Karnataka CM: ಡಿಕೆಶಿ-ಸಿದ್ದುಗೆ ಆಪರೇಷನ್ ಕಮಲದ ಎಚ್ಚರಿಕೆ ಕೊಟ್ಟ ಹೈಕಮಾಂಡ್
ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆಯುವ ಮೂಲಕ ಸರ್ಕಾರ ರಚನೆ ಮಾಡಲು ಮುಂದಾಗಿರುವ ಕಾಂಗ್ರೆಸ್ಗೆ ಸದ್ಯ ಸಿಎಂ ಆಯ್ಕೆ ಕಗ್ಗಂಟಾಗಿದೆ. ಸಿದ್ದರಾಮಯ್ಯ - ಡಿಕೆಶಿ ನಡುವಿನ ಹಗ್ಗಜಗ್ಗಾಟ ಅಂತಿಮ ಹಂತಕ್ಕೆ ಬಂದಿದ್ದು, ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗುದು ಖಚಿತವಾಗಿದೆ.
ಹೈಕಮಾಂಡ್ ಜೊತೆ ಉಭಯ ನಾಯಕರು ಸುದೀರ್ಘ ಚರ್ಚೆ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಉಭಯ ನಾಯಕರಿಗೆ 'ಆಪರೇಷನ್ ಕಮಲ'ದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಚರ್ಚೆ ವೇಳೆ, ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ಇಬ್ಬರಿಗೂ ಸೂಚನೆ ನೀಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಫುಲ್ ಅಲರ್ಟ್ ಆಗಿದ್ದು, ಎಲ್ಲಾ 135 ಶಾಸಕರ ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಅನೇಕ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸಂಪರ್ಕಿಸಿರುವ ಮಾಹಿತಿ ಸಿಕ್ಕಿದ್ದು, ನಾವು ಸ್ವಲ್ಪ ಯಾಮಾರಿದ್ರೂ ದೊಡ್ಡ ಗಂಡಾಂತರ ಎದುರಾಗಬಹುದು ಎಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದೆ.
2018ರಲ್ಲಿ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಆಪರಷೇನ್ ಕಮಲ ನಡೆಸಿದ್ದ ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಆಪರೇಷನ್ ಕಮಲದ ಕಾರಣ ಕಾಂಗ್ರೆಸ್ ಈಗಾಗಲೇ ಭಾರಿ ಹೊಡೆತ ತಿಂದಿದೆ. ಇನ್ನು ಮುಂದೆ ಅಂತಹ ಪರಿಸ್ಥಿತಿ ಬರದಂತೆ ನೋಡಿಕೊಳ್ಳಲು ಕಾಂಗ್ರೆಸ್ ಹೈ ಕಮಾಂಡ್ ಭಾರಿ ಎಚ್ಚರಿಕೆ ವಹಿಸುತ್ತಿದೆ.
ಫಲಿತಾಂಶದ ದಿನವೇ ರೆಸಾರ್ಟ್ ಬುಕ್ ಮಾಡಿದ್ದ ಕಾಂಗ್ರೆಸ್
ಅತಂತ್ರ ಫಲಿತಾಂಶ ಅಥವಾ 120 ಸ್ಥಾನಗಳನ್ನು ಗೆಲ್ಲುವ ಆತಂಕದಲ್ಲಿದ್ದ ಕಾಂಗ್ರೆಸ್ ಫಲಿತಾಂಶದ ದಿನವೇ ಹೈದರಾಬಾಗ್, ಜೈಪುರದಲ್ಲಿ ರೆಸಾರ್ಟ್ ಅನ್ನು ಬುಕ್ ಮಾಡಿತ್ತು. ಕಡಿಮೆ ಸ್ಥಾನ ಬಂದರೆ, ಅಥವಾ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಬಿಜೆಪಿ ಅಧಿಕಾರ ಹಿಡಿಯಲು ಆಪರೇಷನ್ ಕಮಲಕ್ಕೆ ಯತ್ನಿಸುತ್ತದೆ ಎನ್ನುವ ಭಯ ಕೈ ನಾಯಕರನ್ನು ಕಾಡಿತ್ತು. ಆದರೆ, ಬಿಜೆಪಿ ಕೇವಲ 66 ಸ್ಥಾನಕ್ಕೆ ಕುಸಿದು, ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಳಿಕ ಕೈ ನಾಯಕರ ಆತಂಕ ದೂರವಾಗಿತ್ತು.
ಸಿಎಂ ಆಯ್ಕೆ ಬಳಿಕ, ಸಚಿವ ಸ್ಥಾನ ಹಂಚಿಕೆ ಸಂದರ್ಭದಲ್ಲಿ ಕೂಡ ಕಾಂಗ್ರೆಸ್ನಲ್ಲಿ ಒಂದಷ್ಟು ಅಸಮಾಧಾನ ಕಾಣಿಸಿಕೊಳ್ಳುವ ಆತಂಕ ಇದ್ದೇ ಇದೆ. ಅವರನ್ನೆಲ್ಲಾ ಸಮಾಧಾನ ಪಡಿಸಿ, ಸುಭದ್ರ ಸರ್ಕಾರವನ್ನು ಉಳಿಸಿಕೊಂಡು ಆಡಳಿತ ನಡೆಸುವ ಹೊಣೆ ಈಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಹೆಗಲ ಮೇಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications