ಇರಾನ್ ಪ್ರತಿಭಟನೆಯ ಭಯಾನಕತೆ ಬಿಚ್ಚಿಟ್ಟ ಭಾರತೀಯ ಪ್ರಜೆಗಳು, ಆಪರೇಷನ್ ಸ್ವದೇಶ್ ಸಕ್ಸಸ್! Operation Swades
ನವದೆಹಲಿ: ಭಾರತೀಯರು ಇರಾನ್ ನೆಲದಲ್ಲಿ ಸಿಲುಕಿ ಒದ್ದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಆ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ನೋಡ ನೋಡುತ್ತಲೇ ಇಡೀ ಇರಾನ್ ಈಗ ಧಗಧಗ ಅಂತಿದೆ. ಹೀಗಿದ್ದಾಗ 10,000ಕ್ಕೂ ಹೆಚ್ಚು ಭಾರತೀಯರ ಪರಿಸ್ಥಿತಿ ಇರಾನ್ ನೆಲದಲ್ಲಿ ಅತಂತ್ರವಾಗಿತ್ತು.
ಭಾರತ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇರಾನ್ ನೆಲದಿಂದ ಭಾರತೀಯರನ್ನು ಕರೆದುಕೊಂಡು ಬರಲು ಮಹತ್ವದ ಕಾರ್ಯಾಚರಣೆ, ಆಪರೇಷನ್ ಸ್ವದೇಶ್ ಅರಂಭ ಮಾಡಿತ್ತು. ಈ ಕಾರ್ಯಾಚರಣೆಯ ಭಾಗವಾಗಿ ಇರಾನ್ ರಾಜಧಾನಿ ತೆಹ್ರಾನ್ ಮೂಲಕ ಮೊದಲ ವಿಮಾನ ಭಾರತಕ್ಕೆ ಬಂದಿಳಿದಿದೆ. ಇದೇ ವೇಳೆ ಇರಾನ್ ಹಿಂಸಾಚಾರದ ಭಯಾನಕತೆ ಬಿಡಿಸಿಟ್ಟಿದ್ದಾರೆ ಭಾರತೀಯರು.

ಭಯಾನಕ ಅನುಭವ, ಘೋರ ಹಿಂಸಾಚಾರ
ಇರಾನ್ ಸರ್ವಾಧಿಕಾರಿ ಖಮೇನಿ ಅಧಿಕಾರ ಬಿಟ್ಟು ತೊಲಗಲಿ ಎಂದು ಇರಾನ್ ಪ್ರಜೆಗಳು ಹೋರಾಟ ಶುರು ಮಾಡಿದ್ದರು. ಆಡಳಿತ ವೈಫಲ್ಯದ ವಿರುದ್ಧ ಶುರುವಾದ ಪ್ರತಿಭಟನೆಗಳು ಘೋರ ರೂಪ ಪಡೆದು, ಈವರೆಗೂ ಸುಮಾರು 3,400ಕ್ಕೂ ಜನರನ್ನ ಬಲಿ ಪಡೆಯಲಾಗಿದೆ ಎಂಬ ಆರೋಪ ಇದೆ. ಹೀಗಿದ್ದಾಗ ಆ ದೇಶದ ವಿರುದ್ಧ ಅಮೆರಿಕ ಕೂಡ ಯುದ್ಧ ಸಾರಲು ಸನ್ನದ್ಧವಾಗಿದೆ.
ಇಷ್ಟೆಲ್ಲಾ ಪರಿಸ್ಥಿತಿಯು ಕೈಮೀರಿರುವಾಗ ಯಾವುದೇ ಕ್ಷಣದಲ್ಲಿ ಇರಾನ್ ನೆಲದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗಬಹುದು ಎಂಬ ಆತಂಕವು ಮನೆಮಾಡಿತ್ತು. ಅಲ್ಲದೆ ಪ್ರಮುಖವಾಗಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿ ಮಹತ್ವದ ಕ್ರಮ ಕೈಗೊಂಡಿತ್ತು. ಈಗ ಅದು ಫಲ ನೀಡುತ್ತಿದ್ದು, ಭಾರತೀಯರು ತವರಿಗೆ ಬರುತ್ತಿದ್ದಾರೆ. ಆಪರೇಷನ್ ಸ್ವದೇಶ್ ಕಾರ್ಯಾಚರಣೆಯ ಭಾಗವಾಗಿ ಮೊದಲ ವಿಮಾನದಲ್ಲಿ ದೆಹಲಿಗೆ ಬಂದಿಳಿದ ಭಾರತೀಯರು ಇರಾನ್ ನೆಲದಲ್ಲಿ ತಾವು ಅನುಭವಿಸಿದ ಸಂಕಷ್ಟಗಳ ಸರಮಾಲೆ ಬಿಡಿಸಿಟ್ಟಿದ್ದಾರೆ.
ಭಾರತೀಯರಿಗೆ ಎದುರಾಗಿದ್ದ ಸವಾಲುಗಳು ಇವು
ಇರಾನ್ ದೇಶದಲ್ಲಿ ಎಂಬಿಬಿಎಸ್ ಕಲಿಯಲು ಹೋಗಿದ್ದ ವಿದ್ಯಾರ್ಥಿನಿ ಒಬ್ಬರು ಅಲ್ಲಿನ ಪ್ರತಿಭಟನೆಯ ಕರಾಳತೆ ಬಿಚ್ಚಿಟ್ಟಿದ್ದಾರೆ. ಹೋರಾಟ ಆರಂಭವಾದ ನಂತರ ಇಂಟರ್ನೆಟ್ ಸ್ಥಗಿತವಾಗಿತ್ತು, ಆ ನಂತರ ನೋಡ ನೋಡುತ್ತಲೇ ಪ್ರತಿಭಟನೆ ಹಾಗೂ ಹಿಂಸಾಚಾರ ಇನ್ನಷ್ಟು ಹೆಚ್ಚಾಗಿತ್ತು. ಇದು ನಮಗೆ ಭಯ ತರಿಸಿತ್ತು ಎಂದಿದ್ದಾರೆ.
ಹಾಗೆಯೇ ಒಂದು ತಿಂಗಳಿನಿಂದ ಇರಾನ್ನಲ್ಲಿದ್ದ ಮತ್ತೊಬ್ಬ ಭಾರತೀಯ ಪ್ರಜೆ ಕೂಡ ಅಲ್ಲಿನ ಕರಾಳ ದಿನಗಳನ್ನ ಮೆಲುಕು ಹಾಕಿದ್ದಾರೆ. ನಾವು ಹೊರ ಹೋದಾಗ ಪ್ರತಿಭಟನೆಯನ್ನು ನಡೆಸುತ್ತಿದ್ದವರು ಕಾರಿನ ಎದುರು ಬರುತ್ತಿದ್ದರು, ಹೀಗಾಗಿ ನಮಗೆ ಆತಂಕ ಎದುರಾಗಿತ್ತು. ಈ ಬಗ್ಗೆ ನಮ್ಮ ಕುಟುಂಬಗಳಿಗೆ ಮಾಹಿತಿ ನೀಡುವುದಕ್ಕೆ ಕೂಡ ಸಾಧ್ಯ ಆಗದ ಪರಿಸ್ಥಿತಿ ನಿರ್ಮಾಣವಾಗಿ ಭಯ ಇನ್ನಷ್ಟು ಹೆಚ್ಚಾಗಿತ್ತು ಎಂದಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications