ಭಾರತ-ಚೀನಾ ಗಡಿ ಕುರಿತು ಚರ್ಚೆ ನಡೆಸುವಂತೆ ಪಟ್ಟು: ಸಂಸತ್ನಿಂದ ಹೊರನಡೆದ ಪ್ರತಿಪಕ್ಷ ನಾಯಕರು
ನವದೆಹಲಿ, ಡಿಸೆಂಬರ್ 21: ಚೀನಾ ಜತೆಗಿನ ಗಡಿ ಸಮಸ್ಯೆ ಕುರಿತು ಚರ್ಚೆ ನಡೆಸುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಲೋಕಸಭೆಯಿಂದ ಬುಧವಾರ ಹೊರನಡೆದವು.
ಶೂನ್ಯವೇಳೆಗೆ ಸದನ ಸಮಾವೇಶಗೊಂಡ ತಕ್ಷಣ ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸದಸ್ಯರು ಸಭಾತ್ಯಾಗ ಮಾಡಿದರು.
ನಂತರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಜನತಾದಳ (ಸಂಯುಕ್ತ) ಸಂಸದರು ಸಭಾತ್ಯಾಗ ಮಾಡಿದರು.

ಭಾರತ-ಚೀನಾ ವಿಷಯದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಕಾಂಗ್ರೆಸ್ನ ಸಭಾನಾಯಕ ಅಧೀರ್ ರಂಜನ್ ಚೌಧರಿ ಅವರು ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದರು. ಇದು ಪ್ರತಿಪಕ್ಷಗಳ ಹಕ್ಕು ಎಂದು ಪ್ರತಿಪಾದಿಸಿದರು.
'ನಾವು ಇಂದು ಬೆಳಿಗ್ಗೆಯಿಂದ ಚೀನಾ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿದ್ದೇವೆ. ಟಿವಿಯಲ್ಲಿ, ಹೊರಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಆದರೆ, ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ' ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದರು.
'ಪ್ರತಿಪಕ್ಷಗಳಿಗೆ ಚರ್ಚೆಗೆ ಅವಕಾಶ ಕೊಡಿ. ಇದು ನಮ್ಮ ಹಕ್ಕು' ಎಂದು ಹೇಳಿದರು.
ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಕೂಡ ಚರ್ಚೆಗೆ ಒತ್ತಾಯಿಸಿದರು. ನಂತರ ಸದನವು ಡ್ರಗ್ಸ್ ವಿಚಾರದ ಕುರಿತು ಚರ್ಚೆ ಆರಂಭಿಸಿದರು.
ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಚೀನಾ ಹಾಗೂ ಭಾರತ ಸೈನಿಕರ ನಡುವೆ ಹೊಡೆದಾಟಗಳಾಗಿವೆ. ಇದು ಗಡಿಯಲ್ಲಿ ಪ್ರಕ್ಷುಬ್ದ ವಾತಾವರಣವನ್ನು ನಿರ್ಮಿಸಿದೆ.

ಟಿಬೆಟಿಯನ್ ವಾಯು ನೆಲೆಯಲ್ಲಿ, ಭಾರತಕ್ಕೆ ಮುಖ ಮಾಡಿ ಚೀನಾದ ಅತ್ಯಾಧುನಿಕ ಕ್ಷಿಪಣಿ ಹಾಗೂ ಡ್ರೋನ್ಗಳನ್ನು ನಿರ್ಮಿಸಿದೆ. ಅರುಣಾಚಲ ಗಡಿ ಭಾಗಗಳಲ್ಲಿ ಗ್ರಾಮಗಳನ್ನು ನಿರ್ಮಿಸಿದೆ. ಸೇತುವೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಚೀನಾ ಒದಗಿಸಿದೆ. ಇದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳ ನಾಯಕರು ಈ ಕುರಿತು ಚರ್ಚೆ ನಡೆಸಬೇಕೆಂದು ಕಳೆದ ವಾರವೇ ಒತ್ತಾಯಿಸಿದ್ದಾರೆ. ಚೀನಾ ಉಪಟಳದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾತನಾಡಬೇಕೆಂದು ಮನವಿ ಮಾಡಿದ್ದಾರೆ.
ಭಾರತ್ ಜೋಡೊ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
'ಚೀನಾ ದೇಶವು ಯುದ್ಧಕ್ಕೆ ಸಿದ್ದತೆ ನಡೆಸಿದೆ. ಆದರೆ, ನಮ್ಮ ಸರ್ಕಾರ ಮಾತ್ರ ನಿದ್ರೆಗೆ ಜಾರಿದೆ' ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಪ್ರಸ್ತುತ ರಾಜಸ್ಥಾನದಲ್ಲಿ ಭಾರತ್ ಜೋಡೊ ಯಾತ್ರೆ ಕೈಗೊಂಡಿದ್ದಾರೆ. ಡಿಸೆಂಬರ್ 24ರಂದು ಭಾರತ್ ಜೋಡೊ ಯಾತ್ರೆಯು ರಾಷ್ಟ್ರ ರಾಜಧಾನಿ ದೆಹಲಿಯನ್ನು ತಲುಪಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications