'ಸ್ಪೀಕರ್ ಓಂ ಬಿರ್ಲಾ, ಬ್ರಾಹ್ಮಣ ಅನ್ನೋ ಕಾರಣಕ್ಕೆ ನಿಮಗೆ ಗೌರವ ನೀಡುತ್ತಿಲ್ಲ'
ನವದೆಹಲಿ, ಸೆಪ್ಟೆಂಬರ್ 11: "ಬ್ರಾಹ್ಮಣರು ಹುಟ್ಟಿನಿಂದಲೇ ಉನ್ನತ ಸ್ಥಾನ ಪಡೆಯುತ್ತಾರೆ" ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಜಾತಿ ಆಧಾರಿತ ಅಸಮಾನ ಭಾರತದ ಮನಸ್ಥಿತಿಯನ್ನು ಇದು ಸೂಚಿಸುತ್ತದೆ. ಬಿರ್ಲಾ ಜೀಯನ್ನು ನಿಮ್ಮನ್ನು ನಾವು ಗೌರವಿಸುವುದು ಬ್ರಾಹ್ಮಣ ಅಂತಲ್ಲ. ನೀವು ನಮ್ಮ ಲೋಕಸಭೆ ಸ್ಪೀಕರ್ ಎಂಬ ಕಾರಣಕ್ಕೆ ಗೌರವ ನೀಡುತ್ತೇವೆ.
- ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಬುಧವಾರ ಹೀಗೆ ಟ್ವೀಟ್ ಮಾಡುವ ಮೂಲಕ ಓಂ ಬಿರ್ಲಾ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ತಮ್ಮ ಪ್ರತಿಕ್ರಿಯೆ ದಾಖಲಿಸಿದ್ದಾರೆ. ರಾಜಸ್ಥಾನದ ಕೋಟಾದಲ್ಲಿ ಅಖಿಲ ಬ್ರಾಹ್ಮಣ ಮಹಾಸಭಾದ ಸಭೆಯಲ್ಲಿ ಬಿರ್ಲಾ ಭಾಗವಹಿಸಿದ್ದರು. ಅಲ್ಲಿನ ಕೆಲ ಫೋಟೋಗಳನ್ನು ಮತ್ತು ಶೀರ್ಷಿಕೆಯನ್ನು ಹಿಂದಿಯಲ್ಲಿ ಪೋಸ್ಟ್ ಮಾಡಿದ್ದರು.

ಸಮಾಜದಲ್ಲಿ ಬ್ರಾಹ್ಮಣರು ಯಾವಾಗಲೂ ಉನ್ನತ ಸ್ಥಾನದಲ್ಲಿ ಇದ್ದಾರೆ. ತ್ಯಾಗ ಹಾಗೂ ಪರಿಶ್ರಮದ ಕಾರಣಕ್ಕೆ ಅವರಿಗೆ ಈ ಸ್ಥಾನ ಸಿಕ್ಕಿದೆ. ಸಮಾಜಕ್ಕೆ ಬ್ರಾಹ್ಮಣರು ಮಾರ್ಗದರ್ಶನ ನೀಡಿದ್ದಾರೆ ಎಂದು ಓಂ ಬಿರ್ಲಾ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್ ಸಾಮಾಜಿಕ ಜಾಲ ತಾಣಗಳಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಬಹಳ ಮಂದಿ ಓಂ ಬಿರ್ಲಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹ ಪಡಿಸಿದ್ದಾರೆ.
ಓಂ ಬಿರ್ಲಾ ಅವರು ರಾಜಸ್ಥಾನ ವಿಧಾನಸಭೆಯಿಂದ ಮೂರು ಬಾರಿ ಆಯ್ಕೆ ಆಗಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications