ವೆಮುಲಾ ತಾಯಿಯನ್ನು ರಾಜಕೀಯಕ್ಕೆ ಬಳಸಲಾಗುತ್ತಿದೆ: ಬಿಜೆಪಿ
ನವದೆಹಲಿ, ಜೂನ್ 20: 'ರೋಹಿತ್ ವೆಮುಲಾ ತಾಯಿ ರಾಧಿಕಾ ವೆಮುಲಾ ಅವರನ್ನು ವಿಪಕ್ಷಗಳು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿವೆ' ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವೆಮುಲಾ ತಾಯಿಗೆ ಸುಳ್ಳು ಆಶ್ವಾಸನೆಗಳನ್ನು ನೀಡಿದೆ. ಅಲ್ಲದೆ, ಆಡಳಿತ ಪಕ್ಷದ ವಿರುದ್ಧ ಅವರನ್ನು ಎತ್ತಿಕಟ್ಟುತ್ತಿದೆ ಎಂದು ಹೇಳಿದರು.
ಹೈದರಾಬಾದ್ ವಿವಿಯ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ತಮ್ಮ ಹಾಸ್ಟೆಲ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು, ಈ ವಿಷಯ ದೇಶದಾದ್ಯಂತ ಚರ್ಚೆಯಾಗಿ, ವಿವಾದ ಸೃಷ್ಟಿಸಿತ್ತು.

ವೆಮುಲಾ ಸಾವಿನ ನಂತರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ವೆಮುಲಾ ಕುಟುಂಬಕ್ಕೆ 20 ಲಕ್ಷ ರೂ.ಗಳನ್ನು ನೀಡುವುದಾಗಿ ಮಾತುಕೊಟ್ಟಿತ್ತು.
ಕಂತುಗಳ ಮೇಲೆ ಈ ಹಣ ನೀಡುತ್ತಿದ್ದ ಐಯುಎಂಎಲ್ ನೀಡಿದ್ದ ಚೆಕ್ ವೊಂದು ಬೌನ್ಸ್ ಆಗಿತ್ತು. ಇದರಿಂದಾಗಿ ಇರಿಸುಮುರಿಸನುಭವಿಸಿದ ವೆಮುಲಾ ತಾಯಿ, ಐಯುಎಂಎಲ್ ಗೆ ನಮಗೆ ಹಣ ನೀಡಲು ಇಷ್ಟವಿಲ್ಲದಿದ್ದರೆ ನೇರವಾಗಿ ಹೇಳಲಿ. ಹೀಗೆ ಸತಾಯಿಸುವ ಅಗತ್ಯವಿಲ್ಲ' ಎಂದಿದ್ದರು.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ವೆಮುಲಾ ತಾಯಿ ಮಾತನಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಗೋಯಲ್, 'ಇವೆಲ್ಲ ವಿಪಕ್ಷಗಳ ಕುತಂತ್ರ. ಬೇಕೆಂದೇ ವೆಮುಲಾ ತಾಯಿಯವರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಲಾಗುತ್ತಿದೆ' ಎಂದು ಅವರು ದೂರಿದ್ದರು.
ರಾಧಿಕಾ ವೆಮುಲಾ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಧಿಕಾ ವೆಮುಲಾ, 'ನಾನು ಪ್ರಧಾನಿ ಮೋದಿಯವರ ವಿರುದ್ಧವಾಗಲೀ, ಬಿಜೆಪಿ ವಿರುದ್ಧವಾಗಲೀ ಮಾತನಾಡಿದ್ದು ನನ್ನ ಸ್ವಂತ ಅಭಿಪ್ರಾಯ. ಯಾರ ಮಾತನ್ನೂ ಕೇಳಿ ನಾನು ಹೀಗೆ ಮಾಡಿಲ್ಲ. ನನ್ನನ್ನು ವಿಪಕ್ಷಗಳು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿವೆ ಎಂಬ ಮಾತು ಸುಳ್ಳು ಎಂದು ರಾಧಿಕಾ ವೆಮುಲಾ ಸಮಜಾಯಿಷಿ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications