ಓಮಿಕ್ರಾನ್: 'ಯಾವುದೇ ಸಂದರ್ಭ ಎದುರಿಸಲು ಭಾರತ ಸಿದ್ಧವಾಗಿರಲಿ' ಎಂದ ಏಮ್ಸ್
ನವದೆಹಲಿ, ಡಿಸೆಂಬರ್ 20: ವಿಶ್ವದಲ್ಲಿ ಓಮಿಕ್ರಾನ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ದೇಶದಲ್ಲಿಯೂ ದಿನೇ ದಿನ ಹೆಚ್ಚಳವಾಗುತ್ತಿದೆ. ಈ ನಡುವೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಮುಂದಿನ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. "ಯುನೈಟೆಡ್ ಕಿಂಗ್ಡಮ್ನಲ್ಲಿ ಓಮಿಕ್ರಾನ್ ಜೊತೆಗೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ಆದ್ದರಿಂದಾಗಿ ಭಾರತವು ಎಲ್ಲಾ ಸಂದರ್ಭವನ್ನೂ ಎದುರಿಸಲು ಸಿದ್ಧವಾಗಿರಬೇಕು," ಎಂದು ಏಮ್ಸ್ ಅಧ್ಯಕ್ಷ ಡಾ ರಣ್ದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.
"ನಾವು ಯಾವುದೇ ಕ್ಷಣವನ್ನು ಎದುರಿಸಲು ಈಗಲೇ ಸಿದ್ಧವಾಗಿರಬೇಕು. ಯುನೈಟೆಡ್ ಕಿಂಗ್ಡಮ್ನಲ್ಲಿ ಪರಿಸ್ಥಿತಿಯು ಇರುವಂತೆ ನಮ್ಮಲ್ಲಿ ಆಗದಿರಲಿ ಎಂಬ ಆಶಾವಾದವನ್ನು ನಾವು ಹೊಂದಿರುವ. ನಮಗೆ ಓಮಿಕ್ರಾನ್ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾಗಿದೆ. ಯಾವಾಗ ವಿಶ್ವದ ಬೇರೆ ಭಾಗದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಹೆಚ್ಚಳವಾಗುತ್ತದೆಯೋ, ಅಂದು ನಾವು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಬೇಕು ಹಾಗೂ ಯಾವುದೇ ಸಂದರ್ಭವನ್ನು ಎದುರಿಸಲು ಸಜ್ಜಾಗಿರಬೇಕು," ಎಂದು ಡಾ ರಣ್ದೀಪ್ ಗುಲೇರಿಯಾ ಅಭಿಪ್ರಾಯಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕಿನ ಹೊಸ ರೂಪಾಂತ ಓಮಿಕ್ರಾನ್ ಈಗ ವಿಶ್ವದಾದ್ಯಂತ ಹರಡಿದೆ. ಬ್ರಿಟನ್ನಲ್ಲಿ ಓಮಿಕ್ರಾನ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಓಮಿಕ್ರಾನ್ನಿಂದ ಬ್ರಿಟನ್ನಲ್ಲಿ ಹೊಸ ಅಲೆಯ ಎಚ್ಚರಿಕೆ ಇದೆ ಎಂದು ಅಲ್ಲಿನ ತಜ್ಞರು ಹೇಳುತ್ತಾರೆ. ಈ ನಡುವೆ ಭಾರತದಲ್ಲಿಯೂ ಓಮಿಕ್ರಾನ್ ಬಗ್ಗೆ ಏಮ್ಸ್ ಮುಖ್ಯಸ್ಥರು ಎಚ್ಚರಿಕೆಯನ್ನು ನೀಡಿದ್ದಾರೆ.

ಯುಕೆಯಲ್ಲಿ ಪ್ರತಿ ದಿನ ಓಮಿಕ್ರಾನ್ ಪ್ರರಕಣಗಳು ದ್ವಿಗುಣ
"ಯುಕೆಯಲ್ಲಿ ಪ್ರತಿ ದಿನ ಓಮಿಕ್ರಾನ್ ಪ್ರರಕಣಗಳ ಸಂಖ್ಯೆಯು ದ್ವಿಗುಣಗೊಳ್ಳುತ್ತಿದೆ. ಯುಕೆಯಲ್ಲಿ ಕೊರೊನಾ ವೈರಸ್ ಪ್ರಕರಣದ ಏರಿಕೆಗೆ ಓಮಿಕ್ರಾನ್ ಪ್ರಮುಖ ಕಾರಣವಾಗುವ ಸಾಧ್ಯತೆ ಇದೆ," ಎಂದು ಯುಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಯುಕೆಯಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯು ಈಗಾಗಲೇ ಹತ್ತು ಸಾವಿರದ ಗಡಿಯನ್ನು ದಾಟಿದೆ. ಈ ಹೊಸ ರೂಪಾಂತರದಿಂದಾಗಿ ಯುಕೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯು ಏಳಕ್ಕೆ ಏರಿಕೆ ಕಂಡಿದೆ. "ಯುಕೆಯಲ್ಲಿ ಶನಿವಾರ 10,059 ಓಮಿಕ್ರಾನ್ ಪ್ರಕರಣಗಳು ದಾಖಲಾಗಿದೆ, ಇದು ಶುಕ್ರವಾರದ ಓಮಿಕ್ರಾನ್ ಪ್ರಕರಣಗಳಿಗಿಂತ ಮೂರು ಪಟ್ಟು ಅಧಿಕವಾಗಿದೆ. ಈ ಮೂಲಕ ಯುಕೆಯಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯು 24,968 ಕ್ಕೆ ಏರಿಕೆ ಕಂಡಿದೆ," ಎಂದು ಯುಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯವಾಗಿ ಪ್ರಯಾಣಿಕರ ಮೇಲೂ ನಿಗಾ ವಹಿಸಿ ಎಂದ ಏಮ್ಸ್
ಇನ್ನು ಪರಿಸ್ಥಿತಿಯನ್ನು ಹೆಚ್ಚು ಸೂಕ್ಷ್ಮವಾಗಿ ಅವಲೋಕನ ಮಾಡುವ ಬಗ್ಗೆ ಒತ್ತು ನೀಡಿರುವ ಏಮ್ಸ್ ಮುಖ್ಯಸ್ಥರು, ಅಂತರಾಷ್ಟ್ರೀಯ ಪ್ರಯಾಣಿಕರ ನಿಗಾ ಮಾತ್ರವಲ್ಲದೇ, ಸ್ಥಳೀಯವಾಗಿ ಎಲ್ಲಿ ಓಮಿಕ್ರಾನ್ ಪ್ರಕರಣ ಹೆಚ್ಚಳವಾಗಿ ಇದೆಯೋ ಅಲ್ಲಿಂದ ಆಗಮಿಸುವ ಪ್ರಯಾಣಿಕರ ಮೇಲೂ ನಿಗಾ ವಹಿಸಬೇಕಾಗಿದೆ. ಈ ಮೂಲಕ ಓಮಿಕ್ರಾನ್ ಹರಡುವುದುನ್ನು ತಡೆಗಟ್ಟುವ ಪ್ರಯತ್ನ ಮಾಡಲು ಸಾಧ್ಯ ಎಂದಿದ್ದಾರೆ.

ಲಸಿಕೆಗೆ ಅಧಿಕ ಆಧ್ಯತೆ ನೀಡಲು ಏಮ್ಸ್ ಆದ್ಯತೆ
ಇನ್ನು ಇದೇ ಸಂದರ್ಭದಲ್ಲಿ ಕೊರೊನಾ ವೈರಸ್ ವಿರುದ್ಧ ಲಸಿಕೆ ನೀಡುವುದಕ್ಕೂ ಏಮ್ಸ್ ಅಧ್ಯಕ್ಷ ಡಾ ರಣ್ದೀಪ್ ಗುಲೇರಿಯಾ ಆಧ್ಯತೆ ನೀಡಿದ್ದಾರೆ. "ಈ ಓಮಿಕ್ರಾನ್ ಹೆಚ್ಚಳದ ನಡುವೆ ಕೋವಿಡ್ ಲಸಿಕೆ ನೀಡಿಕೆಯನ್ನು ಹೆಚ್ಚು ಮಾಡುವುದು ಸೂಕ್ತ," ಎಂದು ಕೂಡಾ ಡಾ ರಣ್ದೀಪ್ ಗುಲೇರಿಯಾ ಹೇಳಿದ್ದಾರೆ. "ಈ ಹೊಸ ರೂಪಾಂತರ ಓಮಿಕ್ರಾನ್ನಲ್ಲಿ ಮೂವತ್ತಕ್ಕೂ ಹೆಚ್ಚು ಮ್ಯೂಟೇಶನ್ಗಳು ಇದೆ ಎಂದು ಈಗಾಗಲೇ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಜನರು ಜಾಗರೂಕರಾಗಿರುವುದು ಉತ್ತಮ. ಈ ಸಂದರ್ಭದಲ್ಲಿ ಕೋವಿಡ್ ಲಸಿಕೆಯನ್ನು ಪಡೆದರೆ ಸುರಕ್ಷಿತ. ಭಾರತದ ಎಲ್ಲರೂ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಿ," ಎಂದು ಮನವಿ ಮಾಡಿದ್ದಾರೆ.

ಭಾರತದ ಓಮಿಕ್ರಾನ್ ಪ್ರರಕಣ ಹೆಚ್ಚಳ
ದೇಶದಲ್ಲಿ ಓಮಿಕ್ರಾನ್ ಪ್ರರಕಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಭಾನುವಾರ ಗುಜರಾತ್, ಮಹಾರಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣ ದಾಖಲಾಗಿದೆ. ಈ ಮೂಲಕ ಒಟ್ಟು ಓಮಿಕ್ರಾನ್ ಪ್ರಕರಣ ಸಂಖ್ಯೆಯು 152 ಕ್ಕೆ ಏರಿಕೆ ಆಗಿದೆ. ಇನ್ನು ಕರ್ನಾಟಕ ರಾಜ್ಯದಲ್ಲಿಯೂ ಡಿಸೆಂಬರ್ 19 ರಂದು ಮತ್ತೆ ಹೊಸ ಐದು ಓಮಿಕ್ರಾನ್ ಪತ್ತೆ ಆಗಿದೆ. ಈವರೆಗೆ ದೇಶದ ಹನ್ನೊಂದು ರಾಜ್ಯಗಳಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 54, ದೆಹಲಿಯಲ್ಲಿ 22, ರಾಜಸ್ಥಾನದಲ್ಲಿ 17, ಕರ್ನಾಟಕದಲ್ಲಿ 14, ತೆಲಂಗಾಣದಲ್ಲಿ 20, ಗುಜರಾತ್ 10 ಓಮಿಕ್ರಾನ್, ಕೇರಳದಲ್ಲಿ 11, ಆಂಧ್ರ ಪ್ರದೇಶ, ಚಂಡೀಗಢ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಓಮಿಕ್ರಾನ್ ಪ್ರಕರಣ ವರದಿ ಆಗಿದೆ.
(ಒನ್ಇಂಡಿಯಾ ಸುದ್ದಿ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications