ತೆಹೆಲ್ಕಾ: ಸಂಸ್ಥೆ ತೊರೆದ ಹಿರಿಯ ಸಂಪಾದಕಿ
ನವದೆಹಲಿ, ನ.26: ತೆಹಲ್ಕಾ ಸುದ್ದಿಸಂಸ್ಥೆ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ತರುಣ್ ತೇಜಪಾಲ್ ತನ್ನ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಪಾಲ್ ಪರ ನಿಂತಿರುವ ಎಂಡಿ ಶೋಮಾ ಅವರ ನಿಲುವನ್ನು ಖಂಡಿಸಿ ತೆಹೆಲ್ಕಾ ಸಂಸ್ಥೆ ಹಿರಿಯ ಉದ್ಯೋಗಿಗಳು ಸಂಸ್ಥೆ ತೊರೆಯುತ್ತಿದ್ದಾರೆ.
ತೇಜಪಾಲ್ ಅವರಿಂದ ಲೈಂಗಿಕ ಕಿರುಕುಳ ಅನುಭವಿಸಿದ ಯುವತಿ ತೆಹೆಲ್ಕಾ ಸಂಸ್ಥೆ ತೊರೆದ ನಂತರ ಸಾಲು ಸಾಲು ಹಿರಿಯ ಪತ್ರಕರ್ತರು ತೆಹೆಲ್ಕಾ ಬಿಡುತ್ತಿದ್ದಾರೆ. ಹಿರಿಯ ಸಂಪಾದಕಿ ರಾಣಾ ಅಯೂಬ್ ಅವರು ಮಂಗಳವಾರ(ನ.26) ರಾಜೀನಾಮೆ ನೀಡಿದ್ದಾರೆ. ಇವರಿಗಿಂತ ಮುಂಚೆ ಸೌಗಾತ್ ದಾಸ್ ಗುಪ್ತಾ,ಅಯೇಷಾ ಸಿದ್ದಿಕಾ, ಜಾಯ್ ಮಜೂಂದಾರ್ ಹಾಗೂ ರೇವತಿ ಲಾಲ್ ಅವರು ಸಂಸ್ಥೆ ತೊರೆದಿದ್ದಾರೆ.

'ಈಗಾಗಲೇ ಕ್ಷಮೆಯಾಚಿಸಿ, ಸಂಸ್ಥೆ ನಿಯಮದಂತೆ ನಡೆದುಕೊಂಡಿದ್ದೇನೆ. ಯಾವುದೇ ರೀತಿಯ ತನಿಖೆಗೆ ಸಿದ್ಧ' ಎಂದಿದ್ದ ಆರೋಪಿ ತರುಣ್ ತೇಜಪಾಲ್ ಅವರ ಅರ್ಜಿ ನಾಳೆ ವಿಚಾರಣೆಗೆ ಬರಲಿದೆ. ಅಲ್ಲಿ ತನಕ ತರುಣ್ ಅವರನ್ನು ಬಂಧಿಸದಂತೆ ಕೋರ್ಟ್ ಆದೇಶಿಸಿದೆ. ಗೋವಾ ಪೊಲೀಸರು ಐಪಿಸಿ ಸೆಕ್ಷನ್ 376(ಅತ್ಯಾಚಾರ) ಹಾಗೂ 344 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
In view of the present controversy I thought it necessary to discontinue my association with tehelka. (cont)
— Rana Ayyub (@RanaAyyub) November 26, 2013 ಗೋವಾದ ಹೋಟೆಲ್ ವೊಂದರಲ್ಲಿ ತರುಣ್ ಅವರು ಎರಡು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಸಹದ್ಯೋಗಿ ಆರೋಪಿಸಿದ್ದರು. ತರುಣ್ ಅವರ ಮೇಲೆ ಲೈಂಗಿಕ ಆರೋಪ ಕೇಳಿ ಬರುತ್ತಿದ್ದಂತೆ, ನೈತಿಕ ಹೊಣೆ ಹೊತ್ತು ಕ್ಷಮೆಯಾಚಿಸಿ, ತಮ್ಮ ಸಹ ಸಂಪಾದಕ ಸ್ಥಾನದಿಂದ ಆರು ತಿಂಗಳ ಕಾಲ ದೂರಸರಿದಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications