ಅಂತರಿಕ್ಷದಲ್ಲಿ ಒಂದು ರೋಮಾಂಚನಕಾರಿ ರೇಸ್!
ಬೆಂಗಳೂರು, ನ. 4: ಅಕ್ಟೋಬರ್ 17ರಂದು ಹರಿದಾಡಿದ ಟ್ವೀಟ್ ವೊಂದು ಭಾರತೀಯರಲ್ಲಿ ಸಂಚಲನ ಉಂಟುಮಾಡಿತ್ತು. ಜಾಗ್ವಾರ್ ಫೈಟರ್ ವಿಮಾನವೊಂದು ನಿರ್ಭಯ ಕ್ಷಿಪಣಿಯನ್ನು ಹಿಂದಕ್ಕೆ ಹಾಕಿದೆ! ಎಂಬುದೇ ಟ್ವೀಟ್ ನಲ್ಲಿದ್ದ ಅಂಶ. ಯುದ್ಧ ವಿಮಾನವೊಂದು ಕ್ಷಿಪಣಿಯನ್ನು ಹಿಂದಿಕ್ಕುವುದು ನಿಜವಾಗಿಯೂ ಒಂದು ಚಮಾತ್ಕಾರವೆ ಸರಿ ಎಂಬ ಮಾತುಗಳು ಕೇಳಿ ಬಂದಿದ್ದವು.
ನಿರ್ಭಯ ಕ್ಷಿಪಣಿ ಯಶಸ್ವಿ ಪರೀಕ್ಷೆ ಎರಡು ವಾರದ ನಂತರ ಅನೇಕ ಮಾಹಿತಿಗಳು ಲಭ್ಯವಾಗಿವೆ. ರಕ್ಷಣಾ ಇಲಾಖೆಗೆ ಶಕ್ತಿ ತುಂಬಿರುವ ಸ್ಕೈ ಥ್ರಿಲ್ಲರ್ ಎಲ್ಲವನ್ನು ಸಾಧ್ಯವಾಗಿಸಿದೆ. ಭಾರತದ ವಾಯುಸೇನೆಗೆ ಇವು ಮತ್ತಷ್ಟು ಶಕ್ತಿ ತುಂಬಿವೆ.[ಸೈನ್ಯಕ್ಕೆ ಮತ್ತಷ್ಟು ಶಕ್ತಿ ತುಂಬಲಿರುವ ಬೆಂಗಳೂರ ಕ್ಷಿಪಣಿ]

ಮೂಲಗಳು ಹೇಳುವಂತೆ ಭಾರತದ ವಾಯು ಸೇನೆ ನಿರ್ಭಯ್ ವೇಗ ಅರಿಯಲು ಎರಡು ಸುಖೋಯ್ ಯುದ್ಧ ವಿಮಾನಗಳ ಪ್ರಯೋಗಕ್ಕೆ ಮುಂದಾಗಿತ್ತು. ಆದರೆ ಕೊನೆ ಕ್ಷಣದ ಬದಲಾವಣೆಯಂತೆ ಸುಖೋಯ್ ಬದಲಾಗಿ ಜಾಗ್ವಾರ್ ಯುದ್ಧ ವಿಮಾನ ಬಳಕೆ ಮಾಡಿಕೊಳ್ಳಲಾಯಿತು. ಅದು ಆಕಾಶದಲ್ಲಿ ಚಮತ್ಕಾರನ್ನೇ ಸೃಷ್ಟಿಸಿತು ಎಂದು ತಿಳಿಸಿವೆ.
ಪೈಲೆಟ್ ಗಳು ಸಮರ್ಪಕ ಅಂತರ ಕಾಯ್ದುಕೊಳ್ಳಬೇಕು
ಸುಖೋಯ್ ಮತ್ತು ಜಾಗ್ವಾರ್ ಯುದ್ಧ ವಿಮಾನಗಳೆರಡು ಬಹುದೂರ ಸಾಗುವ ಕ್ಷಿಪಣಿಗಳನ್ನು ಹಿಂದಿಕ್ಕಲು ಮೊದಲಿನಿಂದಲೂ ಬಳಕೆಯಾಗುತ್ತಿವೆ. ಆದರೆ ಅವುಗಳ ನಿಜವಾದ ಶಕ್ತಿ ಅರಿವಿಗೆ ಬಂದಿದ್ದು ನಿರ್ಭಯ್ ಕ್ಷಿಪಣಿಯನ್ನು ಹಿಂದಕ್ಕೆ ಹಾಕಿದಾಗಲೇ. ಕ್ಷಿಪಣಿ ಹಿಂದಿಕ್ಕುವುದು ಸುಲಭದ ಕೆಲಸವಲ್ಲ. ಪೈಲೆಟ್ ಗಳ ನಡುವೆ ಸಹಕಾರ ಇರಬೇಕಾದ್ದು ಅವಶ್ಯ.
ಎದುರಿಗೆ ಸಾಗುತ್ತಿರುವ ಕ್ಷಿಪಣಿಯ ವೇಗ ಎಷ್ಟಿದೆ? ಯಾವ ದಿಕ್ಕಿನಲ್ಲಿ ಸಾಗಿದರೆ ಹಿಂದಿಕ್ಕಬಹುದು? ಫೈಟರ್ ವಿಮಾನ ಎಲ್ಲಿ ಲ್ಯಾಂಡ್ ಆಗಬೇಕು ಅಥವಾ ಹಾರಾಡುತ್ತಿರುವ ಸ್ಥಳದ ವಾತಾವರಣ ಹೇಗಿದೆ? ಈ ಎಲ್ಲ ಅಂಶಗಳನ್ನು ಆಧರಿಸಿ ವಿಮಾನ ಚಲಾಯಿಸಬೇಕಾಗುತ್ತದೆ. ಅನುಭವಿ ಪೈಲೆಟ್ ಗಳನ್ನು ಮಾತ್ರ ಇದಕ್ಕೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಭಾರತೀಯ ವಾಯುಸೇನೆಗೆ ಅಭಿನಂದನೆ ಸಲ್ಲಿಸಲೇಬೇಕು
ಡಿಆರ್ ಡಿಒ ನಿರ್ದೇಶಕ ಡಾ. ಕೆ.ತಮೀಳ್ ಮಣಿ ಭಾರತೀಯ ವಾಯುಸೇನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಕ್ಷಿಪಣಿ ಹಿಂದಿಕ್ಕುವ ಪ್ರಯತ್ನದಲ್ಲಿ ಯಾವುದೇ ಅವಘಡವಾಗದಂತೆ ನೋಡಿಕೊಳ್ಳಲಾಗಿದೆ. ನಿರ್ಭಯದ ಶಕ್ತಿ ಅರಿಯಲು ಸೇನೆ ಸೂಕ್ತ ರೀತಿಯಲ್ಲಿ ನೆರವು ನೀಡಿತು. ಅಲ್ಲದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು ಎಂದು ತಮಿಳ್ ಮಣಿ ಹೇಳಿದ್ದಾರೆ.
ಹಿಂದಿಕ್ಕುವುದು ಸುಲಭದ ಕೆಲಸವಲ್ಲ
ಆಕಾಶ ಮಾರ್ಗದಲ್ಲಿ ಕ್ಷಿಪಣಿಯೊಂದನ್ನು ಹಿಂದಿಕ್ಕುವುದು ಸುಲಭದ ಕೆಲಸವಲ್ಲ ಎಂದು ತೇಜಸ್ ಯುದ್ಧ ವಿಮಾನದ ಪೈಲೆಟ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ನೀವು ಒಂದು ಕ್ಷಣ ವ್ಯತ್ಯಾಸ ಮಾಡಿಕೊಂಡರೂ ಕ್ಷಿಪಣಿಯನ್ನು ಹಿಡಿಯಲು ಸಾಧ್ಯವಾಗಲ್ಲ. ಜಾಗದಿಂದ ಯಾವಾಗ ಹೊರಡಬೇಕು ಎಂಬುದನ್ನು ಮೊದಲೇ ಅರಿತಿದ್ದು ಸೂಕ್ತ ಸಿದ್ಧತೆ ಮಾಡಿಕೊಂಡಿರಬೇಕು. ಕ್ಷಿಪಣಿ ಹಾರಾಟ, ವೇಗ ಎಲ್ಲವನ್ನು ಮನಸ್ಸಿನಲ್ಲಿಯೇ ಲೆಕ್ಕ ಹಾಕಿಕೊಳ್ಳಬೇಕಾಗುತ್ತದೆ. ಕ್ಷಿಪಣಿ ವೇಗಕ್ಕೆ ವಿಮಾನದ ವೇಗವನ್ನು ಶೀಘ್ರವಾಗಿ ಹೆಚ್ಚಿಸಿಕೊಳ್ಳಬೇಕಾಗಿತ್ತದೆ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ನಿರ್ಭಯ ಕ್ಷಿಪಣಿ ಶಕ್ತಿ ಪರೀಕ್ಷಿಸಲು ತೆರಳಿದ್ದ ಜಾಗ್ವಾರ್ ಯುದ್ಧ ವಿಮಾನ ಸಹ ತನ್ನ ಶಕ್ತಿ ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದೆ.

-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications