ಚುನಾವಣಾ ಸಮೀಕ್ಷೆ : ಕೇರಳದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ 1 ಸ್ಥಾನ
ಬೆಂಗಳೂರು, ಏಪ್ರಿಲ್ 02 : ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಕೇವಲ ಒಂದು ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ. 86 ಸ್ಥಾನಗಳನ್ನು ಪಡೆಯುವ ಎಲ್ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್) ಅಧಿಕಾರಕ್ಕೆ ಬರಲಿದೆ ಎನ್ನುತ್ತಿದೆ ವರದಿ.
140 ಸ್ಥಾನಗಳನ್ನು ಹೊಂದಿರುವ ಕೇರಳ ವಿಧಾನಸಭೆಗೆ ಮೇ 16ರಂದು ಚುನಾವಣೆ ನಡೆಯಲಿದೆ. ಟೈಮ್ಸ್ ನೌ ಮತ್ತು ಸಿ ವೋಟರ್ ಜಂಟಿಯಾಗಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿವೆ. ಕೇರಳದಲ್ಲಿರುವ ಅಧಿಕಾರದಲ್ಲಿರುವ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) 53 ಸ್ಥಾನದಲ್ಲಿ ಜಯಗಳಿಸಬಹುದು ಎಂದು ವರದಿ ಹೇಳಿದೆ. [ಐದು ರಾಜ್ಯಗಳ ಅಸೆಂಬ್ಲಿ ಚುನಾವಣೆ ದಿನಾಂಕ ಘೋಷಣೆ]

ಈಗಾಗಲೇ ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಮಾರ್ಚ್ ತಿಂಗಳಿನಲ್ಲಿ ಟೈಮ್ಸ್ ನೌ ಮತ್ತು ಸಿ ವೋಟರ್ ಜಂಟಿಯಾಗಿ ಸಮೀಕ್ಷೆ ನಡೆಸಿವೆ. ಎಲ್ಡಿಎಫ್ ಮತಗಳಿಕೆ ಪ್ರಮಾಣ 0.2ರಿಂದ 43.6ರಷ್ಟು ಹೆಚ್ಚಾಗಲಿದೆ. [ಸಿವೋಟರ್ ಸಮೀಕ್ಷೆ, ತಮಿಳುನಾಡಿನಲ್ಲಿ ಮತ್ತೆ 'ಅಮ್ಮ' ದರ್ಬಾರ್]
ರಾಜ್ಯದಲ್ಲಿ ಅಧಿಕಾರದಲ್ಲಿರುವ ಯುಡಿಎಫ್ ಮತಗಳಿಕೆ ಪ್ರಮಾಣ ಇಳಿಕೆಯಾಗಲಿದೆ. 2011ರಲ್ಲಿ 45.8 ರಷ್ಟು ಮತ ಪಡೆದಿದ್ದು ಯುಡಿಎಫ್ 2016ರಲ್ಲಿ 41.3ರಷ್ಟು ಮತ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ. ಬಿಜೆಪಿ ಮತ್ತು ಭಾರತ್ ಧರ್ಮ ಜನ ಸೇನಾ (ಬಿಡಿಜೆಎಸ್) ಮೈತ್ರಿಕೂಟದ ಮತಗಳಿಕೆ 6.1ರಿಂದ 10ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. [ಪಂಚರಾಜ್ಯಗಳ ಚುನಾವಣೆ: ಹೊರಬಿದ್ದ ಮತ್ತೊಂದು ಸಮೀಕ್ಷೆ]
ಬಿಜೆಪಿ ಮೈತ್ರಿಕೂಟ ವಿಧಾನಸಭೆ ಚುನಾವಣೆಯಲ್ಲಿ ಕೇವಲ 1 ಸ್ಥಾನದಲ್ಲಿ ಜಯಗಳಿಸಲಿದೆ. ತಿರುವಂತಪುರಂನಲ್ಲಿನ ನೀಮೊಮ್ ಕ್ಷೇತ್ರದಿಂದ ಸ್ಪರ್ಧಿಸುವ ಬಿಜೆಪಿಯ ರಾಜಗೋಪಾಲ್ ಅವರು ಮಾತ್ರ ಜಯಗಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications