Senthil Balaji: ಕೇಂದ್ರದಿಂದ ತನಿಖಾ ಸಂಸ್ಥೆಗಳ 'ದುರುಪಯೋಗ' ಎಂದು ವಿರೋಧ ಪಕ್ಷದ ನಾಯಕರ ಕಿಡಿ

ಚೆನ್ನೈ, ಜೂನ್.14: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ತಮಿಳುನಾಡಿನ ವಿದ್ಯುತ್ ಸಚಿವ ವಿ.ಸೆಂಥಿಲ್ ಬಾಲಾಜಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ.

ವಿ.ಸೆಂಥಿಲ್ ಬಾಲಾಜಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿವು ಕೇಂದ್ರ ಸರ್ಕಾರದಿಂದ ರಾಜಕೀಯ ವಿರೋಧಿಗಳ ವಿರುದ್ಧ ನಡೆಸುತ್ತಿರುವ ತನಿಖಾ ಸಂಸ್ಥೆಯ ದುರ್ಬಳಕೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇನ್ನು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ವಿದ್ಯುತ್ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.

Opposition condemned ED raids on Tamil Nadu Minister V. Senthil balaji

"ವಿರೋಧ ಪಕ್ಷಗಳ ಆಡಳಿತದಲ್ಲಿರುವ ಸರ್ಕಾರದ ಮಂತ್ರಿಗಳ ವಿರುದ್ಧ ಇಡಿ ನಿರಂತರವಾಗಿ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ಸೆಂಥಿಲ್ ಬಾಲಾಜಿ ಅವರ ಕಚೇರಿಯ ಮೇಲೆ ದಾಳಿ ನಡೆಸುವುದರೊಂದಿಗೆ, ಇಡಿ ಈಗ ದಕ್ಷಿಣದ ರಾಜ್ಯಗಳಿಗೆ ಪ್ರಜಾಸತ್ತಾತ್ಮಕವಲ್ಲದ ಕೇಂದ್ರ ಸರ್ಕಾರದ ವಿರುದ್ಧದ ಧ್ವನಿಯನ್ನು ಹತ್ತಿಕ್ಕುವ ದುಷ್ಟ ಉದ್ದೇಶ ಹೊಂದಿದೆ" ಎಂದು ಶರದ್ ಪವಾರ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಶೋಧನೆ ನಡೆಸಿದ ಹಲವಾರು ಸ್ಥಳಗಳಲ್ಲಿ ತಮಿಳುನಾಡು ಸೆಕ್ರೆಟರಿಯೇಟ್‌ನಲ್ಲಿರುವ ಸಚಿವ ಸೆಂಥಿಲ್‌ಬಾಲಾಜಿ ಅವರ ಕಚೇರಿಯು ಸೇರಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರೀಯ ಸಂಸ್ಥೆಗಳ ದುರುಪಯೋಗವನ್ನು "ಬಿಜೆಪಿಯ ಹತಾಶ ಕೃತ್ಯಗಳು" ಎಂದು ಟೀಕರಿಸಿದ್ದಾರೆ. "ಇಂದು ಡಿಎಂಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ರಾಜಕೀಯ ಸೇಡಿನ ಕ್ರಮವನ್ನು ನಾನು ಖಂಡಿಸುತ್ತೇನೆ. ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಮುಂದುವರಿದಿದೆ. ತಮಿಳುನಾಡಿನಲ್ಲಿ ಅಬಕಾರಿ ಸಚಿವರ ರಾಜ್ಯ ಸಚಿವಾಲಯದ ಕಚೇರಿ ಮತ್ತು ಅವರ ಅಧಿಕೃತ ನಿವಾಸದ ಮೇಲೆ ಇಡಿ ದಾಳಿಗಳು ಸ್ವೀಕಾರಾರ್ಹವಲ್ಲ. ಇದು ಬಿಜೆಪಿಯ ಹತಾಶ ಕೃತ್ಯಗಳು'' ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸೇಡಿನಿಂದ ಕುರುಡಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ಪ್ರತಿಪಕ್ಷಗಳಿಗೆ ಕಿರುಕುಳ ನೀಡಲು ಮತ್ತು ಬೆದರಿಸಲು ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ತಮಿಳುನಾಡಿನ ವಿದ್ಯುತ್ ಸಚಿವ ತಿರುವಿ ಸೆಂಥಿಲ್ ಬಾಲಾಜಿ ವಿರುದ್ಧ ಇಡಿ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ದ್ವೇಷದಿಂದ ಕುರುಡಾಗಿರುವ ಬಿಜೆಪಿ ನಮ್ಮ ಪ್ರಜಾಪ್ರಭುತ್ವಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

"ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಇಡಿಯನ್ನು "ಅಸ್ತ್ರ"ವಾಗಿ ಬಳಸುತ್ತಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ. ಟ್ವಿಟರ್‌ನಲ್ಲಿ, "ತಮಿಳುನಾಡು ಸಚಿವ ತಿರು ಸೆಂಥಿಲ್‌ ಬಾಲಾಜಿ ಅವರ ಚೆನ್ನೈ ರಾಜ್ಯ ಸಚಿವಾಲಯದ ಕಚೇರಿಯಲ್ಲಿ ಇಡಿ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ" ಎಂದಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚೆನ್ನೈನಲ್ಲಿರುವ ಸಚಿವ ವಿ.ಸೆಂಥಿಲ್ ಬಾಲಾಜಿ ಮನೆಯಲ್ಲಿ 18 ಗಂಟೆಗಳ ಕಾಲ ವಿಚಾರಣೆಯ ನಂತರ, ಜೂನ್ 14 ರಂದು ಮಧ್ಯರಾತ್ರಿ 2 ಗಂಟೆಗೆ ಸೆಂಥಿಲ್‌ ಬಾಲಾಜಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಚೆನ್ನೈನ ಓಮಂದೂರಾರ್ ಎಸ್ಟೇಟ್‌ನಲ್ಲಿರುವ ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್, ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಮತ್ತು ಪಿಡಬ್ಲ್ಯೂಡಿ ಸಚಿವ ಇ.ವಿ. ವೇಲು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಸಚಿವ ಸೇಕರ್ ಬಾಬು ಅವರು ಸೆಂಥಿಲ್‌ ಬಾಲಾಜಿ ಪ್ರಜ್ಞಾಹೀನರಾಗಿದ್ದಾರೆ ಮತ್ತು ಐಸಿಯುನಲ್ಲಿ ನಿಗಾದಲ್ಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಡಿಎಂಕೆ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಎನ್.ಆರ್. ಎಲಂಗೋ ಅವರನ್ನು ಬಂಧಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಂಥಿಲ್‌ ಬಾಲಾಜಿ ಅವರ ಕುಟುಂಬ ಸದಸ್ಯರಿಗೆ ಅಥವಾ ಯಾರಿಗೂ ತಿಳಿಸಿಲ್ಲ ಎಂದು ಹೇಳಿದ್ದಾರೆ. ಒಮಂದೂರಾರ್ ಸರ್ಕಾರಿ ಎಸ್ಟೇಟ್‌ನಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಕೊಡಿಸಲು ಲಂಚ ಪಡೆಯಲಾಗಿದೆ ಎಂದು ಸೆಂಥಿಲ್‌ ಬಾಲಾಜಿ ಅವರ ವಿರುದ್ಧ ಆರೋಪಿಸಲಾಗಿದೆ. ಕಳೆದ ತಿಂಗಳು, ಸುಪ್ರೀಂ ಕೋರ್ಟ್ ತನಿಖೆಗೆ ಸಮ್ಮತಿ ನೀಡಿದ್ದು, "ತನಿಖಾಧಿಕಾರಿಯು ಎಲ್ಲಾ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಯನ್ನು ಮುಂದುವರಿಸಬೇಕು" ಎಂದು ಹೇಳಿತ್ತು. ಜೂನ್ 13 ರಂದು, ಇಡಿ ರಾಜ್ಯ ಸಚಿವಾಲಯದ ಸೆಂಥಿಲ್ ಬಾಲಾಜಿ ಅವರ ಅಧಿಕೃತ ಚೇಂಬರ್ ಮತ್ತು ಚೆನ್ನೈನಲ್ಲಿರುವ ಬಂಗಲೆ ಮತ್ತು ಕರೂರ್ ಮತ್ತು ಕೊಯಮತ್ತೂರಿನಲ್ಲಿ ಅವರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+