ಐಎಸ್ಐಎಸ್ ಸೇರಿದ ಮತ್ತೊಬ್ಬ ಕೇರಳ ಯುವಕ?
ತಿರುವನಂತಪುರಂ, ಸೆಪ್ಟೆಂಬರ್, 16 : ಕೇರಳದ ಕೋಯಿಕ್ಕೋಡ್ ಮೂಲದ ಯುವಕನೊಬ್ಬ ಐಎಸ್ಐಎಸ್ ಉಗ್ರ ಸಂಘಟನೆ ಸೇರಿದ್ದಾನೆ ಎಂದು ಶಂಕಿಸಲಾಗಿದೆ. ಕೆಲವು ತಿಂಗಳ ಹಿಂದೆ ಕೇರಳ ಮೂಲದ ಪತ್ರಕರ್ತನೊಬ್ಬ ಉಗ್ರ ಸಂಘಟನೆ ಸೇರಿದ್ದ.
ಕೆಲವು ತಿಂಗಳಿನಿಂದ ಕೋಯಿಕ್ಕೋಡ್ ಮೂಲದ ಯುವಕ ನಾಪತ್ತೆಯಾಗಿದ್ದಾನೆ. ಈತ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ (ಐಎಸ್ಐಎಸ್) ಸೇರಿದ್ದಾನೆಯೇ? ಎಂದು ಖಚಿತವಾದ ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.[ISIS ಸೇರಿದ ಕೇರಳದ ಪತ್ರಕರ್ತ]

ಕೇರಳ ಪೊಲೀಸರಿಗೂ ಗುಪ್ತಚರ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಪ್ರಾಥಮಿಕವಾಗಿ ಸಂಗ್ರಹಿಸಿದ ಮಾಹಿತಿ ಅನ್ವಯ ಕೋಯಿಕ್ಕೋಡ್ ಮೂಲದ ಯುವಕ ಸಿರಿಯಾದಲ್ಲಿದ್ದಾನೆ ಎಂದು ತಿಳಿದುಬಂದಿದೆ. ಕೆಲವು ತಿಂಗಳಿನಿಂದ ಈ ಯುವಕ ನಾಪತ್ತೆಯಾಗಿದ್ದು, ಸಿರಿಯಾದಲ್ಲಿರಬಹದು ಎಂದು ಶಂಕಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಒನ್ ಒಂಡಿಯಾಕ್ಕೆ ತಿಳಿಸಿದ್ದಾರೆ. [ISISಗೆ ಬೆಂಬಲ, ಯುವಕರು ಗಡಿಪಾರು]
ಇದು ಎರಡನೇ ಪ್ರಕರಣ : ಕೇರಳ ಮೂಲದ ಯುವಕ ಐಎಸ್ಐಎಸ್ ಉಗ್ರ ಸಂಘಟನೆ ಸೇರುತ್ತಿರುವ ಎರಡನೇ ಪ್ರಕರಣವಿದಾಗಿದೆ. ಕೆಲವು ತಿಂಗಳ ಹಿಂದೆ ಪಾಲಕ್ಕಾಡ್ನಲ್ಲಿನ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಉಗ್ರ ಸಂಘಟನೆ ಸೇರಿದ್ದ ಮಾಹಿತಿ ಲಭ್ಯವಾಗಿತ್ತು. [ಭಾರತದ ಮೇಲೆ ಇರಾಕಿ ಉಗ್ರರ ಕಣ್ಣು]
ಮೊದಲು ಪಾಲಕ್ಕಾಡ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ನಂತರ ಉದ್ಯೋಗ ತೊರೆದು ಗಲ್ಫ್ ರಾಷ್ಟ್ರಕ್ಕೆ ಕೆಲಸ ಮಾಡಲು ಹೋಗುವುದಾಗಿ ಹೇಳಿದ್ದ. 8 ತಿಂಗಳ ಹಿಂದೆ ಗಲ್ಫ್ನಲ್ಲಿ ಉದ್ಯೋಗ ಪಡೆದಿದ್ದ ಆತ. ಅಲ್ಲಿಂದ ಐಎಸ್ಐಎಸ್ ಉಗ್ರರ ಸಂಪರ್ಕ್ ಪಡೆದು ಸಂಘಟನೆ ಸೇರಿದ್ದ.
ಐಎಸ್ಐಎಸ್ ಉಗ್ರ ಸಂಘಟನೆಗೆ ಬೆಂಬಲ ನೀಡುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಭಾರತೀಯರನ್ನು ಯುಎಇ ಮಂಗಳವಾರ ಗಡಿಪಾರು ಮಾಡಿತ್ತು. ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications