ಡಿಸೆಂಬರ್ನಲ್ಲಿ 4 ರಾಜ್ಯಗಳ ವಿಧಾನಸಭಾ ಚುನಾವಣೆ: 'ಕೈ' ಹಿಡಿದ ಸಮೀಕ್ಷೆಗಳು- ಲೋಕಸಭೆ ಚುನಾವಣೆಗೂ ಮುನ್ನ ಬದಲಾಗಲಿದೆಯಾ ಹವಾ?
ಈ ವರ್ಷದ ಕೊನೆಯಲ್ಲಿ ನಾಲ್ಕು ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಡ ರಾಜ್ಯಗಳು ಚುನಾವಣೆ ಎದುರಿಸಲಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ವಿಧಾನಸಭೆ ಚುನಾವಣೆಗಳನ್ನು ನೋಡಲಾಗುತ್ತಿದೆ. ಈ ವಿಧಾನಸಭೆ ಚುನಾವಣೆಯ ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇವೆ. ಇದು ಬಿಜೆಪಿಗೆ ಅಗ್ನಿಪರೀಕ್ಷೆಯೆಂದೇ ಹೇಳಲಾಗುತ್ತಿದೆ.
ಕರ್ನಾಟಕ ಚುನಾವಣೆಯೇ ಮುನ್ನುಡಿ
ಈ ವರ್ಷದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ಚುನಾವಣೆ ಫಲಿತಾಂಶಗಳು ದೇಶದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಕರ್ನಾಟಕದ ಫಲಿತಾಂಶಗಳು ಆಡಳಿತಾರೂಢ ಬಿಜೆಪಿಗೆ ಆಘಾತ ನೀಡುವ ಮೂಲಕ ಕಾಂಗ್ರೆಸ್ಗೆ ಹೊಸ ಹುರುಪನ್ನು ತಂದಿದೆ. ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಮುಂದಾಗಿದ್ದ ಬಿಜೆಪಿಗೆ ಕರ್ನಾಟಕದಲ್ಲಿ ಹಿನ್ನೆಡೆಯಾಗಿದೆ.

ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಆರೋಪಗಳು, ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳು ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿವೆ ಎಂದು ಹೇಳಲಾಗುತ್ತಿದೆ. ಇವೆಲ್ಲವೂ ಕಾರಣವಾಗಿದ್ದರೂ ಬಿಜೆಪಿಯೊಳಗಿನ ಆಂತರಿಕ ಕಲಹವೂ ಪಕ್ಷದ ಸೋಲಿಗೆ ಪ್ರಮುಖ ಕಾರಣವೆಂದು ಹೇಳಬಹುದು. ಒಟ್ಟಿನಲ್ಲಿ, ಕರ್ನಾಟಕದಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವುದು ಹೊಸ ರಾಜಕೀಯ ಬೆಳವಣಿಗೆಗೆ ಮುನ್ನುಡಿಯನ್ನಂತೂ ಬರೆದಿದೆ.
ತೆಲಂಗಾಣದಲ್ಲಿ ಆಡಳಿತ ವಿರೋಧಿ ಅಲೆ
ತೆಲಂಗಾಣದಲ್ಲಿ ಸತತ ಎರಡು ಬಾರಿ ಸರ್ಕಾರ ರಚಿಸಿರುವ ಚಂದ್ರಶೇಖರ್ ರಾವ್ ಅವರ ಬಿಆರ್ಎಸ್ ಪಕ್ಷವು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ತೆಲಂಗಾಣ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಅವರ ಜನಪ್ರಿಯತೆ ದಿನೇದಿನೇ ಹೆಚ್ಚಾಗುತ್ತಿದೆ.

ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದೆ. ಕರ್ನಾಟಕದ ಫಲಿತಾಂಶಗಳು ತೆಲಂಗಾಣದ ಮೇಲೆ ಪರಿಣಾಮ ಉಂಟು ಮಾಡುವ ಸಾಧ್ಯತೆಗಳಿವೆ. ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ ಬಿಆರ್ಎಸ್ ಹಾಗೂ ಬಿಜೆಪಿ ನಾಯಕರು 'ಕೈ' ಹಿಡಿಯುತ್ತಿರುವುದು ಕಾಂಗ್ರೆಸ್ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಹೇಳಬಹುದು.
