INDIA ಮೈತ್ರಿಕೂಟಕ್ಕೆ 10 ಸ್ಥಾನಗಳಲ್ಲಿ ಭರ್ಜರಿ ಜಯ: ಬಿಜೆಪಿಗೆ 2 ಸ್ಥಾನಕ್ಕೆ ತೃಪ್ತಿ
ಕೇಂದ್ರ ಚುನಾವಣೆಯ ಫಲಿತಾಂಶ ಬಂದ ಮೇಲೆ ದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟಗಳು ಭರ್ಜರಿ ಸಾಧನೆ ಮಾಡಿವೆ. ದೇಶದಲ್ಲಿ ನಡೆದ ಒಟ್ಟು 13 ಉಪಚುನಾವಣೆಗಳಲ್ಲಿ ಇಂಡಿಯಾ ಮೈತ್ರಿ ಕೂಟ 13ರಲ್ಲಿ 10 ಸ್ಥಾನಗಳನ್ನು ಗೆದ್ದು ಬೀಗಿದೆ. ಇನ್ನು ದಾಖಲೆಯ ಮೂರನೇ ಬಾರಿಗೆ ಅಧಿಕಾರ ಗದ್ದುಗೆ ಏರಿದ ಬಿಜೆಪಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.
ಜಲಂಧರ್ ಪಶ್ಚಿಮಕ್ಕೆ ನಡೆದ ಚುನಾವಣೆಯಲ್ಲಿ ಆಪ್ ಪಕ್ಷದ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎಎಪಿ ಪಕ್ಷದ ಮೋಹಿಂದ್ ಭಾಗತ್ 23 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಲ್ಲ ನಾಲ್ಕೂ ಸ್ಥಾನಗಳನ್ನು ಗೆದ್ದು ಬೀಗಿದೆ.

ಸಿಎಂ ಪತ್ನಿಗೆ ಜಯ
ಹಿಮಾಚಲ್ ಪ್ರದೇಶದಲ್ಲಿ ನಡದ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯ ಮಂತ್ರಿಯ ಪತ್ನಿ ಕಮಲೇಶ್ ಠಾಕೂರ್ ಡೆಹ್ರಾ ಕ್ಷೇತ್ರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ನಾಲಗರ್ದಲ್ಲಿ ಜಯ ದಾಖಲಿಸಿದರೆ, ಬಿಜೆಪಿ ಹಮೀರ್ಪುರ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಚುನಾವಣೆಯಲ್ಲಿ ಪತ್ನಿಯ ಗೆಲುವಿನ ಬಳಿಕ ಮಾತನಡಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖು, ಸರ್ಕಾರ ಬೀಳಿಸುವ ಸಂಚು ಹೂಡಿದವರಿಗೆ ಮತದಾರ ಉತ್ತಮ ಪ್ರತಿಕ್ರಿಯೆ ನೀಡಿದ್ದಾನೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 2022ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 40 ಸ್ಥಾನಗಳನ್ನು ಗೆದ್ದಿತ್ತು. ಈಗ ಪಕ್ಷ ಮತ್ತಷ್ಟು ಜನರಿಗೆ ಹತ್ತಿರವಾಗಿದೆ ಎಂದಿದ್ದಾರೆ.

ಹಿಮಾಚಲ ಪ್ರದೇಶದ ಜನ ಜಾಗ್ರುತರಾಗಿದ್ದಾರೆ. ಯಾವುದು ಸರಿ ಹಾಗೂ ಯಾವುದು ತಪ್ಪು ಎನ್ನುವುದು ಅವರಿಗೆ ಅರ್ಥವಾಗಿದೆ. ಮೂವರು ಪಕ್ಷೇತರ ಶಾಸಕರು ರಾಜೀನಾಮೆ ನೀಡುವ ಯಾವುದೇ ಕಾರಣವಿರಲಿಲ್ಲ. ಅವರು ಕೇವಲ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಹುದಿತ್ತು, ಈಗ ಅವರು ತಮ್ಮ ಪಾಠವನ್ನು ಕಲಿತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಡಿಎಂಕೆ ಅಭ್ಯರ್ಥಿಗೆ ಜಯ
ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಿಂದ ಡಿಎಂಕೆಯ ಅಣ್ಣಿಯುರ್ ಶಿವ ಅವರು ಸುಮಾರು 60,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಉತ್ತರಾಖಂಡದಲ್ಲಿ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಗೆದ್ದಿದ್ದರೆ, ಮಧ್ಯಪ್ರದೇಶದ ಅಮರವಾರ್ ಕ್ಷೇತ್ರವನ್ನು ಬಿಜೆಪಿಯ ಕಮಲೇಶ್ ಪ್ರತಾಪ್ ಶಾಹಿ ಗೆದ್ದಿದ್ದಾರೆ. ಬಿಹಾರದ ಪುರ್ನಿಯಾದಲ್ಲಿ ರುಪೌಲಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶಂಕರ್ ಸಿಂಗ್ ಅವರು ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications