ಇನ್ಸ್ಟಾಗ್ರಾಮ್ ಲವರ್ನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳುತ್ತಿದ್ದ ರಾಜಸ್ಥಾನದ ಯುವತಿ ಬಂಧನ
ನವದೆಹಲಿ, ಜುಲೈ 29: ಇನ್ಸ್ಟಾಗ್ರಾಮ್ ಲವರ್ನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳುತ್ತಿದ್ದ ರಾಜಸ್ಥಾನದ ಯುವತಿಯನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಶುಕ್ರವಾರ ರಾಜಸ್ಥಾನಿ ಹುಡುಗಿಯೊಬ್ಬಳು ಜೈಪುರ ವಿಮಾನ ನಿಲ್ದಾಣದಲ್ಲಿ ತನ್ನ ಇನ್ಸ್ಟಾಗ್ರಾಮ್ ಪ್ರೇಮಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಸಿಕ್ಕುಬಿದ್ದಿದ್ದಾಳೆ.
19 ವರ್ಷದ ಹುಡುಗಿಯು ಪಾಕಿಸ್ತಾನಕ್ಕೆ ಪರಾರಿಯಾಗುವ ಪ್ರಯತ್ನದಲ್ಲಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹುಡುಗಿಯು ಇಬ್ಬರು ಸಹಚರರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಪಾಕಿಸ್ತಾನದ ವಿಮಾನ ಟಿಕೆಟ್ ನೀಡುವಂತೆ ಸಿಬ್ಬಂದಿಯನ್ನು ಕೇಳಿಕೊಂಡಳು. ಇದನ್ನು ತಮಾಷೆಯಾಗಿ ಪರಿಗಣಿಸಿದ ಸಿಬ್ಬಂದಿ ಆಕೆಯ ವಿನಂತಿಯನ್ನು ನಿರಾಕರಿಸಿದ್ದರು.
ಆ ನಂತರ ಆಕೆ ತಾನು ಪಾಕಿಸ್ತಾನ ಪ್ರಜೆಯಾಗಿದ್ದಾಗಿ ಹೇಳಿಕೊಂಡಳು. ಮೂರು ವರ್ಷಗಳ ಹಿಂದೆ ತನ್ನ ತಂದೆಯ ಚಿಕ್ಕಮ್ಮನೊಂದಿಗೆ ಭಾರತಕ್ಕೆ ಬಂದಿದ್ದಾಗಿ ತಿಳಿಸಿದ್ದಳು. ಆಕೆ ಸಿಕರ್ ಜಿಲ್ಲೆಯ ಶ್ರೀ ಮಾಧೋಪುರ್ ಪ್ರದೇಶದಲ್ಲಿ ನಿವಾಸಿಯಾಗಿದ್ದಾಳೆ. ಕೆಲ ದಿನಗಳ ಹಿಂದೆ ಚಿಕ್ಕಮ್ಮನೊಂದಿಗೆ ಜಗಳವಾಡಿ ಬಸ್ ಹತ್ತಿ ಜೈಪುರಕ್ಕೆ ತೆರಳಿದ್ದಳು ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಸಿಬ್ಬಂದಿ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರ ವಿಚಾರಣೆಯ ಸಮಯದಲ್ಲಿ, ತಾನು ಲಾಹೋರ್ ಸಮೀಪದ ಇಸ್ಲಾಮಾಬಾದ್ ಮೂಲದವಳು ಎಂದು ಪೊಲೀಸರಿಗೆ ತಿಳಿಸಿದ್ದಾಳೆ.
ಆಕೆಯ ಜೊತೆಗಿದ್ದ ಇಬ್ಬರು ಯುವಕರು ಬಸ್ನಲ್ಲಿ ಪರಿಚಯವಾಗಿದ್ದಾರೆ. ಆಕೆಯನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದರು ಎಂದು ಗೊತ್ತಾಗಿದೆ.
ಹುಡುಗಿಯನನ್ನು ವಿಚಾರಣೆ ಮಾಡಿರುವ ಮಹಿಳಾ ಪೊಲೀಸರು ಆಕೆಯ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ. ಆಕೆ ಶ್ರೀ ಮಾಧೋಪುರಕ್ಕೆ ಸೇರಿದವಳು ಎಂದು ತಿಳಿದುಬಂದಿದೆ.
ಇನ್ಸ್ಟಾಗ್ರಾಮ್ನಲ್ಲಿ ಲಾಹೋರ್ನ ಅಸ್ಲಂ ಲಾಹೋರಿ ಎಂಬ ಹೆಸರಿನ ವ್ಯಕ್ತಿಯೊಂದಿಗೆ ಹುಡುಗಿ ಸ್ನೇಹ ಬೆಳೆಸಿದ್ದಳು. ಅವರು ಒಂದು ವರ್ಷದಿಂದ ಸಂಪರ್ಕದಲ್ಲಿದ್ದಾರೆ. ಆ ಹುಡುಗ ತನ್ನ ಶಾಲೆಯ ಇತರ ಹುಡುಗಿಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ಆಕೆ ಬಹಿರಂಗಪಡಿಸಿದ್ದಾಳೆ.
ಅಸ್ಲಾಮ್ ವಿಮಾನ ನಿಲ್ದಾಣದಲ್ಲಿ ಹೇಗೆ ವರ್ತಿಸಬೇಕು ಎಂಬುದರ ಕುರಿತು ಸೂಚನೆಗಳನ್ನು ನೀಡಿದ್ದಾಗಿ ಹುಡುಗಿ ಹೇಳಿದ್ದಾಳೆ.
ಪೊಲೀಸರು ಆಕೆಯ ಮೊಬೈಲ್ ಫೋನ್ ಅನ್ನು ತಪಾಸಣೆಗಾಗಿ ವಶಪಡಿಸಿಕೊಂಡಿದ್ದಾರೆ. ಆಕೆ ಪಾಕಿಸ್ತಾನಕ್ಕೆ ಪಲಾಯನ ಮಾಡುವ ಪ್ರಯತ್ನದ ಕುರಿತು ಕುಟುಂಬ ಸದಸ್ಯರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಹುಡುಗಿಯು ವಿದ್ಯಾಭ್ಯಾಸದಲ್ಲಿ ತುಂಬಾ ಬುದ್ಧಿವಂತೆ ಎಂದು ಹೇಳಲಾಗಿದ್ದು, ಇತ್ತೀಚೆಗೆ 12ನೇ ತರಗತಿ ಪಾಸಾಗಿದ್ದಾಳೆ. ಯುವತಿಯ ತಂದೆ ಸೇನೆಯಲ್ಲಿರುವುದು ಪತ್ತೆಯಾಗಿದ್ದು, ಈ ಮಾಹಿತಿ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications