ಇನ್ಸ್ಟಾಗ್ರಾಮ್ ಲವರ್ನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳುತ್ತಿದ್ದ ರಾಜಸ್ಥಾನದ ಯುವತಿ ಬಂಧನ
ನವದೆಹಲಿ, ಜುಲೈ 29: ಇನ್ಸ್ಟಾಗ್ರಾಮ್ ಲವರ್ನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳುತ್ತಿದ್ದ ರಾಜಸ್ಥಾನದ ಯುವತಿಯನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಶುಕ್ರವಾರ ರಾಜಸ್ಥಾನಿ ಹುಡುಗಿಯೊಬ್ಬಳು ಜೈಪುರ ವಿಮಾನ ನಿಲ್ದಾಣದಲ್ಲಿ ತನ್ನ ಇನ್ಸ್ಟಾಗ್ರಾಮ್ ಪ್ರೇಮಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಸಿಕ್ಕುಬಿದ್ದಿದ್ದಾಳೆ.
19 ವರ್ಷದ ಹುಡುಗಿಯು ಪಾಕಿಸ್ತಾನಕ್ಕೆ ಪರಾರಿಯಾಗುವ ಪ್ರಯತ್ನದಲ್ಲಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹುಡುಗಿಯು ಇಬ್ಬರು ಸಹಚರರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಪಾಕಿಸ್ತಾನದ ವಿಮಾನ ಟಿಕೆಟ್ ನೀಡುವಂತೆ ಸಿಬ್ಬಂದಿಯನ್ನು ಕೇಳಿಕೊಂಡಳು. ಇದನ್ನು ತಮಾಷೆಯಾಗಿ ಪರಿಗಣಿಸಿದ ಸಿಬ್ಬಂದಿ ಆಕೆಯ ವಿನಂತಿಯನ್ನು ನಿರಾಕರಿಸಿದ್ದರು.
ಆ ನಂತರ ಆಕೆ ತಾನು ಪಾಕಿಸ್ತಾನ ಪ್ರಜೆಯಾಗಿದ್ದಾಗಿ ಹೇಳಿಕೊಂಡಳು. ಮೂರು ವರ್ಷಗಳ ಹಿಂದೆ ತನ್ನ ತಂದೆಯ ಚಿಕ್ಕಮ್ಮನೊಂದಿಗೆ ಭಾರತಕ್ಕೆ ಬಂದಿದ್ದಾಗಿ ತಿಳಿಸಿದ್ದಳು. ಆಕೆ ಸಿಕರ್ ಜಿಲ್ಲೆಯ ಶ್ರೀ ಮಾಧೋಪುರ್ ಪ್ರದೇಶದಲ್ಲಿ ನಿವಾಸಿಯಾಗಿದ್ದಾಳೆ. ಕೆಲ ದಿನಗಳ ಹಿಂದೆ ಚಿಕ್ಕಮ್ಮನೊಂದಿಗೆ ಜಗಳವಾಡಿ ಬಸ್ ಹತ್ತಿ ಜೈಪುರಕ್ಕೆ ತೆರಳಿದ್ದಳು ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಸಿಬ್ಬಂದಿ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರ ವಿಚಾರಣೆಯ ಸಮಯದಲ್ಲಿ, ತಾನು ಲಾಹೋರ್ ಸಮೀಪದ ಇಸ್ಲಾಮಾಬಾದ್ ಮೂಲದವಳು ಎಂದು ಪೊಲೀಸರಿಗೆ ತಿಳಿಸಿದ್ದಾಳೆ.
ಆಕೆಯ ಜೊತೆಗಿದ್ದ ಇಬ್ಬರು ಯುವಕರು ಬಸ್ನಲ್ಲಿ ಪರಿಚಯವಾಗಿದ್ದಾರೆ. ಆಕೆಯನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದರು ಎಂದು ಗೊತ್ತಾಗಿದೆ.
ಹುಡುಗಿಯನನ್ನು ವಿಚಾರಣೆ ಮಾಡಿರುವ ಮಹಿಳಾ ಪೊಲೀಸರು ಆಕೆಯ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ. ಆಕೆ ಶ್ರೀ ಮಾಧೋಪುರಕ್ಕೆ ಸೇರಿದವಳು ಎಂದು ತಿಳಿದುಬಂದಿದೆ.
ಇನ್ಸ್ಟಾಗ್ರಾಮ್ನಲ್ಲಿ ಲಾಹೋರ್ನ ಅಸ್ಲಂ ಲಾಹೋರಿ ಎಂಬ ಹೆಸರಿನ ವ್ಯಕ್ತಿಯೊಂದಿಗೆ ಹುಡುಗಿ ಸ್ನೇಹ ಬೆಳೆಸಿದ್ದಳು. ಅವರು ಒಂದು ವರ್ಷದಿಂದ ಸಂಪರ್ಕದಲ್ಲಿದ್ದಾರೆ. ಆ ಹುಡುಗ ತನ್ನ ಶಾಲೆಯ ಇತರ ಹುಡುಗಿಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ಆಕೆ ಬಹಿರಂಗಪಡಿಸಿದ್ದಾಳೆ.
ಅಸ್ಲಾಮ್ ವಿಮಾನ ನಿಲ್ದಾಣದಲ್ಲಿ ಹೇಗೆ ವರ್ತಿಸಬೇಕು ಎಂಬುದರ ಕುರಿತು ಸೂಚನೆಗಳನ್ನು ನೀಡಿದ್ದಾಗಿ ಹುಡುಗಿ ಹೇಳಿದ್ದಾಳೆ.
ಪೊಲೀಸರು ಆಕೆಯ ಮೊಬೈಲ್ ಫೋನ್ ಅನ್ನು ತಪಾಸಣೆಗಾಗಿ ವಶಪಡಿಸಿಕೊಂಡಿದ್ದಾರೆ. ಆಕೆ ಪಾಕಿಸ್ತಾನಕ್ಕೆ ಪಲಾಯನ ಮಾಡುವ ಪ್ರಯತ್ನದ ಕುರಿತು ಕುಟುಂಬ ಸದಸ್ಯರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಹುಡುಗಿಯು ವಿದ್ಯಾಭ್ಯಾಸದಲ್ಲಿ ತುಂಬಾ ಬುದ್ಧಿವಂತೆ ಎಂದು ಹೇಳಲಾಗಿದ್ದು, ಇತ್ತೀಚೆಗೆ 12ನೇ ತರಗತಿ ಪಾಸಾಗಿದ್ದಾಳೆ. ಯುವತಿಯ ತಂದೆ ಸೇನೆಯಲ್ಲಿರುವುದು ಪತ್ತೆಯಾಗಿದ್ದು, ಈ ಮಾಹಿತಿ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications