ಗುರು ಅಬ್ದುಲ್ ಕಲಾಂ ಆಸ್ತಿ ಎಷ್ಟು? ಯಾರಿಗೆ ಸೇರಲಿದೆ?
ಬೆಂಗಳೂರು,ಆ.03: ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ನಿಧನದ ನೋವನ್ನು ಅರಗಿಸಿಕೊಳ್ಳಲು ದೇಶಕ್ಕೆ ಇನ್ನು ಎಷ್ಟು ವರ್ಷ ಬೇಕಾಗಬಹುದೋ? ಸಾಮಾನ್ಯ ಜನರಿಗೂ ಅವರ ಸಾವನ್ನು ಒಪ್ಪಿಕೊಳ್ಳಲು ಇನ್ನು ಸಾಧ್ಯವಾಗಿಲ್ಲ.
ಹಾಗಾದರೆ ಅಬ್ದುಲ್ ಕಲಾಂ ಸಾವಿನ ನಂತರ ಅವರ ಆಸ್ತಿ ಯಾರಿಗೆ ಸಿಗಲಿದೆ? ಎಂಬ ಪ್ರಶ್ನೆಯೂ ಮೂಡಬಹುದು. ಅದಕ್ಕೆ ಉತ್ತರ ಇಲ್ಲಿದ್ದು ಕ್ಷಿಪಣಿ ಮಾನವನ ಆಸ್ತಿ ಅವರ ಹಿರಿಯ ಸಹೋದರ 99 ವರ್ಷದ ಮಹಮದ್ ಮುತ್ತು ಮೀರಾ ಲೆಬೈ ಅವರಿಗೆ ಸೇರಲಿದೆ ಎಂದು ಕಲಾಂ ಕುಟುಂಬ ತಿಳಿಸಿದೆ. [ಭಾರತ ತನ್ನ 'ರತ್ನ' ಕಳೆದುಕೊಂಡಿದೆ : ಕಲಾಂ ಕುರಿತು ಮೋದಿ ಲೇಖನ]

ವಿಲ್ ಬರೆಯಲು ಕಲಾಂ ಯೋಚಿಸಿರಲಿಲ್ಲ
ನಾವು ವಿಲ್ ಬರೆಯುವಂತೆ ಕಲಾಂ ಬಳಿ ಬಹಳ ಸಾರಿ ಕೇಳಿಕೊಂಡಿದ್ದೆವು. ಆದರೆ ಅವರು ಕೊನೆಯವರೆಗೂ ಈ ಬಗ್ಗೆ ಮಾತನಾಡಿರಲಿಲ್ಲ. ಹಾಗಾಗಿ ಅವರ ಎಲ್ಲ ಆಸ್ತಿ ಕುಟುಂಬದ ಹಿರಿಯ ವ್ಯಕ್ತಿಗೆ ಸೇರುತ್ತದೆ ಎಂದು ಕಲಾಂ ಕುಟುಂಬದ ಮೂಲಗಳು ತಿಳಿಸಿವೆ.
ಕಲಾಂ ಅವರ ದೊಡ್ಡ ಆಸ್ತಿ ಎಂದರೆ ಅವರ ಬಳಿ ಇದ್ದ ಪುಸ್ತಕಗಳು, ವೀಣೆ, ಒಂದು ಲ್ಯಾಪ್ ಟಾಪ್, ವ್ರಿಸ್ಟ್ ವಾಚ್, ಎರಡು ಬೆಲ್ಟ್, ಸಿಡಿ ಪ್ಲೇಯರ್, ಅವರ ನೆಚ್ಚಿನ ನೀಲಿ ಅಂಗಿ ಎಂದು ಕುಟುಂಬ ತಿಳಿಸಿದೆ.['ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ಮುಸ್ಲಿಮರ ಮತಕ್ಕಾಗಿ']
ನವದೆಹಲಿಯ ರಾಜಾಜಿ ಮಾರ್ಗದ ಕಲಾಂ ಕೋಣೆಗೆ ಬೀಗ ಹಾಕಲಾಗಿದ್ದು ಅದನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಕಲಾಂ ಅನುಯಾಯಿಯೊಬ್ಬರು ತಿಳಿಸಿದ್ದಾರೆ.
ಪುಸ್ತಕಗಳು ಮತ್ತು ರಾಯಲ್ಟಿ
ಭಾರತದ ಪ್ರಖ್ಯಾತ ಬರಹಗಾರರಲ್ಲಿ ಕಲಾಂ ಅವರಿಗೆ ಪ್ರಮುಖ ಸ್ಥಾನ. ಅವರ ಅನುಯಾಯಿಗಳಲ್ಲಿ ಹಲವರು ಕಲಾಂ ಜತೆ ಸಹ ಲೇಖಕರಾಗಿಯೂ ಕಾಣಿಸಿಕೊಂಡಿದ್ದಾರೆ. ಕಲಾಂ ಹಿರಿಯ ಸಹೋದರರೇ ಎಲ್ಲ ಪುಸ್ತಕಗಳ ರಾಯಲ್ಟಿಗೆ ಪಾಲುದಾರರಾಗಿರುತ್ತಾರೆ.
ಸಂಬಂಧಿಕರಿಗೆ ನಿರಂತರ ಸಹಾಯ
ಕಲಾಂ ತಮ್ಮ ಅಂತ್ಯಕಾಲದವರೆಗೂ ತಮ್ಮ ಸಂಬಂಧಿಕರಿಗೆ ನೆರವು ನೀಡುತ್ತಲೇ ಬಂದಿದ್ದರು. ಕಲಾಂ ಬೆಂಗಳೂರಿನಲ್ಲಿ ಒಂದು ಸೈಟ್ ಸಹ ಖರೀದಿಸಿದ್ದರು. ಅದನ್ನು ಅವರ ಅಣ್ಣನ ಮೊಮ್ಮಗಳಿಗೆ 2013 ರಲ್ಲಿ ಕೊಡುಗೆಯಾಗಿ ನೀಡಿದ್ದರು.
ಕೇವಲ ಕುಟುಂಬದವರಿಗೆ ಮಾತ್ರವಲ್ಲದೇ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದವರಿಗೂ ಅನೇಕ ಬಗೆಯಲ್ಲಿ ನೆರವು ನೀಡುತ್ತಾ ಬಂದಿದ್ದರು. ರಂಜಾನ್ ವೇಳೆಯಲ್ಲಿ ಜಮಾತ್ ಸಂಘಟನೆಗೆ ಪ್ರತಿವರ್ಷ 1 ಲಕ್ಷ ರು.ಗಳನ್ನು ನೀಡುತ್ತಿದ್ದರು ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications