ಆಪರೇಷನ್ ಬ್ಲೂಸ್ಟಾರ್ 34ನೇ ವರ್ಷಾಚರಣೆ: ಸ್ವರ್ಣಮಂದಿರಕ್ಕೆ ಬಿಗಿ ಭದ್ರತೆ
ಅಮೃತಸರ, ಜೂನ್ 6: ತೀವ್ರ ವಿವಾದಕ್ಕೆ ಒಳಗಾಗಿದ್ದ ಆಪರೇಷನ್ ಬ್ಲೂಸ್ಟಾರ್ಗೆ ಬುಧವಾರ 34 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪಂಜಾಬ್ನ ಅಮೃತಸರದಲ್ಲಿರುವ ಸ್ವರ್ಣ ಮಂದಿರಕ್ಕೆ ಭಾರಿ ಭದ್ರತೆ ಒದಗಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ತ್ವರಿತ ಕಾರ್ಯಾಚರಣೆ ಪಡೆಯ ಐದು ತಂಡಗಳು, ಅರೆಸೇನಾ ಪಡೆಯ ತುಕಡಿಗಳನ್ನು ನಗರದೆಲ್ಲೆಡೆ ನಿಯೋಜಿಸಲಾಗಿದೆ.
ವರ್ಷಾಚರಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಹರಡಲು ವಿದೇಶಿ ಶಕ್ತಿಗಳು ಸಂಚು ರೂಪಿಸುವ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಸ್ವರ್ಣ ಮಂದಿರದ ಸಂಕೀರ್ಣದಲ್ಲಿ ಅಡಗಿಕೊಂಡಿದ್ದ ಉಗ್ರರನ್ನು ಸದೆಬಡಿಯಲು 1984ರಲ್ಲಿ ಸೇನಾ ಪಡೆಯು 'ಆಪರೇಷನ್ ಬ್ಲೂಸ್ಟಾರ್' ಕಾರ್ಯಾಚರಣೆ ನಡೆಸಿತ್ತು.
ಕಾರ್ಯಾಚರಣೆ ವೇಳೆ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲು ದಾಲ್ ಖಲ್ಸಾ ಎಂಬ ತೀವ್ರಗಾಮಿ ಸಂಘಟನೆಯೊಂದು ಮಂಗಳವಾರ ಅಮೃತಸರದಲ್ಲಿ 'ಹತ್ಯಾಕಾಂಡ ಸ್ಮರಣೆಯ ಪಥಸಂಚಲನ' ನಡೆಸಿತ್ತು.
ಪ್ರತ್ಯೇಕ ಖಲಿಸ್ತಾನ ದೇಶಕ್ಕೆ ಬೇಡಿಕೆ ಇಟ್ಟಿದ್ದ ಉಗ್ರರು, ಸ್ವರ್ಣಮಂದಿರವನ್ನು ವಶಕ್ಕೆ ತೆಗೆದುಕೊಂಡು, ಅದರಲ್ಲಿದ್ದ ಜನರನ್ನು ಒತ್ತೆ ಇರಿಸಿಕೊಂಡಿದ್ದರು.
ಆಗ ಪ್ರಧಾನಿ ಇಂದಿರಾಗಾಂಧಿ ಅವರು ಸೇನೆಯನ್ನು ರವಾನಿಸಿ ಉಗ್ರರನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಈ ಕಾರ್ಯಾಚರಣೆ ಮುಂದೆ ಇಂದಿರಾಗಾಂಧಿ ಅವರ ಹತ್ಯೆಗೂ ಕಾರಣವಾಯಿತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications