ಸಹೃದಯಿಗಳ ನೆರವಿನ ನಿರೀಕ್ಷೆಯಲ್ಲಿ ಬಾಲಕನ ಕುಟುಂಬ
ಬೆಂಗಳೂರು, ಫೆ. 4 : ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನಾಚರಣೆ. ಅತ್ತ ದೆಹಲಿಯ ಆಸ್ಪತ್ರೆಯೊಂದರಲ್ಲಿ ದೇಶದ ಕಿರಿಯ ಪೈಲಟ್ ಮಹಾಮಾರಿ ವಿರುದ್ಧ ಹೋರಾಟ ಮಾಡುತ್ತ ಮಲಗಿದ್ದಾನೆ. ಕ್ಯಾನ್ಸರ್ ದಿನ ಸಾರ್ಥಕ ಕಾಣಲು ಸಹೃದಯಿಗಳು ಚಂದನ್ ನೆರವಿಗೆ ಧಾವಿಸಬೇಕಾಗಿದೆ.
ಬಿಹಾರದ ಬಾಲಕ ಚಂದನ್ ದೆಹಲಿಯ ಎಐಐಎಂಎಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಉದಯ್ ಫೌಂಡೇಷನ್ ನೆರವಿನ ಹಸ್ತ ಚಾಚಿದ್ದರೂ ಕುಟುಂಬ ಹಣಕಾಸು ಸಮಸ್ಯೆ ಎದುರಿಸುತ್ತಿದೆ.[ದೇವರ ಪ್ರಾರ್ಥನೆಯಾದರೂ ಬಾಲಕನನ್ನು ಬದುಕಿಸುವುದೆ?]

ಚಿಕಿತ್ಸೆಗೆ ಹಣ ಬೇಕು
ಈ ಬಗ್ಗೆ ಒನ್ ಇಂಡಿಯಾದೊಂದಿಗೆ ಮಾತನಾಡಿದ ಚಂದನ್ ತಂದೆ ಗಿರೀಶ್ ಮಂಡಲ್, ಯಾವ ಬಗೆಯ ಹಣಕಾಸು ನೆರವು ಸಿಕ್ಕರೂ ಸಂತೋಷವೇ. ನಮ್ಮ ಉಳಿತಾಯವನ್ನು ಚಂದನ್ ಚಿಕಿತ್ಸೆಗೆ ವ್ಯಯ ಮಾಡಿದ್ದೇವೆ. ಚಿಕಿತ್ಸೆಗಾಗಿ ದೆಹಲಿಗೆ ಬಂದಿರುವುದರಿಂದ ಬಿಹಾರದಲ್ಲಿ ನಡೆಯುತ್ತಿದ್ದ ವ್ಯಾಪಾರ ವಹಿವಾಟು ನಿಂತು ಹೋಗಿದೆ. ಉದಯ್ ಫೌಂಡೇಶನ್ ಸಾಕಷ್ಟು ನೆರವು ನೀಡುತ್ತಿರುವುದನ್ನು ಸ್ಮರಿಸುತ್ತೇನೆ ಎಂದು ವಾಸ್ತವ ಬಿಚ್ಚಿಟ್ಟರು.
ವೈದ್ಯರು ತಮ್ಮ ಎಲ್ಲ ಪ್ರಯತ್ನಗಳನ್ನು ಮಾಡಿ ಮುಗಿಸಿದ್ದಾರೆ. ಪ್ರಾರ್ಥನೆಯೊಂದೇ ನಮ್ಮ ಮುಂದಿರುವ ದಾರಿ ಎಂಬುದು ಗೊತ್ತಿದೆ. ಎಳೆಯ ಜೀವದ ಒಂದು ಕಣ್ಣು ಈಗಾಗಲೇ ಶಕ್ತಿ ಕಳೆದುಕೊಂಡಿದ್ದು ಬಾಲಕ ಮಾತನಾಡುವುದನ್ನು ನಿಲ್ಲಿಸಿದ್ದಾನೆ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಸಹ ಬಾಲಕನ ಉಳಿವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಬಾಲಕನ ತಂದೆ ನೋವಿನಿಂದ ನುಡಿದರು.[ಬಾಲಕನ ಕ್ಯಾನ್ಸರ್ ನೋವು ಮರೆಸಿದ 'ತೇಜಸ್']

ಕಲಾಂ ಎದೆ ಕಲುಕಿದ ಚಂದನ್ ಕಥೆ
ಬಾಲಕ ಚಂದನ್ ಕಥೆ ಓದಿದ ಅಬ್ದುಲ್ ಕಲಾಂ, ಆತನ ಆರೋಗ್ಯ ಸುಧಾರಿಸಲು ಎಲ್ಲರೂ ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದ್ದಾರೆ. ಒನ್ ಇಂಡಿಯಾದ ವರದಿ ಓದಿದ ಕಲಾಂ ಬಾಲಕ ಶೀಘ್ರ ಗುಣಮುಖವಾಗಲಿ ಎಂದು ಕೇಳಿಕೊಂಡಿದ್ದಾರೆ.
ಕೇವಲ ಪ್ರಾರ್ಥನೆ ಸಾಕಾಗಲ್ಲ
ಬಾಲಕನ ಉಳಿವಿಗೆ ಪ್ರಾರ್ತನೆಯೊಂದೆ ಸಾಕಾಗಲ್ಲ. ಕುಟುಂಬಕ್ಕೆ ಹಣಕಾಸು ನೆರವು ನೀಡುವ ಜವಾಬ್ದಾರಿ ಇಡೀ ಸಮಾಜದ ಮೇಲಿದೆ. ನೀವು ನೀಡುವ ಹಣ ನೇರವಾಗಿ ಬಾಲಕನ ಜೀವ ಉಳಿಸಲು ನೆರವಾಗುತ್ತದೆ.
ಬಾಲಕನ ಬ್ಯಾಂಕ್ ಖಾತೆ ವಿವರಗಳು
Master Chandan Kumar
Account No. 600510110003936 (Savings Account),
Bank of India, Hauz Khas Branch,
A-21, Green Park Main, New Delhi,
PIN: 110 016 IFSC Code: BKID0006005 (Please note: It's BKI (I for India) D0006005).
Bank phone numbers: 011 28866060/26563713
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications