ಲೋಕಸಭೆ ಚುನಾವಣೆ 2024: ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿರುವ ನಿತೀಶ್ ಕುಮಾರ್
ನವದೆಹಲಿ, ಮೇ.09: 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಮೈತ್ರಿಗೆ ಸಮಾನ ಮನಸ್ಕ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜು ಜನತಾ ದಳದ ಮುಖ್ಯಸ್ಥ ನವೀನ್ ಪಟ್ನಾಯಕ್ ಅವರನ್ನು ಭುವನೇಶ್ವರದಲ್ಲಿ ಭೇಟಿಯಾಗಲಿದ್ದಾರೆ.
ನಿತೀರ್ಶ ಕುಮಾರ್ ತಮ್ಮ ಉಪಮುಖ್ಯಮಂತ್ರಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರೊಂದಿಗೆ ಇತ್ತೀಚೆಗೆ ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದರು. ಕೆಲವು ದಿನಗಳ ಹಿಂದೆ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದ್ದರು. ನಿತೀಶ್ ಕುಮಾರ್ ಗುರುವಾರ ಮುಂಬೈನಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಲಿದ್ದಾರೆ.

ಮಾಜಿ ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್ ಅವರಂತೆ ನವೀನ್ ಪಟ್ನಾಯಕ್ ಕೂಡ ದೇಶದ ಯಾವುದೇ ರಾಜ್ಯಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಅವರು 2008 ರಲ್ಲಿ ಎನ್ಡಿಎಯಿಂದ ಹೊರಬಂದ ನಂತರ ಅವರು ಕಾಂಗ್ರೆಸ್ ಮತ್ತು ಬಿಜೆಪಿಯಿಂದ ದೂರ ಉಳಿಯಲು ಪ್ರಯತ್ನಿಸಿದ್ದಾರೆ. ಆದರೂ, ಸಂಸತ್ತಿನಲ್ಲಿ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರದಲ್ಲಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದಾರೆ.
ನಿತೀಶ್ ಕುಮಾರ್ ಅವರು ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದಾಗ, ಅವರು ಬಿಹಾರದಲ್ಲಿ ಬಿಜೆಪಿಯನ್ನು ವಿರೋಧಿಸುವ ಬಿಜೆಪಿಯೇತರ ಸರ್ಕಾರಗಳ ನಾಯಕರ ಸಭೆಯನ್ನು ನಡೆಸುವಂತೆ ಕೇಳಿಕೊಂಡರು. ಈ ಸಭೆ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ನಡೆಯಬಹುದು ಎಂದು ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ.

ನಿತೀಶ್ ಕುಮಾರ್ ಅವರು ಮೇ 18 ರಂದು ದೆಹಲಿಯಲ್ಲಿ ಎಲ್ಲಾ ವಿರೋಧ ಪಕ್ಷದ ನಾಯಕರ ದೊಡ್ಡ ಸಭೆಯನ್ನು ಯೋಜಿಸುತ್ತಿದ್ದಾರೆ. ಶರದ್ ಪವಾರ್ ಅವರು ತಮ್ಮ ಪತ್ರಿಕಾಗೋಷ್ಠಿಯಲ್ಲಿ ನಿತೀಶ್ ಕುಮಾರ್ ಅವರ ಜೊತೆಗಿನ ಭೇಟಿಯನ್ನು ಖಚಿತಪಡಿಸಿದ್ದಾರೆ.
ಕಳೆದ ವರ್ಷ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಪಣ ತೊಟ್ಟಿದ್ದ ಬಿಹಾರ ಮುಖ್ಯಮಂತ್ರಿ, ತಮ್ಮ 'ವಿರೋಧ ಪಕ್ಷಗಳ ಒಗ್ಗಟ್ಟಿನ ಅಭಿಯಾನ'ದ ಭಾಗವಾಗಿ ಹಲವು ಸ್ಥಳಗಳಲ್ಲಿ ಪ್ರವಾಸ ಮಾಡಿ ವಿವಿಧ ರಂಗಗಳ ರಾಜಕೀಯ ನಾಯಕರನ್ನು ಭೇಟಿ ಮಾಡಿದ್ದಾರೆ. ಇದಕ್ಕೂ ಮುನ್ನ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಇತರರನ್ನು ಭೇಟಿ ಮಾಡಿದ್ದಾರೆ.












Click it and Unblock the Notifications