One Nation One Election: ಲೋಕಸಭೆಯಲ್ಲಿ ಮಸೂದೆ ಮಂಡನೆ, ಗದ್ದಲ
ನವದೆಹಲಿ, ಡಿಸೆಂಬರ್ 17: ಭಾರತದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲಾಗಿದೆ. ಮಸೂದೆಯನ್ನು ಕಾಂಗ್ರೆಸ್ ಪ್ರಬಲವಾಗಿ ವಿರೋಧಿಸಿದೆ. ವಿವಿಧ ಪಕ್ಷಗಳು ಮಸೂದೆಯ ಪರಿವಾಗಿದ್ದೇವೆ ಎಂದು ಘೋಷಣೆ ಮಾಡಿವೆ. 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಲು ಕಾನೂನು ತಿದ್ದುಪಡಿ ಮಾಡಲು ಮಸೂದೆಯನ್ನು ಮಂಡನೆ ಮಾಡಿದ ಬಳಿಕ ಕಲಾಪದಲ್ಲಿ ಗದ್ದಲ ಉಂಟಾಗಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಮಂಗಳವಾರ ಲೋಕಸಭೆ ಕಲಾಪದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಯನ್ನು ಮಂಡನೆ ಮಾಡಿದರು. ಮಸೂದೆ ಮಂಡನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಇದನ್ನು ಪ್ರಬಲವಾಗಿ ವಿರೋಧಿಸಿದರು.

ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದನ್ನು 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಪ್ರಸ್ತಾಪಿಸುತ್ತದೆ. ಈ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಅಂಗೀಕಾರ ಮಾಡಲಾಗಿತ್ತು, ಮಸೂದೆ ಮಂಡನೆ ಮಾಡಲು ಒಪ್ಪಿಗೆ ಕೊಡಲಾಗಿತ್ತು.
ಮಸೂದೆ ಜೆಪಿಸಿಗೆ ಹಸ್ತಾಂತರ: ಲೋಕಸಭೆಯಲ್ಲಿ ಮಸೂದೆ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,"ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ವಹಿಸಲು ಬಯಸಿದೆ. ಈ ಕುರಿತು ವಿವರವಾಗಿ ಪರಾಮರ್ಶಿಸಿ ಸಮಿತಿ ತೀರ್ಮಾನಿಸಲಿ" ಎಂದು ಹೇಳಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಜಂಟಿ ಸಂಸದೀಯ ಸಮಿತಿಗೆ ವರ್ಗಾಯಿಸಿದರು. ಡಿಸೆಂಬರ್ 20ರಂದು ಸಂಸತ್ ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಈ ವಿಧೇಯಕದ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಮತಕ್ಕೆ ಹಾಕಿದರು. ಆಗ 149 ಸದಸ್ಯರು ಇದನ್ನು ವಿರೋಧಿಸಿದರು.
'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಐಯುಎಂಎಲ್ ವಿರೋಧಿಸಿತು. ಸಂಸದ ಇ. ಟಿ. ಮೊಹಮ್ಮದ್ ಬಶೀರ್ ಮಾತನಾಡಿ, "ನಾನು ಈ ವಿಧೇಯಕವನ್ನು ಬಲವಾಗಿ ವಿರೋಧಿಸುತ್ತೇನೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುವ ವಿಧೇಯಕವಾಗಿದೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರಿತ್ವ ತರಲಾಗುತ್ತಿದೆ. ಈ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದರೆ ಕೆಲವು ರಾಜ್ಯಗಳ ಸರ್ಕಾರ ಅವಧಿ 3 ವರ್ಷಗಳಿಗೆ ಅಂತ್ಯವಾಗಲಿದೆ" ಎಂದರು.
'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಐಯುಎಂಎಲ್ ವಿರೋಧಿಸಿತು. ಸಂಸದ ಇ. ಟಿ. ಮೊಹಮ್ಮದ್ ಬಶೀರ್ ಮಾತನಾಡಿ, "ನಾನು ಈ ವಿಧೇಯಕವನ್ನು ಬಲವಾಗಿ ವಿರೋಧಿಸುತ್ತೇನೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುವ ವಿಧೇಯಕವಾಗಿದೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರಿತ್ವ ತರಲಾಗುತ್ತಿದೆ. ಈ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿದರೆ ಕೆಲವು ರಾಜ್ಯಗಳ ಸರ್ಕಾರ ಅವಧಿ 3 ವರ್ಷಗಳಿಗೆ ಅಂತ್ಯವಾಗಲಿದೆ" ಎಂದರು.
ಶಿವಸೇನೆ (ಉದ್ಭವ್ ಠಾಕ್ರೆ ಬಣ) ಸಂಸದ ಅನಿಲ್ ದೇಸಾಯಿ ಸಹ ವಿಧೇಯಕ ವಿರೋಧಿಸಿದರು. "ಭಾರತದಂತಹ ಪ್ರಜಾಪ್ರಭುತ್ವ ದೇಶಕ್ಕೆ ಈ ವಿಧೇಯಕ ಮಾರಕವಾಗಿದೆ. ಆಯಾಯ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳು ಅವುಗಳದ್ದೇ ಆದ ಮಹತ್ವ ಪಡೆದಿವೆ. ಇದನ್ನು ಈ ವಿಧೇಯಕ ನಾಶ ಮಾಡುತ್ತದೆ" ಎಂದು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications