ಒಂದು ಸೀರೆ ಕೊಂಡ್ರೆ ಕೆಜಿ ಈರುಳ್ಳಿ ಫ್ರಿ! ಸರ್ಕಾರ ಬೀಳೋದು ಗ್ಯಾರಂಟಿ?
ಎಂಥ ಕಲ್ಲು ಹೃದಯದವರಲ್ಲೂ ಕಣ್ಣೀರು ಹಾಕಿಸುವ ತಾಕತ್ತಿದ್ದರೆ ಅದು ಈರುಳ್ಳಿಗೆ ಮಾತ್ರ! ಪ್ರತಿನಿತ್ಯದ ಬಹುತೇಕ ಆಹಾರ ಪದಾರ್ಥಗಳಲ್ಲಿ ಉಪಯೋಗವಾಗುವ ಈರುಳ್ಳಿಯ ಬೆಲೆ ಕೈಗೆಟುಕದಷ್ಟು ಮೇಲೇರಿದರೆ...?
ಈರುಳ್ಳಿ ಬೆಲೆ ಹೆಚ್ಚಾಗುವುದು ಜನಸಾಮಾನ್ಯನ ಜೇಬಿಗೆ ಕತ್ತರಿ ಹಾಕುವುದಷ್ಟೇ ಆಗಿದ್ದರೆ ರಾಜಕಾರಣಿಗಳೆಲ್ಲ ನಿದ್ದೆ ಬಿಟ್ಟು ತಲೆಕೆಡಿಸಿಕೊಳ್ಳುತ್ತಿರಲಿಲ್ಲ! ಪ್ರತಿ ಬಾರಿ ಈ ಈರುಳ್ಳಿ ಬೆಲೆಏರಿದಾಗಲೂ ನಡೆಯುವ ರಾಜಕೀಯ ಸ್ಥಿತ್ಯಂತರಗಳ ಇತಿಹಾಸ ನೋಡಿದರೆ 'ಈರುಳ್ಳಿ' ಬೆಲೆ ಏರಿಕೆಗೂ ರಾಜಕಾರಣಕ್ಕೂ ಇರುವ ಸಂಬಂಧ ಕುತೂಹಲ ಕೆರಳಿಸುತ್ತದೆ.
ಸದ್ಯಕ್ಕೆ ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿಈ ಈರುಳ್ಳಿ ಬೆಲೆ ಕೆಜಿಗೆ 60ರ ಗಡಿ ದಾಟಿದೆ. ಪಂಜಾಬ್ನಲ್ಲಿ ಈಗಲೇ 70 ರೂ. ಆಗಿದ್ದು, ಇತರ ರಾಜ್ಯಗಳಲ್ಲೂ ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಹಲವು ರಾಜ್ಯಗಳಲ್ಲಿ ಉಂಟಾದ ಪ್ರವಾಹದಿಂದಾಗಿ ಈರುಳ್ಳಿ ಉತ್ಪಾದನೆ ಕಡಿಮೆಯಾಗಿದ್ದು, ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ಈರುಳ್ಳಿ ಬೆಲೆಯೂ ಹೆಚ್ಚಾಗಿದೆ. ಜನಸಾಮಾನ್ಯನಿಗೆ ಈರುಳ್ಳಿ ಬೆಲೆ ಏರಿಕೆಯ ಚಿಂತೆಯಾದರೆ, ರಾಜಕಾರಣಿಗಳಿಗೆ ಸೀಟು ಕಳೆದುಕೊಳ್ಳುವ ಭೀತಿ ಎದುರಾಗಿದೆ..! ಅದಕ್ಕೆ ಕಾರಣವೂ ಇದೆ!

ಇಂದಿರಾ ಗಾಂಧಿಯನ್ನು ಗೆಲ್ಲಿಸಿದ್ದ ಈರುಳ್ಳಿ ಬೆಲೆ!
1980 ರಲ್ಲಿ ಇಂದಿರಾ ಗಾಂಧಿಯವರು ಮೊತ್ತ ಮೊದಲ ಕಾಂಗ್ರೆಸ್ಸೇತರ ಸರ್ಕಾರವಾಗಿದ್ದ ಜನತಾ ಪಕ್ಷದ ಸರ್ಕಾರವನ್ನು ಸೋಲಿಸಿ, ಮತ್ತೆ ಅಧಿಕಾರಕ್ಕೆ ಬಂದ ಸಂದರ್ಭದಲ್ಲೂ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಆಗ ಇಂದಿರಾ ಗಾಂಧಿಯವರನ್ನು ಕೈಹಿಡಿದಿದ್ದೇ ಈರುಳ್ಳಿ ಬೆಲೆ ಎಂದು ಇಂದಿಗೂ ನಂಬಿಕೊಂಡವರಿದ್ದಾರೆ!

ಸುಷ್ಮಾ ಸ್ವರಾಜ್ ರನ್ನು ಸೋಲಿಸಿದ್ದು!
1998 ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಬಿಜೆಪಿ ನಾಯಕಿ, ದಿ. ಸುಷ್ಮಾ ಸವರಾಜ್ ಅವರು ಸೋಲನುಭವಿಸಿದ್ದರು. ಆ ಸಂದರ್ಭದಲ್ಲಿ ರಾಜಸ್ಥಾನ ಮತ್ತು ದೆಹಲಿಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಕೆಜಿಗೆ 40 (ಅಂದಿನ ಬೆಲೆ) ರೂ. ಇದ್ದ ಈರುಳ್ಳಿ ಬೆಲೆಯಿಂದಲೇ ಸುಷ್ಮಾ ಸ್ವರಾಜ್ ಸೋಲನುಭವಿಸಿದರು ಎಂಬ ಮಾತು ಆಗ ಎಲ್ಲೆಡೆ ಕೇಳಿಬಂದಿತ್ತು.

ಒಂದು ಸೀರೆ ಕೊಂಡ್ರೆ ಕೆಜಿ ಈರುಳ್ಳಿ ಫ್ರಿ.
ಈರುಳ್ಳಿ ಬೆಲೆ ಪ್ರತಿ ಬಾರಿ ಹೆಚ್ಚಾದಾಗಲೂ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜೋಕುಗಳು ಸದ್ದುಮಾಡುತ್ತವೆ. ಈಗಲೂ ಈರುಳ್ಳಿ ಬೆಲೆ ಏರುತ್ತಿದ್ದಂತೆಯೇ, "ಒಂದು ಸೀರೆ ಕೊಂಡ್ರೆ ಒಂದು ಕೆಜಿ ಈರುಳ್ಳಿ ಫ್ರೀ, 1 ಡಾಲರ್= 750 ಗ್ರಾಂ ಈರುಳ್ಳಿ" ಎಂಬೆಲ್ಲ ಟ್ವೀಟ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಈರುಳ್ಳಿ ಅಡವಿಟ್ಟು ಸಾಲ!
"ಈರುಳ್ಳಿ ಅಡವಿಟ್ಟರೆ ಸಾಲ ಕೊಡ್ತೀರಾ" ಎಂದು ವ್ಯಕ್ತಿಯೊಬ್ಬರು ಬ್ಯಾಂಕಿಗೆ ಕೇಳಿದ್ದಾರೆ!
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications