Tirupati Tirumala: ತಿರುಪತಿಯಲ್ಲಿ ಮತ್ತೆ ಹಳೆ ಪದ್ಧತಿ ಜಾರಿ.. ಕಾರಣ ಏನು ಗೊತ್ತಾ?
ತಿರುಪತಿ ತಿರುಮಲ ದೇವಸ್ಥಾನ ಅನೇಕ ಪವಾಡಗಳಿಗೆ ಹೆಸರುವಾಸಿಯಾಗಿದೆ. ಈ ದೇವಾಲಯ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾಗಿದೆ.
ಈ ದೇಗುಲವು ಭಗವಾನ್ ವಿಷ್ಣುವಿನ ಅವತಾರವೆಂದು ನಂಬಲಾದ ವೆಂಕಟೇಶನಿಗೆ ಸಮರ್ಪಿತವಾಗಿದೆ. ಸದ್ಯ ತಿರುಪತಿಯಲ್ಲಿ ವಂಚನೆಯನ್ನು ತಡೆಹಿಡಿಯಲು ನಾನಾ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದಕ್ಕಾಗಿ ಹಳೆ ಪದ್ಧತಿ ಜಾರಿಗೆ ತರಲು ನಿರ್ಧರಿಸಲಾಗಿದೆ.

ಏಳು ಬೆಟ್ಟಗಳ ಒಡೆಯ ಹಾಗೂ ವಿಶ್ವದ ಶ್ರೀಮಂತ ದೇವರು ಎಂದು ಕರೆಯಲಾಗುವ ತಿರುಪತಿ ತಿಮ್ಮಪ್ಪನ ಈ ದೇವಸ್ಥಾನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿದೆ. ಚಿನ್ನ, ವಜ್ರ, ರೇಷ್ಮೆ, ಪೀತಾಂಬರ ಮುಂತಾದ ಸಂಪತ್ತನ್ನು ಹೊಂದಿರುವ ದೇವರು ಈ ಶ್ರೀವಾರಿ. ಋಣ ತೀರಿಸಲು ಮತ್ತು ಪಾಪಗಳನ್ನು ತೊಲಗಿಸಲು ಕೃಪೆಯನ್ನು ನೀಡುವ ದೇವರು ಎಂದೇ ಖ್ಯಾತಿ ಪಡೆದಿದ್ದಾನೆ. ಆದ್ದರಿಂದ ವರ್ಷವಿಡೀ ಪ್ರಪಂಚದಾದ್ಯಂತದ ಭಕ್ತರು ಸಾಗರೋಪಾದಿಯಲ್ಲಿ ಇಲ್ಲಿಗೆ ಭೇಟಿ ನೀಡುತ್ತಾರೆ.
ಭಕ್ತರ ಸಂಖ್ಯೆ ಹೆಚ್ಚಾದಂತೆ ಭದ್ರತೆಯೊಂದಿಗೆ ನಾನಾ ಸೌಲಭ್ಯಗಳನ್ನು ಒದಗಿಸಲು ನಿತ್ಯ ಮೇಲ್ವಿಚಾರಣೆ ಮಾಡುವುದು ಮುಖ್ಯವಾಗಿದೆ. ಹೀಗಾಗಿ ದೇವಾಲಯದಲ್ಲಿ ಭಕ್ತರು ಹೋಗುವ ಎರಡೂ ಕಾರಿಡಾರ್ಗಳಲ್ಲಿ ದಿವ್ಯ ದರ್ಶನ ಟೋಕನ್ಗಳ ಸ್ಕ್ಯಾನಿಂಗ್ ಅನ್ನು ಪುನರಾರಂಭಿಸುವಂತೆ ಐಟಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರಿಂದ ವಂಚನೆಯನ್ನು ತಡೆಯಬಹುದು ಎಂದು ಆಡಳಿತಾಧಿಕಾರಿ ಶ್ಯಾಮಲಾ ರಾವ್ ತಿಳಿಸಿದ್ದಾರೆ.
ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ತಿರುಪತಿಯಿಂದ ನಡೆದುಕೊಂಡು ಹೋಗುವ ಭಕ್ತರ ದಿವ್ಯ ದರ್ಶನ ಟೋಕನ್ಗಳನ್ನು ಸ್ಕ್ಯಾನ್ ಮಾಡಲು ನಾರಾಯಣಗಿರಿ ಗಾರ್ಡನ್ನಲ್ಲಿ ಎಲೆಕ್ಟ್ರಾನಿಕ್ ಬೋರ್ಡ್ಗಳನ್ನು ಸ್ಥಾಪಿಸುವ ಅಗತ್ಯವನ್ನು ತಿರುಮಲ ತಿರುಪತಿ ದೇವಸ್ಥಾನದ ನೂತನ ಆಡಳಿತಾಧಿಕಾರಿ ಶ್ಯಾಮಲಾ ರಾವ್ ಒತ್ತಿ ಹೇಳಿದರು.

ಜೂನ್ 18 ರಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಶ್ಯಾಮಲಾ ರಾವ್ ಅವರು ಅಧಿಕಾರ ಸ್ವೀಕರಿಸಿದರು. ನಂತರ ಅವರು ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ನಿಯಮಿತವಾಗಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದ್ದಾರೆ. ಸತತ ಮೂರನೇ ದಿನವೂ ವಿವಿಧ ಕ್ಷೇತ್ರಗಳ ಪರಿಶೀಲನೆ ನಡೆಸಿದರು. ಸರ್ಕಾರದ ವಿವಿಧ ಇಲಾಖೆಗಳಿಗೆ ನೀಡಿರುವ ದರ್ಶನ ಕೋಟಾ ಟಿಕೆಟ್ ದುರ್ಬಳಕೆಯಾಗದಂತೆ ನೋಡಿಕೊಳ್ಳಲು ವಿಜಿಲೆನ್ಸ್ ಸಿಬ್ಬಂದಿಗೆ ಸೂಚಿಸಿದರು.
ಈ ತಪಾಸಣೆಯ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಗಿರಿ ಉದ್ಯಾನದಲ್ಲಿ ಎಲೆಕ್ಟ್ರಾನಿಕ್ ಬೋರ್ಡ್ಗಳನ್ನು ಅಳವಡಿಸುವಂತೆ ಸೂಚಿಸಿದರು. ಅಲ್ಲದೆ ದೇವರ ದರ್ಶನಕ್ಕಾಗಿ ಅಂದಾಜು ಕಾಯುವ ಸಮಯದ ಮಾಹಿತಿಯನ್ನು ತಿಳಿಯಲಾಯಿತು.
ಇದೇ ವೇಳೆ ದುರುಪಯೋಗಪಡಿಸಿಕೊಳ್ಳುವವರ ವಿವರವಾದ ಪಟ್ಟಿಯೊಂದಿಗೆ ಬರಲು ಶ್ಯಾಮಲಾ ರಾವ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅಲ್ಲದೆ ಆಗಾಗ್ಗೆ ವಸತಿ ಸೌಲಭ್ಯಗಳನ್ನು ಮತ್ತೊಬ್ಬರಿಗೆ ನೀರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ದಾನಿಗಳು, ಹೋಟೆಲ್ಗಳು, ಅಂಗಡಿಗಳು ಮತ್ತು ವ್ಯಾಪಾರಸ್ಥರಿಗೆ ನಿವೇಶನ ಮಂಜೂರು ಮಾಹಿತಿ ಕುರಿತು ಪಂಚಾಯತ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಬಳಿ ಶ್ಯಾಮಲಾ ರಾವ್ ಮಾಹಿತಿ ಪಡೆದರು. ಇಂಜಿನಿಯರಿಂಗ್ ಅಧಿಕಾರಿಗಳಿಗೆ 4 ಅಂತಸ್ತಿನ ರಸ್ತೆ, ಗರ್ಭಗುಡಿ, ಪ್ರಾಕಾರ, ಬೇಡ್ತಿ ಆಂಜನೇಯ ಸ್ವಾಮಿ ದೇವಸ್ಥಾನ, ವಾಹನ ಮಂಟಪ, ರಂಪಕೈಚ ಅತಿಥಿ ಗೃಹಗಳಿಗೆ ಯುದ್ಧಕಾಲದ ಶೈಲಿಯಲ್ಲಿ ಬಣ್ಣ ಬಳಿಯಲು ಸೂಚಿಸಿದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications