಕರದ ಪರಿಣಾಮ ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್, ಚೆನ್ನೈ ಸೇರಿದಂತೆ ಹಲವಾರು ಮಹಾನಗರಗಳಲ್ಲಿ ಆ್ಯಪ್ ಆಧಾರಿತ ಸಾರಿಗೆ ಸೇವೆಗಳು ಸ್ಥಗಿತವಾಗುವ ಸಾಧ್ಯತೆಯಿದೆ. ಪ್ರಯಾಣಿಕರು ಪರ್ಯಾಯ ಸಾರಿಗೆ ವ್ಯವಸ್ಥೆಗಳನ್ನು ಹುಡುಕಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ಚಾಲಕರ ಸಂಘಗಳು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧವಿದ್ದು, ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ದೊಟ್ಟ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಈ ಮುಷ್ಕರವು ಗಿಗ್ ಕಾರ್ಮಿಕರ ಸಮಸ್ಯೆಗಳತ್ತ ದೇಶದ ಗಮನ ಸೆಳೆಯುವ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications