ಸರಕಾರದ ಕಾರ್ಯವೈಖರಿಯ ಸಮೀಕ್ಷೆ: ಅಖಿಲೇಶ್ ಮುಖಕ್ಕೆ ಮಂಗಳಾರತಿ
ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಲೋಕಲ್ ಸರ್ಕಲ್ಸ್ ಎನ್ನುವ ಸಂಸ್ಥೆ ನಡೆಸಿದ ಆನ್ಲೈನ್ ಸಮೀಕ್ಷೆಯಲ್ಲಿ, ಉತ್ತರಪ್ರದೇಶದ ಜನತೆ ಸಿಎಂ ಅಖಿಲೇಶ್ ಯಾದವ್ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಚುನಾವಣೆಯ ಹೊಸ್ತಿಲಲ್ಲಿರುವ ಉತ್ತರಪ್ರದೇಶದಲ್ಲಿ ನಾಲ್ಕು ಪ್ರಮುಖ ಪಕ್ಷಗಳಾದ ಬಿಜೆಪಿ, ಎಸ್ಪಿ, ಬಿಎಸ್ಪಿ ಮತ್ತು ಕಾಂಗ್ರೆಸ್ ಪಾರ್ಟಿಗಳ ನಾಯಕರ ಭರಾಟೆ ಹೇಳತೀರದು.
ಕಳೆದ ಅಕ್ಟೋಬರ್ ನಿಂದ ಮೊನ್ನೆಮೊನ್ನೆಯವರೆಗಿನ ಚುನಾವಣಾಪೂರ್ವ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತು ಎಸ್ಪಿ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದೆಯಾದರೂ, ಆನ್ಲೈನ್ ಸಮೀಕ್ಷೆಯೊಂದರಲ್ಲಿ ಜನ ಸಿಎಂ ಅಖಿಲೇಶ್ ಯಾದವ್ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. (ಎಸ್ಪಿ-ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಕಷ್ಟಕಷ್ಟ)
ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಲೋಕಲ್ ಸರ್ಕಲ್ಸ್ ನಡೆಸಿದ ಆನ್ಲೈನ್ ಸಮೀಕ್ಷೆಯಲ್ಲಿ ಲಕ್ಷಕ್ಕೂ ಹೆಚ್ಚು ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದರು.
ಪ್ರಮುಖವಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸರಕಾರ ಭ್ರಷ್ಟಾಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವ ಅಭಿಪ್ರಾಯ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ.
'ಕಾಂ ಬೋಲ್ತಾ ಹೇ'(ಕೆಲಸ ಮಾತನಾಡುತ್ತದೆ) ಎಂದು ಜನರ ಬಳಿ ಮತಯಾಚಿಸುತ್ತಿರುವ ಅಖಿಲೇಶ್ ಯಾದವ್ ಗೆ ಸಮೀಕ್ಷೆಯಲ್ಲಿ ಜನ ಮಂಗಳಾರತಿ ಮಾಡಿರುವುದು, ಮುಂದಿನ ಚುನಾವಣೆಯ ಫಲಿತಾಂಶದ ದಿಕ್ಸೂಚಿ ಎಂದೇ ಸಮೀಕ್ಷೆಯಲ್ಲಿ ಭಾಗವಹಿಸಿದವರು ಅಭಿಪ್ರಾಯ ಪಟ್ಟಿದ್ದಾರೆ.
ನೆಲಕಚ್ಚಿದ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಮೀಕ್ಷೆಯ ಇತರ ಅಂಶಗಳು, ಮುಂದೆ ಓದಿ..

ನೀವು ಮತ್ತು ನಿಮ್ಮ ಕುಟುಂಬ ಉತ್ತರಪ್ರದೇಶದಲ್ಲಿ ಸುರಕ್ಷಿತರೇ?
ಹೌದು - ಶೇ. 3
ತಕ್ಕಮಟ್ಟಿಗೆ - ಶೇ. 15
ಇಲ್ಲ - ಶೇ. 45
ಇಲ್ಲವೇ ಇಲ್ಲ - ಶೇ. 37

ಸರಕಾರದ ಯಾವ ಇಲಾಖೆ ಅತ್ಯಂತ ಭ್ರಷ್ಟ?
ರಾಜ್ಯ ತೆರಿಗೆ ಇಲಾಖೆ - ಶೇ. 10
ಪೊಲೀಸ್ ಇಲಾಖೆ - ಶೇ. 37
ಮುದ್ರಣ ಮತ್ತು ನೊಂದಣಿ - ಶೇ. 37
ಮುನ್ಸಿಪಲ್ ಕಚೇರಿ - ಶೇ. 16

ರಾಜ್ಯದ ಆರೋಗ್ಯ ಇಲಾಖೆ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ?
ಉತ್ತಮ ಮೂಲಸೌಕರ್ಯ ಮತ್ತು ಸೇವೆ - ಶೇ. 2
ಕಳಪೆ ಮೂಲಸೌಕರ್ಯ ಮತ್ತು ಕಳಪೆ ಸೇವೆ - ಶೇ. 70
ಉತ್ತಮ ಮೂಲಸೌಕರ್ಯ ಮತ್ತು ಕಳಪೆ ಸೇವೆ - ಶೇ. 19
ಕಳಪೆ ಮೂಲಸೌಕರ್ಯ ಮತ್ತು ಉತ್ತಮ ಸೇವೆ - ಶೇ. 9

ರಾಜ್ಯದಲ್ಲಿ ಉದ್ಯೋಗಾವಕಾಶ ಹೇಗಿದೆ?
ವಿಪುಲ ಉದ್ಯೋಗಾವಕಾಶ - ಶೇ. 9
ನಿಯಮಿತ ಉದ್ಯೋಗಾವಕಾಶ - ಶೇ. 33
ಉದ್ಯೋಗಾವಕಾಶ ಇಲ್ಲವೇ ಇಲ್ಲ - ಶೇ. 58

ಕಳೆದ 5ವರ್ಷಗಳಲ್ಲಿ ರಾಜ್ಯದ ಮೂಲಭೂತ ಸೌಕರ್ಯದಲ್ಲಿ ಅಭಿವೃದ್ದಿಯಾಗಿದೆಯೇ?
ತೀರಾ ಹದೆಗೆಟ್ಟಿದೆ - ಶೇ. 20
ಯಾವುದೇ ಬದಲಾವಣೆಯಾಗಿಲ್ಲ - ಶೇ. 22
ಉತ್ತಮ ಬದಲಾವಣೆಯಾಗಿದೆ - ಶೇ. 18
ತಕ್ಕಮಟ್ಟಿನ ಸುಧಾರಣೆಯಾಗಿದೆ - ಶೇ. 40
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications