ಸಂಸತ್ತಿನ ಮುಂಗಾರು ಅಧಿವೇಶನ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿರುವ ವಿಪಕ್ಷಗಳು
ನವದೆಹಲಿ, ಜುಲೈ. 25: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ಮೂರು ದಿನಗಳು ರದ್ದಾದ ನಂತರ, ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ (ಇಂಡಿಯಾ) ಗುಂಪು ನಿರ್ಧರಿಸಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಮಂಗಳವಾರ ಹೇಳಿದ್ದಾರೆ.
ಮಣಿಪುರ ವಿಷಯದ ಕುರಿತು ಸಂಸತ್ತಿನಲ್ಲಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ. "ನಮ್ಮ ವಿವಿಧ ಮನವಿಗಳ ಹೊರತಾಗಿಯೂ, ಮೇ 3 ರ ನಂತರ ಮಣಿಪುರದಲ್ಲಿ ನಡೆದ ಬೆಳವಣಿಗೆಗಳು ಮತ್ತು ಅದನ್ನು ತಡೆಯಲು ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾಗಿ ಹೇಳಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರಾಕರಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಲು ಪ್ರಧಾನಿಯನ್ನು ಒತ್ತಾಯಿಸಲು ನಮಗೆ ಲಭ್ಯವಿರುವ ಏಕೈಕ ಸಂಸದೀಯ ಸಾಧನ ಇದಾಗಿದೆ" ಎಂದು ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸಂಖ್ಯೆ ಸ್ಪಷ್ಟವಾಗಿಲ್ಲದಿದ್ದರೂ, ಈ ವಿಷಯವನ್ನು ಪ್ರಸ್ತಾಪಿಸಲು ಇದು ಸರಿಯಾದ ವೇದಿಕೆ ಎಂದು ಪಕ್ಷಗಳು ಭಾವಿಸಿವೆ. ಮಣಿಪುರದ ಬಗ್ಗೆ ಚರ್ಚೆಯ ನಂತರ ಪ್ರಧಾನಿ ಹೇಳಿಕೆ ನೀಡಿದಾಗ ಮಾತ್ರ ಸಂಸತ್ತು ಕಾರ್ಯನಿರ್ವಹಿಸುತ್ತದೆ ಎಂದು ವಿರೋಧ ಪಕ್ಷಗಳು ಹೇಳಿವೆ. ರಾಜ್ಯಸಭೆಯಲ್ಲಿ, ಪ್ರತಿಪಕ್ಷಗಳು ನಿಯಮ 267 ರ ಅಡಿಯಲ್ಲಿ 51 ನೋಟಿಸ್ಗಳನ್ನು ಮಂಡಿಸಿವೆ. ಇದು ಪ್ರಸ್ತುತ ವಿಷಯವಾದ ಮಣಿಪುರದ ಬಗ್ಗೆ ಚರ್ಚೆಯನ್ನು ನಡೆಸಲು ದಿನದ ವ್ಯವಹಾರವನ್ನು ಅಮಾನತುಗೊಳಿಸುವ ಅಗತ್ಯವಿದೆ.
ಏನಿದು ಅವಿಶ್ವಾಸ ನಿರ್ಣಯ...?
ಅವಿಶ್ವಾಸ ನಿರ್ಣಯವನ್ನು ಲೋಕಸಭೆಯಲ್ಲಿ ಮತ್ತು ಸದನದ ಯಾವುದೇ ಸದಸ್ಯರು ಮಾತ್ರ ಮಂಡಿಸಬಹುದು. ಸದಸ್ಯರು ಬೆಳಗ್ಗೆ 10 ಗಂಟೆಗೆ ಮೊದಲು ಲಿಖಿತ ಸೂಚನೆಯನ್ನು ನೀಡಬೇಕು. ಕನಿಷ್ಠ 50 ಸದಸ್ಯರು ಪ್ರಸ್ತಾವನೆಯನ್ನು ಅಂಗೀಕರಿಸಬೇಕು. ನಂತರ ಸಭಾಧ್ಯಕ್ಷರು ಪ್ರಸ್ತಾವನೆಯ ಚರ್ಚೆಯ ದಿನಾಂಕವನ್ನು ನಿರ್ಧರಿಸುತ್ತಾರೆ. ಲೋಕಸಭೆಯಲ್ಲಿ ಬಹುಮತದ ಬೆಂಬಲವನ್ನು ಹೊಂದಿರುವಾಗ ಮಾತ್ರ ಸರ್ಕಾರವು ಕಾರ್ಯನಿರ್ವಹಿಸುತ್ತದೆ. ಬಹುಮತ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರುವ ಪಕ್ಷವು ರಾಜೀನಾಮೆ ನೀಡಬೇಕಾಗುತ್ತದೆ.

ಅವಿಶ್ವಾಸ ನಿರ್ಣಯದ ಬಗ್ಗೆ ತಿಳಿಯಬೇಕಾದ ಎಂಟು ವಿಷಯಗಳು
1. ಸ್ವಾತಂತ್ರ್ಯ ನಂತರ ಲೋಕಸಭೆಯಲ್ಲಿ 27 ಅವಿಶ್ವಾಸ ನಿರ್ಣಯಗಳನ್ನು ಮಂಡಿಸಲಾಗಿದೆ.
2. 1962 ರ ಯುದ್ಧದಲ್ಲಿ ಚೀನಾಕ್ಕೆ ಸೋತ ತಕ್ಷಣ, ಆಗಸ್ಟ್ 1963 ರಲ್ಲಿ ಕಾಂಗ್ರೆಸ್ ನಾಯಕ ಆಚಾರ್ಯ ಕೃಪಲಾನಿ ಅವರು ಪ್ರಧಾನಿ ಜವಾಹರಲಾಲ್ ನೆಹರು ವಿರುದ್ಧ ಮೊದಲ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದರು.
3. ಇಂದಿರಾ ಗಾಂಧಿಯವರು ಪ್ರಧಾನಿಯಾಗಿ ಅತಿ ಹೆಚ್ಚು ಅವಿಶ್ವಾಸ ನಿರ್ಣಯಗಳನ್ನು ಎದುರಿಸಿದ್ದಾರೆ. ಬರೋಬ್ಬರಿ 15 ಅವಿಶ್ವಾಸ ನಿರ್ಣಯಗಳನ್ನು ಅವರ ವಿರುದ್ಧ ಮಂಡಿಸಲಾಗಿದೆ. ಆದರೆ, ಅವರು ಪ್ರತಿ ಬಾರಿಯು ಗೆದಿದ್ದಾರೆ.. ಪಶ್ಚಿಮ ಬಂಗಾಳದ ಮಾಜಿ ಸಿಎಂ ಸಿಪಿಐ(ಎಂ)ನ ಜ್ಯೋತಿರ್ಮಯ್ ಬಸು ಅವರು ನಾಲ್ಕು ಅವಿಶ್ವಾಸ ನಿರ್ಣಯ ಮಂಡಿಸಿದ್ದರು.
4. ನರಸಿಂಹರಾವ್ ಮೂರು ಅವಿಶ್ವಾಸ ನಿರ್ಣಯಗಳನ್ನು ಎದುರಿಸಬೇಕಾಯಿತು. ಮೊರಾರ್ಜಿ ದೇಸಾಯಿ ಎರಡು ಮತ್ತು ಜವಾಹರಲಾಲ್ ನೆಹರು, ರಾಜೀವ್ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಎಲ್ಲರೂ ಒಂದನ್ನು ಎದುರಿಸಿದ್ದಾರೆ.
5. 2003 ರಲ್ಲಿ ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಾಜಪೇಯಿ ವಿರುದ್ಧದ ನಿರ್ಣಯವನ್ನು ಮಂಡಿಸಿದ್ದರು.
6. ಸದನದ ಬಹುಮತವನ್ನು ಮೂರು ಬಾರಿ ಸಾಬೀತುಪಡಿಸಬೇಕಾದ ಲಾಲ್ ಬಹದ್ದೂರ್ ಶಾಸ್ತ್ರಿ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲಿನ ಸುದೀರ್ಘ ಚರ್ಚೆಯ ಅವಧಿ 24.34 ಗಂಟೆಗಳು.
7. 1979ರಲ್ಲಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ರಾಜೀನಾಮೆ ನೀಡಬೇಕಾಯಿತು. 1999ರಲ್ಲಿ ತಮ್ಮ ಮಿತ್ರಪಕ್ಷವಾದ ಎಐಎಡಿಎಂಕೆ ಮೈತ್ರಿಕೂಟದಿಂದ ಹಿಂದೆ ಸರಿದ ನಂತರ ವಾಜಪೇಯಿ ಸರ್ಕಾರ ಅಧಿಕಾರ ಕಳೆದುಕೊಂಡಿದ್ದು, ಹೊರತುಪಡಿಸಿ ಹೆಚ್ಚಿನ ಅವಿಶ್ವಾಸ ನಿರ್ಣಯಗಳು ಸೋಲು ಕಂಡಿವೆ.
8. 2018 ರಲ್ಲಿ, ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯವನ್ನು 195 ಮತಗಳಿಂದ ಗೆಲುವು ಕಂಡಿತ್ತು. 135 ಸದಸ್ಯರು ಬೆಂಬಲಿಸಿದರೆ, 330 ಸಂಸದರು ಅದನ್ನು ತಿರಸ್ಕರಿಸಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications