ತನಿಖಾ ಸಂಸ್ಥೆಗಳ ದುರುಪಯೋಗ: ಕೇಜ್ರಿವಾಲ್, ಮಮತಾ ಸೇರಿದಂತೆ 9 ವಿಪಕ್ಷಗಳ ನಾಯಕರಿಂದ ಪ್ರಧಾನಿ ಮೋದಿಗೆ ಪತ್ರ
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಎಂಟು ಗಂಟೆಗಳ ವಿಚಾರಣೆ ನಡೆಸಿದ್ದ ಕೇಂದ್ರೀಯ ತನಿಖಾ ದಳ ಫೆಬ್ರವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತ್ತು
ನವದೆಹಲಿ, ಮಾರ್ಚ್ 05: ದೆಹಲಿ ಉಪಮುಖ್ಯಮಂತ್ರಿ ಮನೀರ್ಶ ಸಿಸೋಡಿಯಾ ಬಂಧನ ಖಂಡಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿ, ಶಿವಸೇನೆಯ (ಯುಬಿಟಿ) ಉದ್ಧವ್ ಠಾಕ್ರೆ, ಎನ್ಸಿಪಿಯ ಶರದ್ ಪವಾರ್ ಮತ್ತು ಬಿಆರ್ಎಸ್ನ ಕೆ ಚಂದ್ರಶೇಖರ ರಾವ್ ಸೇರಿದಂತೆ ಒಂಬತ್ತು ಪ್ರತಿಪಕ್ಷ ನಾಯಕರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ದೆಹಲಿ ಅಬಕಾರಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಈ ಹಿನ್ನೆಲೆ ಪತ್ರ ಬರೆದಿರುವ ವಿಪಕ್ಷಗಳು, ಕೇಂದ್ರೀಯ ಸಂಸ್ಥೆಗಳ ದುರುಪಯೋಗವಾಗುತ್ತಿವೆ ಎಂದು ಟೀಕಿಸಿವೆ. ಜೊತೆಗೆ ಅದಾನಿ ಗ್ರೂಪ್ನ "ಹಣಕಾಸಿನ ಅಕ್ರಮಗಳ" ಬಗ್ಗೆ ಏಕೆ ತನಿಖೆ ಮಾಡಿಲ್ಲ ಎಂದು ಕಿಡಿಕಾರಿವೆ.

ದೆಹಲಿಯ ಶಾಲಾ ಶಿಕ್ಷಣವನ್ನು ಉತ್ತಮ ಸ್ಥಿತಿಗೆ ತಂದು ಮನೀಶ್ ಸಿಸೋಡಿಯಾ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಅವರ ಬಂಧನವನ್ನು ವಿಶ್ವಾದ್ಯಂತ ರಾಜಕೀಯ ದ್ವೇಷಕ್ಕೆ ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದೆ. ಭಾರತದ ಪ್ರಜಾಪ್ರಭುತ್ವದ ಮೌಲ್ಯಗಳು ನಿರಂಕುಶ ಬಿಜೆಪಿ ಆಡಳಿತದಲ್ಲಿ ಅಪಾಯದಲ್ಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮಾಜಿ ಟಿಎಂಸಿ ನಾಯಕ ಸುವೇಂದು ಅಧಿಕಾರಿ ಅವರ ಉದಾಹರಣೆಗಳನ್ನು ಉಲ್ಲೇಖಿಸಿ, ವಿವಿಧ ವಿರೋಧ ಪಕ್ಷಗಳ ನಾಯಕರು ಬಿಜೆಪಿಗೆ ಸೇರುವವರ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳ ಪಾತ್ರವಿದೆ ಎಂದು ಆರೋಪಿಸಿವೆ.
"ಈ ಏಜೆನ್ಸಿಗಳು ತಮ್ಮ ಆದ್ಯತೆಗಳನ್ನು ತಪ್ಪಾಗಿ ಇರಿಸಿಕೊಂಡಿರುವುದು ಸ್ಪಷ್ಟವಾಗಿದೆ. ಅಂತತಾರಾಷ್ಟ್ರೀಯ ವಿಧಿವಿಜ್ಞಾನ ಹಣಕಾಸು ಸಂಶೋಧನಾ ವರದಿಯ ಪ್ರಕಟಣೆಯ ನಂತರ, ಎಸ್ಬಿಐ ಮತ್ತು ಎಲ್ಐಸಿ ಒಂದು ನಿರ್ದಿಷ್ಟ ಸಂಸ್ಥೆ ಜೊತೆಗೆ ತೋಡಗಿಸಿಕೊಂಡ ಕಾರಣ ತಮ್ಮ ಷೇರುಗಳ ಮಾರುಕಟ್ಟೆ ಬಂಡವಾಳದಲ್ಲಿ 78,000 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿವೆ ಎಂದು ವರದಿಯಾಗಿದೆ. ಸಾರ್ವಜನಿಕರ ಹಣವನ್ನು ಪಣಕ್ಕಿಟ್ಟಿದ್ದರೂ ಸಂಸ್ಥೆಯ ಹಣಕಾಸು ಅವ್ಯವಹಾರಗಳ ತನಿಖೆಗೆ ಕೇಂದ್ರ ಏಜೆನ್ಸಿಗಳನ್ನು ಏಕೆ ನೇಮಿಸಿಲ್ಲ?" ಎಂದು ಅದಾನಿ ಸಮೂಹವನ್ನು ಉಲ್ಲೇಖೀಸದೆ ಪ್ರಶ್ನೆ ಮಾಡಲಾಗಿದೆ.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಎಂಟು ಗಂಟೆಗಳ ವಿಚಾರಣೆ ನಡೆಸಿದ್ದ ಕೇಂದ್ರೀಯ ತನಿಖಾ ದಳ ಫೆಬ್ರವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಶನಿವಾರ, 5 ದಿನಗಳ ಬಂಧನ ಪೂರ್ಣಗೊಂಡ ನಂತರ ದೆಹಲಿ ನ್ಯಾಯಾಲಯವು ಅವರ ಸಿಬಿಐ ಕಸ್ಟಡಿಯನ್ನು ಎರಡು ದಿನಗಳವರೆಗೆ ವಿಸ್ತರಿಸಿದೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ












Click it and Unblock the Notifications