ಕಳೆದ ವರ್ಷಕ್ಕೆ ಹೋಲಿಸಿದರೆ ಈರುಳ್ಳಿ ಬೆಲೆ ತುಂಬಾ ಅಗ್ಗ: ಕೇಂದ್ರ ಸರ್ಕಾರ
ನವದೆಹಲಿ, ನವೆಂಬರ್ 04: "ಈ ವರ್ಷ ಈರುಳ್ಳಿ ದರವು ಕಳೆದ ವರ್ಷಕ್ಕಿಂತ ತುಂಬಾ ಕಡಿಮೆ ಆಗಿದೆ. ಬೆಲೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಾಡಿದ ಪ್ರಯತ್ನಗಳು ಈಗ ಫಲ ನೀಡುತ್ತಿದೆ," ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಬುಧವಾರ ಹೇಳಿದೆ.
ಈ ಬಗ್ಗೆ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಈರುಳ್ಳಿಯ ಚಿಲ್ಲರೆ ಹಾಗೂ ಸಗಟು ದರವು ಕೆಜಿಗೆ 40.13 ರೂಪಾಯಿ ಆಗಿದೆ ಹಾಗೂ ಕ್ವಿಂಟಾಲ್ಗೆ 3215.92 ಆಗಿದೆ ಎಂದು ಮಾಹಿತಿ ನೀಡಿದೆ.
" /> ಪಾತಾಳಕ್ಕೆ ಕುಸಿದ ಈರುಳ್ಳಿ ದರ: ರೈತರ ಕಣ್ಣಲ್ಲಿ ನೀರು
"ಅಕ್ಟೋಬರ್ ಮೊದಲ ವಾರದಲ್ಲಿ ಈರುಳ್ಳಿ ಬೆಲೆಯು ಏರಿಕೆ ಆಗಿರುವುದನ್ನು ನೀವು ಗಮನಿಸಿರಬಹುದು. ಮಳೆಯ ಕಾರಣದಿಂದಾಗಿ ಈ ಏರಿಕೆ ಕಂಡು ಬಂದಿತ್ತು. ಈ ಹಿನ್ನೆಲೆಯಿಂದಾಗಿ ನಾವು ಈರುಳ್ಳಿ ಬೆಲೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಂಡೆವು," ಎಂದು ಕೂಡಾ ಉಲ್ಲೇಖ ಮಾಡಲಾಗಿದೆ.
"ಈರುಳ್ಳಿ ಬೆಲೆಯನ್ನು ಇಳಿಸುವ ನಿಟ್ಟಿನಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆಯು ಕ್ರಮವನ್ನು ಕೈಗೊಂಡಿದೆ. ಫಸ್ಟ್-ಇನ್-ಫಸ್ಟ್-ಔಟ್ (ಎಫ್ಐಎಫ್ಒ) ತತ್ವವನ್ನು ಅನುಸರಣೆ ಮಾಡಲಾಗುತ್ತಿದೆ. ಈರುಳ್ಳಿ ಬೆಲೆಯ ಬಗ್ಗೆ ನಾವು ಅಧಿಕ ಗಮನ ಹರಿಸುತ್ತಿದ್ದೇವೆ. ಈರುಳ್ಳಿ ಬೆಲೆಯನ್ನು ಕಡಿಮೆ ಮಾಡಲು ಹಾಗೂ ಕನಿಷ್ಠ ಶೇಖರಣಾ ನಷ್ಟದ ಬಗ್ಗೆ ಖಾತ್ರಿ ಪರಿಸುವ ನಾವು ಅವಳಿ ಉದ್ದೇಶದ ಮಾರ್ಗದರ್ಶನ ನೀಡಿದ್ದೇವೆ. ಈ ಮೂಲಕ ಈರುಳ್ಳಿ ಬೆಲೆ ಇಳಿಕೆ ಮಾಡಲು ಸಾಧ್ಯವಾಗಿದೆ," ಎಂದು ತಿಳಿಸಿದೆ.
"ಪ್ರಮುಖ ಮಾರುಕಟ್ಟೆಯಲ್ಲಿ ನವೆಂಬರ್ 2 ರವರೆಗೆ ಒಟ್ಟು 1,11,376.17 ಮೆಟ್ರಿಕ್ ಟನ್ ಈರುಳ್ಳಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಮುಖ ಮಾರುಕಟ್ಟೆಗಳಾದ ದೆಹಲಿ, ಕೋಲ್ಕತ್ತಾ, ಲಕ್ನೋ, ಪಾಟ್ನಾ, ರಾಂಚಿ, ಗುವಾಹಟಿ, ಭುವನೇಶ್ವರ, ಹೈದಾರಾಬಾದ್, ಬೆಂಗಳೂರು, ಚೆನ್ನೈ, ಮುಂಬೈ, ಚಂಡೀಗಢ, ಕೊಚ್ಚಿ ಹಾಗೂ ರಾಯಪುರದಲ್ಲಿ ನವೆಂಬರ್ 2 ರವರೆಗೆ ಒಟ್ಟು 1,11,376.17 ಮೆಟ್ರಿಕ್ ಟನ್ ಈರುಳ್ಳಿಯನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಮಹಾರಾಷ್ಟ್ರ, ಮಧ್ಯ ಪ್ರದೇಶ ಹಾಗೂ ಗುಜರಾತ್ನ ಸ್ಥಳೀಯ ಮಾರುಕಟ್ಟೆಯಲ್ಲಿ ಹೆಚ್ಚುವರಿ ಈರುಳ್ಳಿಯನ್ನು ವಿಲೇವಾರಿ ಮಾಡಲಾಗಿದೆ," ಎಂದು ಕೇಂದ್ರ ಸರ್ಕಾರ ವಿವರಿಸಿದೆ.
ಅಮೆರಿಕದಲ್ಲಿ ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾ ಹಾವಳಿ: 650ಕ್ಕೂ ಹೆಚ್ಚು ಜನ ಅಸ್ವಸ್ಥ
ಈರುಳ್ಳಿ ಬೆಲೆ ಈಗ ಕೆಜಿಗೆ 5- 12 ರೂಪಾಯಿ ಅಗ್ಗ ಎಂದ ಕೇಂದ್ರ
ಇನ್ನು ಇದೇ ಸಂದರ್ಭದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು, "ಈರುಳ್ಳಿ ಬೆಲೆಯು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೆಜಿಗೆ ರೂಪಾಯಿ 21 ಗೆ ನೀಡಲಾಗಿದೆ," ಎಂದು ತಿಳಿಸಿದೆ. "ಇದು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಚಿಲ್ಲರೆ ಮಾರಾಟ ಮಳಿಗೆಗಳಿಗೆ ನೇರ ಪೂರೈಕೆಯ ಮೂಲಕ ತಾವಾಗಿಯೇ ಮಾರುಕಟ್ಟೆ ಮಧ್ಯಸ್ಥಿಕೆ ತೆಗೆದುಕೊಳ್ಳಲು ಅನುವು ಮಾಡಿಕೊಡಲಿದೆ. ಹಾಗೆಯೇ ಬೆಲೆಗಳನ್ನು ಇಳಿಸುವ ನಿಟ್ಟಿನಲ್ಲಿ ಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಡಲಿದೆ," ಎಂದು ಕೇಂದ್ರ ಸರ್ಕಾರ ಉಲ್ಲೇಖ ಮಾಡಿದೆ.
ಈ ಸಂದರ್ಭದಲ್ಲೇ ಈರುಳ್ಳಿ ಬೆಲೆ ಈಗ ಕೆಜಿಗೆ 5- 12 ರೂಪಾಯಿ ಅಗ್ಗವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರವು ದೇಶಾದ್ಯಂತ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಬಫರ್ ಸ್ಟಾಕ್ನಿಂದ ಇದುವರೆಗೆ 1.11 ಲಕ್ಷ ಟನ್ ಈರುಳ್ಳಿಯನ್ನು ಬಿಡುಗಡೆ ಮಾಡಿದೆ, ಇದರಿಂದಾಗಿ ಚಿಲ್ಲರೆ ಬೆಲೆಯು ಕೆಜಿಗೆ 5- 12 ರೂಪಾಯಿಯಷ್ಟು ಅಗ್ಗವಾಗಲು ಸಹಾಯ ಮಾಡಿದೆ ಎಂದು ಹೇಳಿದೆ.
Recommended Video
(ಒನ್ಇಂಡಿಯಾ ಸುದ್ದಿ)