ರಾಜಸ್ಥಾನದ ಬಿಜೆಪಿಯಲ್ಲಿ ಆಂತರಿಕ ಕಲಹ
ರಾಜಸ್ಥಾನದ ಬಿಜೆಪಿಯಲ್ಲಿ ಆಂತರಿಕ ಕಲಹ ಜೋರಾಗಿ ಸದ್ದು ಮಾಡುತ್ತಿದೆ. ಮಾಜಿ ಸಿಎಂ ವಸುಂದರಾ ರಾಜೇ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ. ಇವರಿಬ್ಬರ ನಡುವಿನ ಅಸಮಾಧಾನ ಬಹಿರಂಗ ವೇದಿಕೆಗಳಲ್ಲೇ ವ್ಯಕ್ತವಾಗಿರುವುದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ.
ರಾಜಸ್ಥಾನದ ಆಡಳಿತರೂಢ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಶಮನ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಕರ್ನಾಟಕದಂತೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಮುಂದಾಗಿದೆ. ಪ್ರಮುಖವಾಗಿ ಕಾಂಗ್ರೆಸ್ ಗ್ಯಾರಂಟಿಗಳು ಇಲ್ಲಿಯೂ ಪ್ರಭಾವ ಬೀರಬಹುದು ಎಂದು ಹೇಳಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ಚೌಹಾಣ್ಗಿಲ್ಲ ಕಿಮ್ಮತ್ತು
ಎರಡು ದಶಕಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಜನಪ್ರಿಯತೆ ಕುಗ್ಗುತ್ತಿರುವುದು ಕಂಡುಬಂದಿದೆ. ಇಲ್ಲಿ ಬಿಜೆಪಿ ವಿರೋಧಿ ಅಲೆ ಇರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ರನ್ನು ಬಿಜೆಪಿ ಹೈಕಮಾಂಡ್ ಮುನ್ನೆಲೆಗೆ ತರದೇ ಪ್ರಧಾನಿ ಮೋದಿ ಮೂಲಕ ಪ್ರಚಾರ ಮಾಡುತ್ತಿದೆ. ಕರ್ನಾಟಕದಂತೆಯೇ ಇಲ್ಲಿಯೂ ಮೋದಿ ಹವಾ ಕೆಲಸ ಮಾಡಲ್ಲವೆಂದು ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳ ಪ್ರಕಾರ ಇಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ.
ಇನ್ನು ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷವು ಕರ್ನಾಟಕದಂತೆಯೇ ಇಲ್ಲಿಯೂ ಗ್ಯಾರಂಟಿಗಳನ್ನು ಘೋಷಿಸಿದೆ. ಹಲವು ಹಿಂದುಳಿದ ವರ್ಗಗಳ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಬಳಗದಲ್ಲಿ ಗುರುತಿಸಿಕೊಂಡಿರುವ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ಗೆ ವಾಪಸ್ಸಾಗುತ್ತಿದ್ದಾರೆ. ಇದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ.
ಛತ್ತೀಸ್ಗಢದಲ್ಲಿ ಒನ್-ಸೈಡೆಡ್ ಗೇಮ್
ಛತ್ತೀಸ್ಗಢದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿವೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಆಡಳಿತಕ್ಕೆ ಜನರು ಮನ್ನಣೆ ನೀಡಿದ್ದಾರೆಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ಈ ರಾಜ್ಯದಲ್ಲಿ ಮಹಿಳೆಯರು ಹಾಗೂ ರೈತರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಬಿಜೆಪಿಗೆ ಪ್ರಭಾವಿ ಸ್ಥಳೀಯ ನಾಯಕರ ಕೊರತೆ ಇದೆ. ಇಲ್ಲಿಯೂ ಮೋದಿ ಅವರನ್ನೇ ಬಿಜೆಪಿ ನೆಚ್ಚಿಕೊಂಡಿದೆ. ಇದು ಕಾಂಗ್ರೆಸ್ಗೆ ಲಾಭ ತಂದುಕೊಡಲಿದೆ ಎಂದು ಹೇಳಲಾಗುತ್ತಿದೆ.
ನಾಲ್ಕು ರಾಜ್ಯಗಳ ಫಲಿತಾಂಶ: ಲೋಕಸಭಾ ಚುನಾವಣೆ ಮೇಲೆ ಪ್ರಭಾವ
ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನವೇ ಈ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಸಮೀಕ್ಷೆಯಂತೆ ಈ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಬಹುಮತ ದೊರೆತರೆ ದೇಶದಲ್ಲಿ ಹೊಸ ಅಲೆ ಏಳುವ ನಿರೀಕ್ಷೆ ಇದೆ. ಇದು ಬಿಜೆಪಿಗೆ ಸಂಕಷ್ಟವನ್ನು ತಂದೊಡ್ಡಲೂಬಹುದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications