Get Updates
Get notified of breaking news, exclusive insights, and must-see stories!

Tirupati: ‘ತಿರುಮಲದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು’ ಸಿಎಂ ಚಂದ್ರಬಾಬು ನಾಯ್ಡು

ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕೆಲಸಕ್ಕೆ ಹಿಂದೂಗಳನ್ನು ಮಾತ್ರ ನೇಮಿಸಿಕೊಳ್ಳಬೇಕು, ಇತರ ಧರ್ಮದ ನೌಕರರನ್ನು ವರ್ಗಾವಣೆ ಮಾಡಲಾಗುವುದು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ದೇವಾಲಯವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯು ಹಿಂದೂಯೇತರ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ಭಾಗವಹಿಸುವ 18 ಉದ್ಯೋಗಿಗಳನ್ನು ವರ್ಗಾವಣೆ ಮಾಡಿದ ಸುಮಾರು ಎರಡು ತಿಂಗಳ ನಂತರ ಮುಖ್ಯಮಂತ್ರಿಗಳು ತಮ್ಮ ಮೊಮ್ಮಗ ಎನ್ ದೇವಾಂಶ ನಾಯ್ಡು ಅವರ ಜನ್ಮದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

Only Hindus should work at Tirumala CM Chandrababu Naidu has ordered

"ಇತರ ಧರ್ಮಗಳಿಗೆ ಸೇರಿದ ಜನರು ಇನ್ನೂ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ ಅವರನ್ನು ಗೌರವಯುತವಾಗಿ ಬೇರೆ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತದೆ. ಕ್ರಿಶ್ಚಿಯನ್ನರು ಅಥವಾ ಮುಸ್ಲಿಮರು ಹಿಂದೂ ಸ್ಥಳಗಳಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಲು ಬಯಸದಿದ್ದರೆ, ಅವರ ಭಾವನೆಗಳನ್ನು ಗೌರವಿಸಲಾಗುತ್ತದೆ ಮತ್ತು ವರ್ಗಾಯಿಸಲಾಗುತ್ತದೆ" ಎಂದು ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.

ಫೆಬ್ರವರಿ 1ರಂದು ತಿರುಮಲದಿಂದ ವರ್ಗಾವಣೆಯಾದ 18 ಉದ್ಯೋಗಿಗಳಲ್ಲಿ ಆರು ಮಂದಿ ವಿವಿಧ ಟಿಟಿಡಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿದ್ದರು. ಉಳಿದವರಲ್ಲಿ ಉಪ ಕಾರ್ಯನಿರ್ವಾಹಕ ಅಧಿಕಾರಿ (ಕಲ್ಯಾಣ), ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ತಾಂತ್ರಿಕ ಅಧಿಕಾರಿ (ವಿದ್ಯುತ್), ಹಾಸ್ಟೆಲ್ ಕೆಲಸಗಾರ, ಇಬ್ಬರು ಎಲೆಕ್ಟ್ರಿಷಿಯನ್‌ಗಳು ಮತ್ತು ಇಬ್ಬರು ದಾದಿಯರು ಸೇರಿದ್ದಾರೆ. ಈ ಎಲ್ಲಾ 18 ಜನರನ್ನು ಪರಸ್ಪರ ಒಪ್ಪಿಗೆಯ ಹುದ್ದೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಇತರ ಧರ್ಮಗಳ ಯಾವುದೇ ಉದ್ಯೋಗಿಗಳಿಲ್ಲ ಎಂದು ತಿಳಿದು ಬಂದಿದೆ.

Only Hindus should work at Tirumala CM Chandrababu Naidu has ordered

'ದೇವಾಲಯ ಪಟ್ಟಣದ ಪಾವಿತ್ರ್ಯವನ್ನು ಕಾಪಾಡುವ" ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ. ದೇವಸ್ಥಾನದಲ್ಲಿ ಅನ್ನ ದಾನ (ಆಹಾರ ವಿತರಣೆ) ಕಾರ್ಯಕ್ರಮವನ್ನು ದಿವಂಗತ (ಸಿಎಂ) ಎನ್‌ಟಿ ರಾಮರಾವ್ ಅವರ ಅವಧಿಯಲ್ಲಿ ಪ್ರಾರಂಭಿಸಲಾಯಿತು. ನಾವು ದೇವಾಲಯಗಳ ನಿರ್ಮಾಣವನ್ನು ಯೋಜಿಸುತ್ತಿದ್ದೇವೆ ಮತ್ತು ದೇವರ ಸೇವೆಗಾಗಿ ಮಾತ್ರ ಟ್ರಸ್ಟ್ ಅನ್ನು ರಚಿಸಲಾಗುವುದು ಎಂದರು.

ಇಲ್ಲಿ ಐಷಾರಾಮಿ ಹೋಟೆಲ್‌ಗಳ ಅಭಿವೃದ್ಧಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ದೇವಲೋಕ, ಎಂಆರ್‌ಕೆಆರ್ ಮತ್ತು ಮುಮ್ತಾಜ್ ಬಿಲ್ಡರ್‌ಗಳ ಹೋಟೆಲ್ ಡೆವಲಪರ್‌ಗಳಿಗೆ ತಿರುಪತಿಯಲ್ಲಿ 35 ಎಕರೆ ಭೂಮಿ ಹಂಚಿಕೆಯನ್ನು ರದ್ದುಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಘೋಷಿಸಿದರು. ಇಲ್ಲಿ ಈ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರವು ಭೂಮಿ ಹಂಚಿಕೆ ಮಾಡಿತ್ತು.

ಇದೇ ವೇಳೆ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ದೇವಸ್ಥಾನಗಳನ್ನು ನಿರ್ಮಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಉದ್ದೇಶಕ್ಕಾಗಿ ಹಣವನ್ನು ಸಂಗ್ರಹಿಸಲು ಟ್ರಸ್ಟ್ ಅನ್ನು ಸ್ಥಾಪಿಸಲಾಗುವುದು. ಈ ಉದ್ದೇಶಕ್ಕಾಗಿ ನಾವು ಶೀಘ್ರದಲ್ಲೇ ರಾಜ್ಯದ ಎಲ್ಲಾ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇವೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+